ಮರವಂತೆ ಬೀಚ್‌: ಬಂಡೆಗಲ್ಲು ಜಾರುತ್ತಿದೆ ಎಚ್ಚರ

ನದಿ -ಕಡಲಿನ ಮಧ್ಯೆ ಹಾದುಹೋಗುವ ಹೆದ್ದಾರಿಯಲ್ಲಿಲ್ಲ ಬೀದಿದೀಪ

Team Udayavani, Aug 5, 2022, 12:33 PM IST

9

ಮರವಂತೆ: ಆಗೊಮ್ಮೆ ಈಗೊಮ್ಮೆ ಮಳೆ ಬಿರುಸು ಪಡೆಯುತ್ತಿದ್ದರೂ, ಕಡಲ ಅಲೆಗಳ ಅಬ್ಬರ ಮಾತ್ರ ಕಡಿಮೆ ಯಾಗಿಲ್ಲ. ಅಲೆಗಳು ದಂಡೆಗೆ ಅಪ್ಪಳಿಸುತ್ತಿರುವುದರಿಂದ ಬೀಚ್‌ನಲ್ಲಿ ನಿರ್ಮಿಸಿದ ಟಿ ಮಾದರಿಯ ಟೆಟ್ರಾಫೈಡ್‌(ಬಂಡೆಗಲ್ಲಿ)ನ ತಡೆಗೋಡೆಯ ಪಾಚಿಗಟ್ಟಿ, ಜಾರು ತ್ತಿದ್ದು, ಪ್ರವಾಸಿಗರು ಮೈ ಮರೆತರೇ ಮಾತ್ರ ಅಪಾಯ ಕಟ್ಟಿಟ್ಟ ಬುಟ್ಟಿ. ಇನ್ನು ಈ ಬೀಚ್‌ ನುದ್ದಕ್ಕೂ ಹಾದುಹೋಗವ ಹೆದ್ದಾರಿಯಲ್ಲಿ ಬೀದಿ ದೀಪಗಳೇ ಇಲ್ಲ.

ಮರವಂತೆ ಬೀಚ್‌ ಮಳೆಗಾಲದಲ್ಲಿ ಪ್ರವಾಸಿಗರನ್ನು ಹೆಚ್ಚಾಗಿ ಸೆಳೆಯುತ್ತಿದೆ. ಇದು ಹೆದ್ದಾರಿಗೆ ಹೊಂದಿಕೊಂಡಿದ್ದು ಈ ಮಾರ್ಗವಾಗಿ ಸಂಚರಿಸುವವರು ಒಂದು ನಿಂತು, ಕಡಲ ಅಲೆಗಳ ಸೌಂದರ್ಯ ಆಸ್ವಾದಿಸುವುದು ಸಾಮಾನ್ಯ. ಆದರೆ ತಡೆಗೋಡೆಗೆ ಹಾಕಲಾದ ಟೆಟ್ರಾಫೈಡ್‌ಗಳಲ್ಲಿ ದಟ್ಟ ಪಾಚಿ ಕಟ್ಟಿದ್ದು, ಕಡಲ ಸೌಂದರ್ಯ ಸವಿಯಲು ಇಲ್ಲಿ ಹೆಜ್ಜೆ ಇರಿಸುವ ಪ್ರವಾಸಿಗರು ಎಚ್ಚರ ವಹಿಸುವುದು ಅತ್ಯವಶ್ಯಕ.

ಮೈ ಮರೆತರೆ ಅಪಾಯ

ತ್ರಾಸಿ-ಮರವಂತೆ ಬೀಚ್‌ನಲ್ಲಿ ಅಂದಾಜು 90 ಕೋ. ರೂ. ವೆಚ್ಚದಲ್ಲಿ ನಡೆದಿರುವ ಟಿ ಆಕಾರದ ತಡೆಗೋಡೆ ಮರವಂತೆ ಬೀಚ್‌ನ ಸೌಂದರ್ಯ ಇಮ್ಮಡಿಗೊಳಿಸಿದೆ. ಆದರೆ ಈ ತಡೆಗೋಡೆಯ ಕಲ್ಲುಗಳು ಅಲೆಗಳ ಹೊಡೆತಕ್ಕೆ ಸಿಲುಕಿ ಹಸಿರು ಪಾಚಿಗಳಿಂದ ಆವರಿಸಿಕೊಂಡಿದೆ. ಮರವಂತೆ ಬೀಚ್‌ ವ್ಯಾಪ್ತಿಯಲ್ಲಿರುವ ಎಲ್ಲ ತಡೆಗೋಡೆಯ ಬಂಡೆಗಳಲ್ಲಿ ದಪ್ಪನಾದ ಪಾಚಿ ಕುಳಿತಿದೆ. ಕಡಲ ಸೌಂದರ್ಯ ವೀಕ್ಷಿಸ ಲೆಂದು ಬರುವ ಮಂದಿ ತಡೆಗೋಡೆ ಬಂಡೆಯ ಮೇಲೆ ಹೆಜ್ಜೆಯಿರಿಸಿ ಮೈಮರೆ ತರೆ ಅಪಾಯದ ಸಾಧ್ಯತೆ ಇದೆ.

ಎಚ್ಚರಿಕೆ ಫಲಕಕ್ಕೆ ಬೆಲೆಯೇ ಇಲ್ಲ

ತ್ರಾಸಿ-ಮರವಂತೆ ಬೀಚ್‌ನುದ್ದಕ್ಕೂ ಪೊಲೀಸ್‌ ಇಲಾಖೆ ಹಾಗೂ ಪ್ರವಾಸೋ ದ್ಯಮ ಇಲಾಖೆಯಿಂದ ಎಚ್ಚರಿಕೆಯ ನಾಮ ಫಲಕ ಅಳವಡಿಸಿದೆ. ಆದರೆ ಪ್ರವಾಸಿಗರು ಮಾತ್ರ ಇದಕ್ಕೆ ಬೆಲೆಯೇ ಕೊಡುತ್ತಿಲ್ಲ. ಇದನ್ನು ತಿಳಿ ಹೇಳಲು ಅಥವಾ ಕಲ್ಲು ಬಂಡೆಗಳಿಗೆ ಇಳಿಯದಂತೆ ಎಚ್ಚರಿಸಲು ಇಲ್ಲಿ ಪ್ರವಾಸಿ ಮಿತ್ರರೇ ಇಲ್ಲದಂತಾಗಿದೆ.

ಬೀದಿ ದೀಪ ಅಳವಡಿಸಿ

ಮರವಂತೆಯಲ್ಲಿ ಅರಬೀ ಸಮುದ್ರ ಹಾಗೂ ಸೌಪರ್ಣಿಕ ನದಿಯ ಮಧ್ಯೆಯೇ ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುತ್ತದೆ. ಈ ಅಪೂರ್ವ ವಿದ್ಯಮಾನದ ಚಿತ್ರವನ್ನು ಕೆಲ ದಿನಗಳ ಹಿಂದೆ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿಯವರೇ ಟ್ವೀಟ್‌ ಮಾಡಿದ್ದರು. ಆದರೆ ಮರವಂತೆಯ ಹೆದ್ದಾರಿಯಲ್ಲಾಗಲಿ, ಅತ್ಯಾಕರ್ಷಕ ಬೀಚ್‌ ಬಳಿಯಾಗಲಿ ರಾತ್ರಿ ವೇಳೆ ಕಗ್ಗತ್ತಲ ಹಾದಿಯಾಗಿದೆ. ಸುಮಾರು 2 ಕಿ.ಮೀ. ದೂರದವರೆಗೂ ಬೀಚ್‌ ಬಳಿಯ ಹೆದ್ದಾರಿ ಯಲ್ಲಿ ಯಾವುದೇ ಬೆಳಕಿನ ವ್ಯವಸ್ಥೆಯಿಲ್ಲ. ಇಲ್ಲಿ ಬೀದಿ ದೀಪ ಅಳವಡಿಸಿದರೆ ರಾತ್ರಿ ವೇಳೆಯಲ್ಲಿ ಸಂಚರಿಸುವ ಸವಾರರು, ಪ್ರಯಾಣಿಕರಿಗೂ ಬೀಚ್‌ನ ಸೌಂದರ್ಯ ಕಾಣಲು ಅವಕಾಶ ಮಾಡಿಕೊಟ್ಟಂತಾಗಲಿದೆ. ಬೀಚ್‌,ಹೆದ್ದಾರಿ ಬದಿ ಫುಟ್‌ಪಾತ್‌ ಮಾಡಿದರೆ ಪ್ರವಾಸಿಗರಿಗೆ, ವಾಯು ವಿಹಾರಕ್ಕೆ ಬರುವವರಿಗೆ ಅನುಕೂಲವಾಗಲಿದೆ.

ಬೀಚ್‌ ಅಭಿವೃದ್ಧಿಗೆ ಯೋಜನೆ: ಮರವಂತೆಯ ಬೀಚ್‌ ಅಭಿವೃದ್ಧಿಗೆ ಈಗಾಗಲೇ ಡಿಪಿಆರ್‌ ಸಿದ್ಧಪಡಿಸಿ, ಸಮಗ್ರ ಯೋಜನೆ ರೂಪಿಸಿದ್ದು, ಅದಕ್ಕಾಗಿ 10 ಕೋ.ರೂ. ಅನುದಾನ ಬಿಡುಗಡೆ ಆಗಿದೆ. ಈ ಕಾರ್ಯ ಮುಂದಿನ ದಿನಗಳಲ್ಲಿ ಆಗಲಿದೆ. ಇದರಲ್ಲಿ ಬೆಳಕಿನ ವ್ಯವಸ್ಥೆ ಸಹಿತ ಎಲ್ಲ ಕಾಮಗಾರಿಯೂ ನಡೆಯಲಿದೆ. ಇಲ್ಲಿಗೆ ಒಬ್ಬರು ಪ್ರವಾಸಿ ಮಿತ್ರರನ್ನು ನಿಯೋಜಿಸಿದ್ದು, ಈ ಬಗ್ಗೆ ಪೊಲೀಸ್‌ ಇಲಾಖೆಗೆ ಜವಾಬ್ದಾರಿ ವಹಿಸಲಾಗಿದೆ.-ಕ್ಲಿಫರ್ಡ್‌ ಲೋಬೋ, ಸಹಾಯಕ ನಿರ್ದೇಶಕ ಪ್ರವಾಸೋದ್ಯಮ ಇಲಾಖೆ, ಉಡುಪಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.