ಕೆಳಪರ್ಕಳ: ರಸ್ತೆ ದುಃಸ್ಥಿತಿಯಿಂದ ಸವಾರರು ತತ್ತರ
ವಾರದೊಳಗೆ ಕಾಂಕ್ರೀಟ್ ರಸ್ತೆಗೆ ತಯಾರಿ ಶುರು
Team Udayavani, Jul 24, 2022, 12:25 PM IST
ಮಣಿಪಾಲ: ನಗರದೊಳಗೆ ಇರುವ ರಾ.ಹೆ (169ಎ) ರಸ್ತೆ ಅವ್ಯವಸ್ಥೆ ಸವಾರರ ಜೀವ ಹಿಂಡುತ್ತಿದೆ. ಕೆಳಪರ್ಕಳದ ರಸ್ತೆಯ ದುಃಸ್ಥಿತಿಯಿಂದ ವಾಹನ ಸವಾರರು ನಿತ್ಯ ತತ್ತರಿಸುವಂತಾಗಿದೆ. ಕೆಳಪರ್ಕಳದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ಒಂದೆಡೆ ಸಾಗುತ್ತಿದ್ದರೆ. ಇನ್ನೊಂದು ಕಡೆಯಲ್ಲಿ ತಾತ್ಕಾಲಿಕ ದುರಸ್ತಿಪಡಿಸಿದ್ದ ಹಳೆಯ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇಲ್ಲಿನ ಡಾಮರು ರಸ್ತೆ ಕುಸಿದು, ರಸ್ತೆಯಲ್ಲ ಕೆಸರುಮಯವಾಗಿ ಸಂಚಾರ ದುಸ್ತರವಾಗಿದೆ. ಸಾರ್ವಜನಿಕರು ಆತಂಕದಲ್ಲಿ ವಾಹನ ಚಲಾಯಿಸುವ ದುಃಸ್ಥಿತಿ ಎದುರಾಗಿದೆ.
ಈಗಾಗಲೇ ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಮಳೆ ಹೆಚ್ಚಾದಂತೆ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಸ್ತೆ ತಗ್ಗಿನಲ್ಲಿರುವುದರಿಂದ ರಾತ್ರಿ ವೇಳೆ ಮಳೆ ಸಮಯದಲ್ಲಿ ಚಾಲಕರಿಗೆ ರಸ್ತೆ ಪರಿಸ್ಥಿತಿ ಅರಿವಿಲ್ಲದೆ ಒಂದೇ ವೇಗದಲ್ಲಿ ಸಾಗಿದರೆ ಭೀಕರ ಅಪಘಾತ ಕಟ್ಟಿಟ್ಟ ಬುತ್ತಿ. ಈಗಾಗಲೇ ಸಾಕಷ್ಟು ಮಂದಿ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಕೆಳ ಪರ್ಕಳ ರಸ್ತೆಯನ್ನು ಕೆಸರು, ಧೂಳಿನಿಂದ ಮುಕ್ತಿ ಕಲ್ಪಿಸಲು ತಾತ್ಕಾಲಿಕ ನೆಲೆಯಲ್ಲಿ ಡಾಮರು ಹಾಕಿ ಅಭಿವೃದ್ಧಿಪಡಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ಆದರೆ ಮಳೆಗಾಲದ ಶುರುವಿನಲ್ಲೇ ರಸ್ತೆ ಒಂದು ಭಾಗದಲ್ಲಿ ಕುಸಿಯುತ್ತ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿತ್ತು.
ಸರಣಿ ಅಪಘಾತ/ಟ್ರಾಫಿಕ್ ಜಾಮ್
ರಸ್ತೆಯಲ್ಲಿ ಘನ ವಾಹನಗಳು ಅಪಘಾತ ಸಂಭವಿಸಿದ ಪರಿಣಾಮ ಸುಗಮ ಸಂಚಾರ ವ್ಯವಸ್ಥೆ ಸಾಧ್ಯವಾಗದೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿತ್ತು. ಇತ್ತೀಚೆಗೆ ಎರಡು ಟ್ರಕ್ಗಳು ಈ ರಸ್ತೆಯಲ್ಲಿ ಸಿಲುಕಿದ್ದರ ಪರಿಣಾಮ ದಿನವಿಡೀ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಹೈರಾಣಾಗಿದ್ದರು. ರಾತ್ರಿವೇಳೆ ಹಲವಾರು ಬಾರಿ ದ್ವಿಚಕ್ರವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ.
ಕಾಂಕ್ರೀಟ್ ರಸ್ತೆಯೊಂದೇ ಪರಿಹಾರ!
ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರ ತಾತ್ಕಾಲಿಕ ದುರಸ್ತಿಗೆ ಮುಂದಾಗಿ ಕೆಲವು ಪ್ರಯತ್ನಗಳನ್ನು ಮಾಡಲಾಗಿತ್ತು. ವೆಟ್ಮಿಕ್ಸ್, ಮಣ್ಣು-ಜಲ್ಲಿಪುಡಿ ತುಂಬಿಸಿದರೂ ಮಳೆಯಲ್ಲಿ ರಸ್ತೆ ಕುಸಿಯುತ್ತಿರುವ ಪರಿಣಾಮ ಪ್ರಸ್ತುತ ಪರಿಹಾರ ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಶಾಸಕ ಕೆ. ರಘುಪತಿ ಭಟ್ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸೂಚನೆ ನೀಡಿದಂತೆ ರಸ್ತೆಯ ಎರಡು ಬದಿಯಲ್ಲಿ ಕಾಂಕ್ರೀಟ್ ಸೈಡ್ ಸೇಫ್ಟಿ ವಾಲ್ ಮತ್ತು ಕಾಂಕ್ರೀಟ್ ಚರಂಡಿಯ ಜತೆ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗುತ್ತದೆ. ಪ್ರಾಥಮಿಕ ಹಂತದಲ್ಲಿ ಚರಂಡಿ ಕಾಮಗಾರಿ ಆರಂಭಗೊಂಡಿದ್ದು, ವಾರದೊಳಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿಕೊಡುವ ಬಗ್ಗೆ ರಾ. ಹೆ. ಪ್ರಾಧಿಕಾರದ ಎಂಜಿನಿಯರ್ ಭರವಸೆ ನೀಡಿದ್ದಾರೆ.
ಇಂದು ಪ್ರತಿಭಟನೆ
ರಸ್ತೆ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರ ಹಿಸಿ ಮನೋವೈದ್ಯ ಡಾ| ಪಿ. ವಿ. ಭಂಡಾರಿ ನೇತೃತ್ವದಲ್ಲಿ ಜು. 24 ರಂದು ಪರ್ಕಳ ಗೋಪಾಲಕೃಷ್ಣ ದೇವಸ್ಥಾನದ ಎದುರು ಸ್ಥಳೀಯರು, ವಾಹನ ಸವಾರರು ಸೇರಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಶೀಘ್ರ ಕಾಮಗಾರಿ ಪೂರ್ಣ: ನಿರಂತರ ಮಳೆ ಮತ್ತು ಮಣ್ಣಿನ ಕುಸಿತ ಪರಿಣಾಮ ಕೆಳಪರ್ಕಳ ರಸ್ತೆಗೆ ತಾತ್ಕಾಲಿಕ ದುರಸ್ತಿಯ ಎಲ್ಲ ಪ್ರಯತ್ನಗಳು ವಿಫಲವಾಗಿವೆ. ಕಾಂಕ್ರಿಟ್ ರಸ್ತೆಯೊಂದೇ ಪರಿಹಾರವಾಗಿದ್ದು, ರಾ. ಹೆ. ಪ್ರಾಧಿಕಾರದ ಎಂಜಿನಿಯರ್ಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಪ್ರಾಥಮಿಕ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. – ಕೆ. ರಘುಪತಿ ಭಟ್, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…