ಡಿ ವರ್ಗದ 225 ನೌಕರರು ಅತಂತ್ರ

ನೇರ ನೇಮಕಾತಿಗೆ ಕನಿಷ್ಠ ವಿದ್ಯಾರ್ಹತೆ ಮಾನದಂಡ

Team Udayavani, Sep 19, 2019, 5:00 AM IST

q-37

ಸಾಂದರ್ಭಿಕ ಚಿತ್ರ

ಉಡುಪಿ: ಸರಕಾರದ ನೇರ ನೇಮಕಾತಿಯಲ್ಲಿ ಕನಿಷ್ಠ ವಿದ್ಯಾರ್ಹತೆ ಇಲ್ಲದೆ ಹಿಂದುಳಿದ ವರ್ಗಗಳ ಇಲಾಖೆ ವಿದ್ಯಾರ್ಥಿ ವಸತಿ ನಿಲಯದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 225 “ಡಿ’ ವರ್ಗದ ನೌಕರರು ಉದ್ಯೋಗ ಕಳೆದುಕೊಂಡಿದ್ದಾರೆ.

ಈ ನೌಕರರು ಒಂದು ದಶಕದಿಂದ ಅತ್ಯಂತ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಾ ಬಂದಿದ್ದಾರೆ. ಈಗ ಇಲಾಖೆಯು ಆ. 1ರ ಬಳಿಕ ಸೇವೆಗೆ ಹಾಜರಾಗದಂತೆ ತಿಳಿಸಿದ್ದು, ಹೊರ ಗುತ್ತಿಗೆ ನೌಕರರು ಸಮಸ್ಯೆಯಲ್ಲಿ ಸಿಲುಕಿದ್ದಾರೆ.

ಉಭಯ ಜಿಲ್ಲೆಗಳಲ್ಲಿ 114 ವಸತಿ ನಿಲಯ
ಹಿಂದುಳಿದ ವರ್ಗದ ಇಲಾಖೆಯಡಿ ಉಡುಪಿಯಲ್ಲಿ 41 ಮತ್ತು ದ.ಕ.ದಲ್ಲಿ 73 ಸೇರಿದಂತೆ ಒಟ್ಟು 114 ವಸತಿ ನಿಲಯಗಳಿವೆ. ಅವುಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸ್ವಚ್ಛತಾ ಕೆಲಸ, ಅಡುಗೆ ಸಿಬಂದಿ ಸೇರಿದಂತೆ ಉಡುಪಿಯಲ್ಲಿ 89 ಮತ್ತು ದ.ಕ.ದಲ್ಲಿ 136 ಹೊರ ಗುತ್ತಿಗೆ ನೌಕರರಿದ್ದಾರೆ.

ನೇರ ನೇಮಕಾತಿ
ಕಳೆದ ವರ್ಷ ಸರಕಾರ “ಡಿ’ ವರ್ಗದ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ 10ನೇ ತರಗತಿ ಪಾಸಾದ ಅಭ್ಯರ್ಥಿಗಳನ್ನು ನೇಮಿಸಿದೆ. ಈ ಕನಿಷ್ಠ ವಿದ್ಯಾರ್ಹತೆಯಿಲ್ಲದ ಕಾರಣ ಹೊರ ಗುತ್ತಿಗೆ ನೌಕರರು ನೇರ ನೇಮಕಾತಿ ಯಲ್ಲಿ ಭಾಗವಹಿಸಲು ಆಗಿರಲಿಲ್ಲ.

ಪ್ರತಿಭಟನೆ ನಡೆದಿತ್ತು
ಸರಕಾರದ ನೇಮಕಾತಿ ನೀತಿ ವಿರೋಧಿಸಿ ಕಳೆದ ವರ್ಷ ಈ ನೌಕರರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಅದರ ಫ‌ಲವಾಗಿ ಒಂದು ವರ್ಷ ಕೆಲಸ ಮಾಡಲು ಅವರಿಗೆ ಅವಕಾಶ ನೀಡಲಾಗಿತ್ತು. ಈಗ ಇಲಾಖೆಯು ಗುತ್ತಿಗೆ ನೌಕರರು ಕೆಲಸ ನಿರ್ವಹಿಸದಂತೆ ಆದೇಶ ನೀಡಿದೆ.

ಜುಲೈ ತಿಂಗಳ ವೇತನ ಸಿಕ್ಕಿಲ್ಲ
ಈ ನೌಕರರಿಗೆ ಜೂನ್‌ ವರೆಗಿನ ವೇತನ ಪಾವತಿಯಾಗಿದೆ. ಉಡುಪಿಯ ಬಿಸಿಎಂ ಹಾಸ್ಟೆಲ್‌ಗ‌ಳಲ್ಲಿ ನೌಕರರು ಸರಕಾರವು ತಮ್ಮ ಸೇವೆಯನ್ನು ಮುಂದುವರಿಸಬಹುದು ಎನ್ನುವ ನಂಬಿಕೆಯಲ್ಲಿ ಜುಲೈ ಪೂರ್ತಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು, ಅವರ ವೇತನ ಇನ್ನೂ ಪಾವತಿಯಾಗಿಲ್ಲ.

ಹೊರಗುತ್ತಿಗೆ ಡಿ ಗ್ರೂಪ್‌ ನೌಕರರನ್ನು ಹುದ್ದೆಯಿಂದ ಮುಕ್ತಗೊಳಿಸಿ, ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿರುವವರಿಗೆ ಅವಕಾಶ ನೀಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಹಿಂದುಳಿದ ವರ್ಗ ಇಲಾಖೆ ಆಯುಕ್ತರ ಹಾಗೂ ಕಾರ್ಯದರ್ಶಿಗಳಿಗೆ ಜತೆ ಮಾತುಕತೆ ನಡೆಸಲಾಗುತ್ತದೆ. ಮುಖ್ಯಮಂತ್ರಿಗಳ ಗಮಕ್ಕೆ ತರಲಾಗುತ್ತದೆ.
– ಕೋಟ ಶ್ರೀನಿವಾಸ ಪೂಜಾರಿ, ಸಚಿವರು

ದ.ಕ. ಜಿಲ್ಲೆಯಲ್ಲಿ ನೇರ ನೇಮಕಾತಿಯ ಮೂಲಕ 136 ಸಿಬಂದಿಗಳು ಪ್ರಸ್ತುತ ಕೆಲಸ ಮಾಡುತ್ತಿದ್ದಾರೆ. ಹೊರಗುತ್ತಿಗೆ ನೌಕರರ ಕೆಲಸ ಮುಂದುವರಿಸಲು ಮೂರನೇ ಬಾರಿ ಮನವಿ ಸಲ್ಲಿಸಲಾಗಿತ್ತು.
-ಸಚಿನ್‌ ಕುಮಾರ್‌, ಹಿಂದುಳಿದ ವರ್ಗಗಳ ಇಲಾಖಾಧಿಕಾರಿ, ದ.ಕ. ಜಿಲ್ಲೆ

ಅವಕಾಶ ನೀಡಿ
ಕೆಲಸಕ್ಕೆ ಹಾಜರಾಗದಂತೆ ಹೊರಗುತ್ತಿಗೆ ನೌಕರರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಕಡಿಮೆ ಸಂಬಳಕ್ಕೆ 9 ವರ್ಷ ಸೇವೆ ಸಲ್ಲಿಸಿದ್ದನ್ನು ಪರಿಗಣಿಸದೆ ಕೆಲಸದಿಂದ ವಜಾ ಮಾಡಲು ಆದೇಶ ನೀಡಿರುವುದು ಸರಿಯಲ್ಲ.
-ಗಜಾನನ, ಹಿಂದುಳಿದ ವರ್ಗದ , ಹಾಸ್ಟೆಲ್‌ ಹೊರಗುತ್ತಿಗೆ ನೌಕರ

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.