ಮಣಿಪಾಲ: ಮೀನಿಗೆ ಗಾಳ ಹಾಕುತ್ತಿದ್ದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು
Team Udayavani, Sep 15, 2022, 7:42 PM IST
ಮಣಿಪಾಲ: ಇಲ್ಲಿನ ಮಣ್ಣಪ್ಪಳ್ಳ ಕೆರೆಯಲ್ಲಿ ಮೀನಿಗೆ ಗಾಳ ಹಾಕುತ್ತಿದ್ದ ವ್ಯಕ್ತಿಯೊಬ್ಬ ಮುಳುಗಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ಮೃತ ವ್ಯಕ್ತಿ ಕುಂದಾಪುರ ಮೂಲದ ಪ್ರಕಾಶ್ (35)ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಮಣಿಪಾಲ ಠಾಣೆಯ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಪುತ್ತೂರು: ಮಹಿಳೆಗೆ ಲೈಂಗಿಕ ಕಿರುಕುಳ: ಯುವಕನ ಬಂಧನ
ಸ್ಥಳದಲ್ಲಿ ಗಾಳ ಹಾಕಲು ಉಪಯೋಗಿಸುವ ಪರಿಕರಗಳು ದೊರಕಿದ್ದ ಹಿನ್ನಲೆಯಲ್ಲಿ, ವ್ಯಕ್ತಿ ರಾತ್ರಿ ಗಾಳ ಹಾಕಲು ಬಂದಿರಬಹುದೆಂದು ಅಂದಾಜಿಸಲಾಗಿದ್ದು, ಆಯತಪ್ಪಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್, ಠಾಣಾಧಿಕಾರಿ ರಾಜಶೇಖರ್ ಆಗಮಿಸಿ ಪರಿಶೀಲಿಸಿದರು. ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಕೊಂಡೊಯ್ಯಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು.