ಉಡುಪಿ/ಮಂಗಳೂರು: 5, 8ನೇ ತರಗತಿ ಮೌಲ್ಯಾಂಕನ ಆರಂಭ
Team Udayavani, Mar 28, 2023, 7:00 AM IST
ಉಡುಪಿ/ಮಂಗಳೂರು: ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಮೌಲ್ಯಾಂಕನ ಪರೀಕ್ಷೆ ಆರಂಭವಾಗಿದ್ದು, ಜಿಲ್ಲೆಯ ಅಯಾ ಶಾಲಾ ಕೇಂದ್ರಿತವಾಗಿ ಪರೀಕ್ಷೆ ನಡೆದಿದೆ.
ವಿದ್ಯಾರ್ಥಿಗಳ ಕಲಿಕಾ ಸಾಮರ್ಥ ಅರಿಯಲು ಈ ಪರೀಕ್ಷೆ ನಡೆಯುತ್ತಿದೆ. ಈ ಪರೀಕ್ಷೆಯ ಆಧಾರದಲ್ಲಿ ಯಾವುದೇ ವಿದ್ಯಾರ್ಥಿಗಳನ್ನು ಉತ್ತೀರ್ಣ ಅಥವಾ ಅನುತ್ತೀರ್ಣಗೊಳಿಸುವುದು ಇರುವುದಿಲ್ಲ. ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುತ್ತದೆ. ಪರೀಕ್ಷೆಯ ಮೌಲ್ಯಾಂಕನದ ಆಧಾರದಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ಒತ್ತು ನೀಡಲಾಗುತ್ತದೆ. ಮೊದಲ ದಿನ ಎರಡೂ ತರಗತಿಗಳ ಪ್ರಥಮ ಭಾಷೆ (ಕನ್ನಡ, ಇಂಗ್ಲಿಷ್, ಹಿಂದಿ, ಅರೇಬಿಕ್, ಸಂಸ್ಕೃತ ಇತ್ಯಾದಿ) ಪರೀಕ್ಷೆಯಲ್ಲಿ ಶೇ.75ಕ್ಕೂ ಅಧಿಕ ಹಾಜರಾತಿ ದಾಖಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಮೌಲ್ಯಾಂಕನ ಪರೀಕ್ಷೆಯ ಅನಂತರ ನಿರ್ದಿಷ್ಟ ಮೌಲ್ಯಮಾಪನ ಕೇಂದ್ರಗಳಲ್ಲಿ ಉತ್ತರಪತ್ರಿಕೆ ಮೌಲ್ಯಮಾಪನ ನಡೆಸಿ, ಅಂಕಗಳನ್ನು ಗ್ರೇಡ್ಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಮೌಲ್ಯಾಂಕನ ಪರೀಕ್ಷೆಗೆ ಎಲ್ಲ ಸಿದ್ಧತೆ ನಡೆಸಲಾಗಿತ್ತು. ಶಾಲೆಗಳ ಮುಖ್ಯೋಪಾಧ್ಯಾಯರು ಸಿಆರ್ಸಿ ಕೇಂದ್ರಕ್ಕೆ ಆಗಮಿಸಿ ಪ್ರಶ್ನೆಪತ್ರಿಕೆ ಪಡೆದುಕೊಂಡು ಪರೀಕ್ಷಾ ಕೇಂದ್ರಕ್ಕೆ ತೆರಳಿದರು. ಬಳಿಕ ಉತ್ತರ ಪತ್ರಿಕೆಯನ್ನು ಪರೀಕ್ಷಾ ಕೇಂದ್ರದಿಂದ ಸಿಆರ್ಸಿ ಕೇಂದ್ರಕ್ಕೆ ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು