Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ
Team Udayavani, Apr 30, 2024, 8:15 PM IST
ಮಣಿಪಾಲ: ಬ್ಯಾಂಕ್ನಲ್ಲಿ ಹಣವಿಲ್ಲದಿದ್ದರೂ ವ್ಯಕ್ತಿಯೊಬ್ಬರಿಗೆ ಚೆಕ್ ನೀಡಿ ಬೌನ್ಸ್ ಆದ ಘಟನೆ ನಡೆದಿದೆ.
ಮಣಿಪಾಲದ ಸುನೀಲ್ ಅವರಿಗೆ ಒಎಲ್ಎಕ್ಸ್ನಲ್ಲಿ ಶ್ರೀನಿವಾಸ ಅವರ ಪರಿಚಯವಾಗಿ ಕಾರು ಮಾರಾಟ ಮಾಡುವ ಬಗ್ಗೆ ಮಾತುಕತೆ ನಡೆದಿತ್ತು. ಅದರಂತೆ ಎ. 8ರಂದು ಕಾರಿನ ಬಗ್ಗೆ ಫೋನ್ನಲ್ಲಿ ಮಾತುಕತೆ ಮಾಡಿ 1,60,000 ರೂ. ನಗದು ನೀಡಿ ಕಾರನ್ನು ತೆಗೆದುಕೊಂಡು ಹೋಗುವುದಾಗಿ ಒಪ್ಪಿಕೊಂಡಿದ್ದರು.
ಎ. 9ರಂದು ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಆರೋಪಿ ಟಿ. ಶ್ರೀನಿವಾಸ ಅವರು ಸುನಿಲ್ ಅವರಿಗೆ 10 ಸಾವಿರ ರೂ. ನಗದು ನೀಡಿ ಬಳಿಕ ಗೂಗಲ್ ಪೇ ಮೂಲಕ 40 ಸಾವಿರ ರೂ. ನೀಡಿದ್ದರು. ಬಳಿಕ 2 ಚೆಕ್ ನೀಡಿ ಎ. 9ರ ರಾತ್ರಿ ಕಾರನ್ನು ತೆಗೆದುಕೊಂಡು ಹೋಗಿದ್ದರು.
ಎ. 10ರಂದು ಸುನೀಲ್ ಅವರು ಬ್ಯಾಂಕ್ಗೆ ಹೋಗಿ ಆರೋಪಿ ಟಿ. ಶ್ರೀನಿವಾಸ ಕೊಟ್ಟ ಚೆಕ್ ಅನ್ನು ಪರಿಶೀಲಿಸಿದಾಗ 2 ಚೆಕ್ಗೆ ಸಂಬಂಧಿಸಿದ ಖಾತೆಯಲ್ಲಿ ಹಣವಿರಲಿಲ್ಲ. ಈ ಬಗ್ಗೆ ಆತನಿಗೆ ಕರೆ ಮಾಡಿ ವಿಚಾರಿಸಿದಾಗ ಆತ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾನೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!