![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು
Team Udayavani, Sep 20, 2020, 2:57 AM IST
![ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು](https://www.udayavani.com/wp-content/uploads/2020/09/MADKA-620x360.jpg)
ಉಡುಪಿ: ಆದಿಉಡುಪಿ ಜಂಕ್ಷನ್ ಸಮೀಪ ಮಟ್ಕಾ ಜುಗಾರಿ ಆಟದಲ್ಲಿ ನಿರತನಾಗಿದ್ದ ನಾಗರಾಜ ಪೂಜಾರಿ (59) ಯನ್ನು ಪೊಲೀಸರು ಬಂಧಿಸಿ, 720 ರೂ. ನಗದು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ
ಮಣಿಪಾಲ ಟೈಗರ್ ಸರ್ಕಲ್ ಬಸ್ಸು ನಿಲ್ದಾಣದ ಸಮೀಪ ಮಟ್ಕಾ ಜುಗಾರಿ ಆಟವಾಡುತ್ತಿದ್ದ ಬಾಲಕೃಷ್ಣ ನಾಯಕ್ (63) ನನ್ನು ಪೊಲೀಸರು ಬಂಧಿಸಿ, 630 ರೂ. ನಗದು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಇಬ್ಬರ ವಶ
ಕುಂದಾಪುರ: ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆನಗಳ್ಳಿ ಗ್ರಾಮದ ಕಳಿಂಜೆ ಬಸ್ ನಿಲ್ದಾಣ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಆನಗಳ್ಳಿಯ ಮಾಧವ ಮೊಗವೀರ (53) ನನ್ನು ಎಸ್ಐ ಸದಾಶಿವ ಗವರೋಜಿ ನೇತೃತ್ವದ ಕುಂದಾಪುರ ಪೊಲೀಸರ ತಂಡ ವಶಕ್ಕೆ ಪಡೆದಿದೆ. ಇನ್ನೊಂದು ಪ್ರಕರಣದಲ್ಲಿ ಬಳ್ಕೂರು ಗ್ರಾಮದ ಬಸ್ ನಿಲ್ದಾಣ ಬಳಿ ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಉಳ್ಳೂರಿನ ಗುರುರಾಜ್ (21) ನನ್ನು ಎಸ್ಐ ರಾಜ್ಕುಮಾರ್ ನೇತೃತ್ವದ ಕುಂದಾಪುರ ಗ್ರಾಮಾಂತರ ಪೊಲೀಸರ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಟಪಾಡಿ: ಓರ್ವನ ಬಂಧನ
ಕಾಪು: ಕಟಪಾಡಿ ಯೇಣಗುಡ್ಡೆ ಗ್ರಾಮದ ಶಿರ್ವ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟವಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಬೊಮ್ಮರಬೆಟ್ಟು ನಿವಾಸಿ ಪ್ರವೀಣ್ ಶೆಟ್ಟಿ (43) ಬಂಧಿತ ಆರೋಪಿ. ಆರೋಪಿಯಿಂದ ಮಟ್ಕಾ ಬರೆಯಲು ಬಳಸುತ್ತಿದ ಬಾಲ್ ಪೆನ್, ಮಟ್ಕಾ ಚೀಟಿ ಹಾಗೂ ನಗದು 7,600 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕ್ರೋಢಬೈಲೂರು
ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಕ್ರೋಢಬೈಲೂರು ಬಸ್ ನಿಲ್ದಾಣದ ಬಳಿ ಮಟ್ಕಾ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಂಕರನಾರಾಯಣ ಎಸ್ಐ ಶ್ರೀಧರ್ ನಾಯ್ಕ ಅವರು ದಾಳಿ ನಡೆಸಿ ಆರೋಪಿ ಶೇಖರ ಮೊಗವೀರ (38) ನನ್ನು ಬಂಧಿಸಿದ್ದಾರೆ. ಆರೋಪಿಯ ಬಳಿ ಇದ್ದ 740 ರೂ. ನಗದು , ಮಟ್ಕಾ ಚೀಟಿ ಮತ್ತು ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮುಂಡ್ಕಿನಜಡ್ಡು
ಬ್ರಹ್ಮಾವರ: ಮುಂಡ್ಕಿನಜಡ್ಡಿನಲ್ಲಿ ಶುಕ್ರವಾರ ಮಟ್ಕಾ ಜುಗಾರಿ ಆಟವಾಡುತ್ತಿದ್ದ ಆಲುಂಜೆಯ ಆನಂದ ಕುಲಾಲ್ನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 550 ರೂ. ನಗದು ಹಾಗೂ ಪರಿಕರ ಸ್ವಾಧೀನಪಡಿಸಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.