ಜಿಲ್ಲೆಯಲ್ಲಿ ಗರಿಷ್ಠ ಮತದಾನ : ಮತದಾನಕ್ಕೆ ಸಾಮಾಜಿಕ ಜಾಲತಾಣ ಪ್ರೇರಣೆ


Team Udayavani, Apr 21, 2019, 6:30 AM IST

garista-matadana

ಉಡುಪಿ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಸಾಮಾಜಿಕ ಜಾಲತಾಣಗಳು ಮುಖ್ಯ ಪಾತ್ರ ವಹಿಸಿದೆ. ವಾಟ್ಸ್‌ ಆ್ಯಪ್‌, ಫೇಸ್‌ ಬುಕ್‌, ಇನ್‌ಸ್ಟಾಗ್ರಾಂ, ಟ್ವೀಟರ್‌ನಲ್ಲಿ ಸಂಚಲನ ಮೂಡಿಸಿದ ಮತದಾನ ಸಂದೇಶವಿರುವ ವೀಡಿಯೋ ತುಣುಕು ಯುವ ಜನರಲ್ಲಿ ಮತದಾನದ ಭಾಗವಹಿಸುವಂತೆ ಪ್ರೇರಣೆ ನೀಡಿದೆ.

ಜಿಲ್ಲಾಡಳಿತ ಹಾಗೂ ಸ್ವೀಪ್‌ ಸಮಿತಿ ಲೋಕಸಭಾ ಚುನಾವಣೆಗೆ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಯುವ ಜನರ ಗಮನ ಮತದಾನದತ್ತ ಕೇಂದ್ರೀಕರಿಸುವಲ್ಲಿ ಯಶಸ್ವಿಯಾಗಿದೆ. ಸರಕಾರಿ ಹಾಗೂ ಖಾಸಗಿ ಕಂಪೆನಿಗಳೆಲ್ಲ ರಜೆ ಘೋಷಿಸಿರುವುದರಿಂದ ಮತದಾರರು ಮತಗಟ್ಟೆಯತ್ತ ದೌಡಾಯಿಸಿದ್ದರು.

ಲೈವ್‌ ಅನುಭವ
ಯುವಜನತೆ ಮತ ಚಲಾಯಿಸಿದ ಸಂಭ್ರಮವನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ತಾನೊಬ್ಬ ಭಾರತೀಯ ಹೆಮ್ಮೆಯ ಪ್ರಜೆ, ನಾನು ನನ್ನ ಹಕ್ಕು, ಕರ್ತವ್ಯ ಎರಡನ್ನೂ ಪ್ರಾಮಾಣಿಕವಾಗಿ ಚಲಾಯಿಸಿದ್ದೇನೆ ಎಂದು ಫೇಸ್‌ಬುಕ್‌ ಇನ್‌ಸ್ಟಾ ಗ್ರಾಂ ಲೈವ್‌ ಮೂಲಕ ಅನುಭವ ಹಂಚಿಕೊಂಡಿದ್ದಾರೆ.

ಶೇ. 60ರಷ್ಟು ಮತದಾರರು ಬೆರಳಿಗೆ ಹಾಕಿದ ಶಾಯಿ ಗುರುತನ್ನು ಸೆಲ್ಫಿ ತೆಗೆದು ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್‌ ಮಾಡುವ ಮೂಲಕ ಇತರರನ್ನು ಮತದಾನ ಮಾಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಿತ್ತು.

ಅಭಿಯಾನ ಗಮನಾರ್ಹ
ಯುವ ಜನತೆ ಜಾಗೃತವಾಗಿದೆ. ಈ ಬಾರಿ ಮತದಾನ ಪ್ರಮಾಣ ಹೆಚ್ಚಳವಾಗಲು ಸಾಮಾಜಿಕ ಜಾಲತಾಣ ಕೂಡ ಒಂದು ಮುಖ್ಯ ಕಾರಣವಾಗಿದೆ. ಜತೆಗೆ ಚುನಾವಣಾ ಆಯೋಗ ಸಾಮಾಜಿಕ ಜಾಲತಾಣಗಳಲ್ಲಿ ಕೈಗೊಂಡ ಜಾಗೃತಿ ಅಭಿಯಾನದ ಪಾತ್ರವೂ ಸಹ ಗಮನಾರ್ಹವಾಗಿದೆ.

ಅರಿವು ಮೂಡಿಸಬಲ್ಲ ತಾಣ
ಸಾಮಾಜಿಕ ಜಾಲತಾಣಗಳು ಕೇವಲ ಮೋಜಿನ ತಾಣಗಳಾಗಿ ಉಳಿದಿಲ್ಲ, ಇದೀಗ ಸುಶಿಕ್ಷಿತರಲ್ಲಿ ಅರಿವು ಮೂಡಿಸಬಲ್ಲ ತಾಣವಾಗಿ ಪರಿವರ್ತನೆಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಸೆಲ್ಫಿ ಸ್ಪರ್ಧೆ
ಕೊನೆ ಪಕ್ಷ ಮತದಾರರು ಬಹುಮಾನಕ್ಕಾಗಿ ಮತದಾನ ಮಾಡಲಿ ಎಂಬ ಆಶಯದಲ್ಲಿ ಕೆಲವೊಂದು ಫೇಸ್‌ ಬುಕ್‌ ಪೇಜ್‌ಗಳು ಸೆಲ್ಫಿ ವಿತ್‌ ವೋಟೆಡ್‌ ಫಿಂಗರ್‌ ಎಂಬ ಸ್ಪರ್ಧೆಯನ್ನು ಏರ್ಪಡಿಸಿವೆ.

ಕೆಲವು ಸಾಲುಗಳು
ನಾನು ಮತದಾನದ ಹಕ್ಕನ್ನು ಚಲಾಯಿಸಿದೆ. ನೀವು? ಪ್ರತಿಯೊಬ್ಬ ಮತದಾರ, ದೇಶದೊಳಗಿನ ಯೋಧನೇ, ದಯಮಾಡಿ ಪ್ರತಿಯೊಬ್ಬರೂ ಯೋಗ್ಯರಿಗೆ ಮತ ಹಾಕಿ. ನನ್ನ ಮತ ಅಭಿವೃದ್ಧಿ ಹರಿಕಾರನಿಗೆ, ಕುಂಟು ನೆಪ ಬೇಡ ಬಂದು ಮತ ಹಾಕಿ, ಮತದಾನ ನನ್ನ ಹಕ್ಕು, ಮತದಾನ ಮಾಡವರಿಗೆ ದೇಶದ ಬಗ್ಗೆ ಮಾತನಾಡುವ ಹಕ್ಕು ಇಲ್ಲ… ಹೀಗೆ ನೂರಾರು ಸಂದೇಶಗಳು ವಾಟ್ಸ್‌ ಆಪ್‌ ಹಾಗೂ ಫೇಸ್‌ ಬುಕ್‌ ವಾಲ್‌ನಲ್ಲಿ ಇತ್ತು.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.