ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು


Team Udayavani, Sep 20, 2020, 2:57 AM IST

ಮಟ್ಕಾ: ಜಿಲ್ಲೆಯಾದ್ಯಂತ 7 ಮಂದಿ ಮೇಲೆ ಕೇಸು

ಉಡುಪಿ: ಆದಿಉಡುಪಿ ಜಂಕ್ಷನ್‌ ಸಮೀಪ ಮಟ್ಕಾ ಜುಗಾರಿ ಆಟದಲ್ಲಿ ನಿರತನಾಗಿದ್ದ ನಾಗರಾಜ ಪೂಜಾರಿ (59) ಯನ್ನು ಪೊಲೀಸರು ಬಂಧಿಸಿ, 720 ರೂ. ನಗದು ವಶಪಡಿಸಿಕೊಂಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ
ಮಣಿಪಾಲ ಟೈಗರ್‌ ಸರ್ಕಲ್‌ ಬಸ್ಸು ನಿಲ್ದಾಣದ ಸಮೀಪ ಮಟ್ಕಾ ಜುಗಾರಿ ಆಟವಾಡುತ್ತಿದ್ದ ಬಾಲಕೃಷ್ಣ ನಾಯಕ್‌ (63) ನನ್ನು ಪೊಲೀಸರು ಬಂಧಿಸಿ, 630 ರೂ. ನಗದು ವಶಪಡಿಸಿಕೊಂಡಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಇಬ್ಬರ ವಶ
ಕುಂದಾಪುರ: ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆನಗಳ್ಳಿ ಗ್ರಾಮದ ಕಳಿಂಜೆ ಬಸ್‌ ನಿಲ್ದಾಣ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಆನಗಳ್ಳಿಯ ಮಾಧವ ಮೊಗವೀರ (53) ನನ್ನು ಎಸ್‌ಐ ಸದಾಶಿವ ಗವರೋಜಿ ನೇತೃತ್ವದ ಕುಂದಾಪುರ ಪೊಲೀಸರ ತಂಡ ವಶಕ್ಕೆ ಪಡೆದಿದೆ. ಇನ್ನೊಂದು ಪ್ರಕರಣದಲ್ಲಿ ಬಳ್ಕೂರು ಗ್ರಾಮದ ಬಸ್‌ ನಿಲ್ದಾಣ ಬಳಿ ಮಟ್ಕಾ ಜುಗಾರಿ ಮೂಲಕ ಹಣ ಸಂಗ್ರಹಿಸುತ್ತಿದ್ದ ಉಳ್ಳೂರಿನ ಗುರುರಾಜ್‌ (21) ನನ್ನು ಎಸ್‌ಐ ರಾಜ್‌ಕುಮಾರ್‌ ನೇತೃತ್ವದ ಕುಂದಾಪುರ ಗ್ರಾಮಾಂತರ ಪೊಲೀಸರ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಟಪಾಡಿ: ಓರ್ವನ ಬಂಧನ
ಕಾಪು: ಕಟಪಾಡಿ ಯೇಣಗುಡ್ಡೆ ಗ್ರಾಮದ ಶಿರ್ವ ರಸ್ತೆ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟವಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಬೊಮ್ಮರಬೆಟ್ಟು ನಿವಾಸಿ ಪ್ರವೀಣ್‌ ಶೆಟ್ಟಿ (43) ಬಂಧಿತ ಆರೋಪಿ. ಆರೋಪಿಯಿಂದ ಮಟ್ಕಾ ಬರೆಯಲು ಬಳಸುತ್ತಿದ ಬಾಲ್‌ ಪೆನ್‌, ಮಟ್ಕಾ ಚೀಟಿ ಹಾಗೂ ನಗದು 7,600 ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕ್ರೋಢಬೈಲೂರು
ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಕ್ರೋಢಬೈಲೂರು ಬಸ್‌ ನಿಲ್ದಾಣದ ಬಳಿ ಮಟ್ಕಾ ಆಟಕ್ಕೆ ಹಣ ಸಂಗ್ರಹಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶಂಕರನಾರಾಯಣ ಎಸ್‌ಐ ಶ್ರೀಧರ್‌ ನಾಯ್ಕ ಅವರು ದಾಳಿ ನಡೆಸಿ ಆರೋಪಿ ಶೇಖರ ಮೊಗವೀರ (38) ನನ್ನು ಬಂಧಿಸಿದ್ದಾರೆ. ಆರೋಪಿಯ ಬಳಿ ಇದ್ದ 740 ರೂ. ನಗದು , ಮಟ್ಕಾ ಚೀಟಿ ಮತ್ತು ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಂಡ್ಕಿನಜಡ್ಡು
ಬ್ರಹ್ಮಾವರ: ಮುಂಡ್ಕಿನಜಡ್ಡಿನಲ್ಲಿ ಶುಕ್ರವಾರ ಮಟ್ಕಾ ಜುಗಾರಿ ಆಟವಾಡುತ್ತಿದ್ದ ಆಲುಂಜೆಯ ಆನಂದ ಕುಲಾಲ್‌ನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 550 ರೂ. ನಗದು ಹಾಗೂ ಪರಿಕರ ಸ್ವಾಧೀನಪಡಿಸಿ ಪ್ರಕರಣ ದಾಖಲಿಸಲಾಗಿದೆ.

Ad

ಟಾಪ್ ನ್ಯೂಸ್

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

ವಿಂಬಲ್ಡನ್‌ ಗೆಲ್ಲಬೇಕಾದರೆ ಅಲ್ಕರಾಜ್‌ ಅವರನ್ನು ಮಣಿಸಲೇಬೇಕಿತ್ತು: ಸಿನ್ನರ್‌

Australia Vs West Indies; ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

AUS Vs WI: ಕಿಂಗ್‌ಸ್ಟನ್‌ ಟೆಸ್ಟ್‌ : 181 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯ

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

T20 ತ್ರಿಕೋನ ಸರಣಿ: ದಕ್ಷಿಣ ಆಫ್ರಿಕಾಕ್ಕೆ ಗೆಲುವು

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Kaup: ಬಸ್‌ಗೆ ಕಾಯುತ್ತಿದ್ದಾಗ ಹೃದಯಾಘಾತ; ಕುಸಿದು ಬಿದ್ದು 57ರ ವ್ಯಕ್ತಿ ಸಾವು

arrest-lady

ನಿಟ್ಟೆ; ಹಾಸ್ಟೆಲ್‌ನಲ್ಲಿ ದ್ವೇಷ ಪ್ರಚೋದನೆ ಬರಹ: ವಿದ್ಯಾರ್ಥಿನಿ ಅರೆಸ್ಟ್

2

Kasaragod: ತಡೆಗೋಡೆಗೆ ಕಾರು ಢಿಕ್ಕಿ: ನಾಲ್ವರಿಗೆ ಗಾಯ

1-aa-parshu

ಪರಶುರಾಮ ಥೀಮ್ ಪಾರ್ಕ್ ವಿವಾದ; ಕಂಚಿನ ಬದಲು‌ ಹಿತ್ತಾಳೆ ಬಳಕೆ: ತನಿಖೆಯಲ್ಲಿ ಪತ್ತೆ

17

Udupi: ಹೋಂ ನರ್ಸ್‌ನಿಂದ ವಂಚನೆ; ರೋಗಿಯ ಖಾತೆಯಿಂದ 68,500 ರೂ. ವರ್ಗಾವಣೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಫಿಡೆ ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

FIDE ಮಹಿಳಾ ವಿಶ್ವಕಪ್‌ ಚೆಸ್‌: ಪ್ರಿ ಕ್ವಾರ್ಟರ್‌ಗೆ ದಿವ್ಯಾ, ಹಂಪಿ

suicide (2)

Mangaluru:ಕಾರು ಪಲ್ಟಿಯಾಗಿ ಗಂಭೀರ ಗಾಯಗೊಂಡ ಯುವಕ ಸಾ*ವು

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

Tokyo ಜಪಾನ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್ ಮೇಲೆ ನಿರೀಕ್ಷೆ

ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

IPL: ಸನ್‌ರೈಸರ್ ಹೈದರಾಬಾದ್‌ಗೆ ವರುಣ್‌ ಆರೋನ್‌ ಬೌಲಿಂಗ್‌ ಕೋಚ್‌

1-aa-aa-RSS

ಗುರುದಕ್ಷಿಣೆ ಸಮರ್ಪಿಸಿ ಕೊನೆಯುಸಿರೆಳೆದ ಆರೆಸ್ಸೆಸ್‌ ಕಾರ್ಯಕರ್ತ ಬಾಬು ದೇವಾಡಿಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.