ಪರ್ಯಾಯೋತ್ಸವಕ್ಕೆ ಸ್ವಚ್ಛತೆಯ ಸ್ಪರ್ಶ: ಮೊಬೈಲ್ ಶೌಚಾಲಯ ಬಳಕೆಗೆ ಸಿದ್ಧ
ಎರಡು ಪಾಳಿಯಲ್ಲಿ ನಗರ ಸ್ವಚ್ಛತೆ
Team Udayavani, Jan 17, 2022, 1:33 AM IST
ಉಡುಪಿ: ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಪ್ರಯುಕ್ತ ನಗರಕ್ಕೆ ಹೊರ ಜಿಲ್ಲೆ, ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ನಗರಸಭೆ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿದೆ.
ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಭಕ್ತರು, ಪ್ರವಾಸಿಗರ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಮೊಬೈಲ್ ಶೌಚಾಲಯವನ್ನು ಅಲ್ಲಲ್ಲಿ ಇರಿಸಲಾಗಿದೆ.
ಗೋವಿಂದ ಕಲ್ಯಾಣ ಮಂಟಪ ಪಾರ್ಕ್ ಬಳಿ, ಕಿನ್ನಿಮುಲ್ಕಿ ದಾನ್ರೊ ಫರ್ನಿಚರ್, ತ್ರಿವೇಣಿ ಸರ್ಕಲ್ ಅಂಚೆ ಕಚೇರಿ ಸಮೀಪ, ಚಿತ್ತರಂಜನ್ ಸರ್ಕಲ್, ಕಲ್ಸಂಕ ಜಂಕ್ಷನ್ನಲ್ಲಿ ಸಿಂಗಲ್ಸೀಟ್ನ ಮೊಬೈಲ್ ಶೌಚಾಲಯ ಮತ್ತು 4 ಸೀಟರ್ನ ಎರಡು ಶೌಚಾಲಯವನ್ನು ಪಾಕಶಾಲೆ ಮತ್ತು ವಿದ್ಯೋದಯ ಶಾಲೆ ಬಳಿ ಇರಿಸಲಾಗಿದೆ.
ಶೌಚಾಲಯದಲ್ಲಿ ನೀರಿನ ಸೌಕರ್ಯವೂ ಇದೆ. ಪ್ರವಾಸಿಗರು, ಭಕ್ತರು ಸ್ವಚ್ಛತೆ ಗಮನದಲ್ಲಿರಿಸಿಕೊಂಡು ಮುಕ್ತವಾಗಿ ಬಳಕೆ ಮಾಡಬಹುದು.
100 ಮಂದಿ ಪೌರಕಾರ್ಮಿಕರ ತಂಡ ದಿಂದ ಎರಡು ಪಾಳಿಯಲ್ಲಿ ನಗರದ ಸ್ವಚ್ಛತಾ ಕಾರ್ಯ ಸಂಪೂರ್ಣ ಗೊಂಡಿದೆ. ಪರ್ಯಾಯ ಉತ್ಸವ ವೇಳೆ ಪೌರ ಕಾರ್ಮಿಕರ ತಂಡ ರಥಬೀದಿ ಮತ್ತು ರಥಬೀದಿ ಸಂಪರ್ಕಿಸುವ ರಸ್ತೆಗಳು, ಪರ್ಯಾಯ ಮೆರವಣಿಗೆ ರಸ್ತೆಯಲ್ಲಿ ಸ್ವಚ್ಛತ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಪರ್ಯಾಯ ಉತ್ಸವದಲ್ಲಿ ಕೋವಿಡ್ ಜಾಗೃತಿ ಮೂಡಿಸುವ ಸಲುವಾಗಿ ನಗರಸಭೆ ಮಾಹಿತಿ ಕೇಂದ್ರವನ್ನು ತೆರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ