ಉಡುಪಿ ಜಿಲ್ಲೆಯಲ್ಲಿಯೂ ಗಾಂಜಾ ನಶೆ; ಪೊಲೀಸರ ಕಣ್ಗಾವಲು; ಯುವ ಸಮುದಾಯ ಗುರಿ


Team Udayavani, Sep 5, 2020, 6:10 AM IST

ಉಡುಪಿ ಜಿಲ್ಲೆಯಲ್ಲಿಯೂ ಗಾಂಜಾ ನಶೆ; ಪೊಲೀಸರ ಕಣ್ಗಾವಲು; ಯುವ ಸಮುದಾಯ ಗುರಿ

ಸಾಂದರ್ಭಿಕ ಚಿತ್ರ

ಉಡುಪಿ/ಕುಂದಾಪುರ: ದೇಶ, ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ಡ್ರಗ್ಸ್‌ ದಂಧೆಯ ಕರಾಳ ಮುಖ ಕಳಚಿ ಬೀಳುತ್ತಿದೆ. ಜಿಲ್ಲೆ ಯಲ್ಲಿಯೂ ಗಾಂಜಾ ಸೇವನೆ ಮತ್ತು ಮಾರಾಟಗಾರರ ಪತ್ತೆಕಾರ್ಯ ಬಿರುಸು ಗೊಂಡಿದ್ದು ಗಾಂಜಾ ವ್ಯಸನಕ್ಕೆ ಬ್ರೇಕ್‌ ಹಾಕಲು ಪೊಲೀಸ್‌ ಇಲಾಖೆ ಸಕಲ ತಯಾರಿ ನಡೆಸಿದೆ.

ಕೊರೊನಾ ಹಾಗೂ ಲಾಕ್‌ಡೌನ್‌ನಿಂದಾಗಿ ಜನರು ಸಂಕಷ್ಟ ಅನುಭವಿಸುತ್ತಿದ್ದರೂ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಹಾಗೂ ಕೊಳ್ಳುವವರ ಸಂಖ್ಯೆ ವಿಪರೀತ ಏರಿಕೆಯಾಗಿದೆ. ಕಳೆದೆರಡು ವಾರಗಳಲ್ಲಿ ಭಾರೀ ಪ್ರಮಾಣದಲ್ಲಿ ಗಾಂಜಾ ಮಾರಾಟ ಮತ್ತು ಸೇವಿಸುವವರನ್ನು ಪೊಲೀಸರು ಬಂಧಿಸಿದ್ದಾರೆ. 2020ರ ಆರಂಭದಿಂದ ಸೆ.3ರ ವರೆಗೆ ಜಿಲ್ಲೆಯಲ್ಲಿ 166 ಪ್ರಕರಣಗಳು ದಾಖಲಾಗಿದ್ದು 166 ಮಂದಿಯನ್ನು ಎನ್‌ಡಿಪಿಎಸ್‌ ಕಾಯ್ದೆಯಡಿ ಬಂಧಿಸಲಾಗಿದೆ. 18,11,600 ರೂ.ಮೌಲ್ಯದ 62 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಯುವ ಸಮುದಾಯವೇ ಗುರಿ
ಡ್ರಗ್‌ ಪೆಡ್ಲರ್‌ಗಳು ಯುವಸಮುದಾ ಯವನ್ನೇ ಟಾರ್ಗೆಟ್‌ ಮಾಡಿಕೊಂಡಿದ್ದಾರೆ. ಬಂಧಿತರಾಗಿರುವ ಬಹುತೇಕ ಮಂದಿ 17ರಿಂದ 30ರ ವಯೋಮಾನದವರು ಎಂಬುವುದು ಕಳವಳಕಾರಿ ಮತ್ತು ಆತಂಕದ ಸಂಗತಿಯಾಗಿದೆ. ಸಣ್ಣಪುಟ್ಟ ಅಂಗಡಿಗಳು, ಶಾಲಾ ಕಾಲೇಜುಗಳು ಆವರಣ, ಐಶಾರಾಮಿ ರೆಸ್ಟೋರೆಂಟ್‌, ಪಾಳುಬಿದ್ದ ಜಾಗಗಳಲ್ಲಿ ಗಾಂಜಾ ವ್ಯಾಪಾರಗಳು ನಡೆಯುತ್ತಿವೆ.

ಹೊರಜಿಲ್ಲೆ, ರಾಜ್ಯದವರೇ ಅಧಿಕ!
ಜಿಲ್ಲೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ಹೆಚ್ಚಿನ ಪ್ರಮಾಣದಲ್ಲಿ ಗಾಂಜಾ ಪೂರೈಕೆಯಾಗುತ್ತಿವೆ. ಕೇರಳದಿಂದ ಮಂಗಳೂರು, ಉಡುಪಿ ಜಿಲ್ಲೆಗಳಿಗೆ ಮೀನಿನ ಲಾರಿಯಲ್ಲಿ ಗಾಂಜಾ ಸಾಗಿಸಲಾಗುತ್ತದೆ. ಶಿವಮೊಗ್ಗ ದಿಂದ ತರಕಾರಿ ಮೂಟೆಗಳಲ್ಲಿ ಗಾಂಜಾ ಸೇರಿಸಿ ಬಸ್ಸಿನಲ್ಲಿ ಪಾರ್ಸೆಲ್‌ ಮೂಲಕ ಸಾಗಿಸುವ ವ್ಯವಸ್ಥಿತ ಜಾಲಗಳಿವೆ. ಯಾರಿಗೂ ಅನುಮಾನ ಬಾರದಂತೆ ರೈಲುಗಳಲ್ಲಿ, ಬಸ್‌ಗಳಲ್ಲಿ ಪಾರ್ಸೆಲ್‌, ಕೊರಿಯರ್‌ ಹಾಗೂ ಪರಿಚಯಸ್ಥರ ಮೂಲಕ ಗಾಂಜಾ ಸರಬರಾಜು ನಿರಂತರವಾಗಿ ನಡೆಯುತ್ತಿದೆ.

ಗಾಂಜಾ ಸೇವನೆ ಪ್ರಕರಣವೂ ಹೆಚ್ಚಳ
ಗಾಂಜಾ ಮಾರಾಟದಂತೆ ಗಾಂಜಾ ಸೇವನೆಯೂ ಕಾನೂನು ಬಾಹಿರ ವಾಗಿದ್ದು ಅಂತಹವರನ್ನೂ ಪೊಲೀಸರು ಬಂಧಿಸು ತ್ತಿದ್ದಾರೆ. ಗಾಂಜಾ ಸೇವನೆಗೆ ಸಂಬಂಧಿಸಿ ದಂತೆ 2017ರಲ್ಲಿ 45 ಪ್ರಕರಣ ಗಳು ದಾಖಲಾಗಿದ್ದು, 58 ಮಂದಿಯನ್ನು ಬಂಧಿಸ ಲಾಗಿದೆ. 2018ರಲ್ಲಿ 89 ಪ್ರಕರಣಗಳು ದಾಖಲಾಗಿದ್ದು, 96 ಮಂದಿ ಯನ್ನು ಬಂಧಿಸಲಾಗಿದೆ. 2019ರಲ್ಲಿ 182 ಪ್ರಕರಣಗಳು ದಾಖಲಾಗಿದ್ದು, 190 ಮಂದಿಯನ್ನು ಬಂಧಿಸಲಾಗಿದೆ. 2020ರ ಸೆ.3ರ ವರೆಗೆ 119 ಪ್ರಕರಣಗಳು ದಾಖಲಾಗಿದ್ದು, 132 ಮಂದಿಯನ್ನು ಬಂಧಿಸಲಾಗಿದೆ.

ಪೂರ್ಣ ಅಧಿಕಾರ
ಕರಾವಳಿ ಭಾಗದಲ್ಲಿ ಅವ್ಯಾಹತವಾಗಿ ಗಾಂಜಾ ಸಾಗಾಟ ಮತ್ತು ಸೇವನೆ ನಡೆಯುತ್ತಿರುವುದರ ಬಗ್ಗೆ ಮಾಹಿತಿ ಇದೆ. ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರಿಗೆ ಸಂಪೂರ್ಣ ಅಧಿಕಾರ ಕೊಟ್ಟಿದ್ದೇನೆ. ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಮಾಡುವುದೇ ನಮ್ಮ ಗುರಿ.
ಬಸವರಾಜ ಬೊಮ್ಮಾಯಿ, ಗೃಹ ಸಚಿವರು

ವಿಶೇಷ ಸಮಿತಿ ರಚನೆ
ಮಾದಕ ವಸ್ತುಗಳ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆಗಳನ್ನೂ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಅಪರಾಧ ಪತ್ತೆದಳ ಹಾಗೂ ಸೆನ್‌ ಪೊಲೀಸರು ಈಗಾಗಲೇ ಆಯಾಕಟ್ಟಿನ ಸ್ಥಳಗಳ ಮೇಲೆ ನಿಗಾ ಇರಿಸಿದ್ದಾರೆ. ಈ ಬಗ್ಗೆ ವಿಶೇಷ ಸಮಿತಿಯನ್ನು ರಚಿಸಲಾಗಿದ್ದು 15 ದಿನಗಳಿಗೊಮ್ಮೆ ಸಭೆ ನಡೆಸಿ ಚರ್ಚಿಸಲಾಗುತ್ತಿದೆ.
-ಎನ್‌.ವಿಷ್ಣುವರ್ಧನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಉಡುಪಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.