ಮೆಸ್ಕಾಂನಿಂದ ಮಾದರಿ ವಿದ್ಯುತ್‌ ಗ್ರಾಮ: ಜಿಲ್ಲೆಯ 30 ಗ್ರಾಮಗಳು ಆಯ್ಕೆ


Team Udayavani, Sep 13, 2020, 4:46 AM IST

ಮೆಸ್ಕಾಂನಿಂದ ಮಾದರಿ ವಿದ್ಯುತ್‌ ಗ್ರಾಮ: ಜಿಲ್ಲೆಯ 30 ಗ್ರಾಮಗಳು ಆಯ್ಕೆ

ಸಾಂದರ್ಭಿಕ ಚಿತ್ರ

ಉಡುಪಿ: ವಿದ್ಯುತ್‌ ಶಕ್ತಿಯ ಸಮರ್ಥ ಬಳಕೆಗೆ ಕ್ರಮ ಕೈಗೊಂಡಿರುವ ರಾಜ್ಯ ಸರಕಾರವು ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ 5 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ರೂಪಿಸುವ ಯೋಜನೆಗೆ ಉಡುಪಿ ಜಿಲ್ಲೆಯ 30 ಗ್ರಾಮಗಳು ಆಯ್ಕೆಯಾಗಿವೆ. ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರು ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರು ಆಯ್ಕೆ ಮಾಡಿರುವ ಗ್ರಾಮಗಳಲ್ಲಿ ವಿದ್ಯುತ್‌ ಸಂಬಂಧಿತ ಕೆಲಸ ಕಾರ್ಯಗಳು ನಡೆಯಲಿವೆ. ಸ್ಥಳೀಯ ವಿದ್ಯುತ್‌ ಸಾಮರ್ಥ್ಯಕ್ಕೆ ಅನುಗುಣವಾಗಿ ವಿದ್ಯುತ್‌ ಪರಿವರ್ತಕ ಕೇಂದ್ರಗಳನ್ನು ಸ್ಥಾಪಿಸುವುದು ಮಾದರಿ ಗ್ರಾಮ ಯೋಜನೆಯ ಆದ್ಯತೆಯಾಗಿದೆ. ವಿದ್ಯುತ್‌ ಪೋಲಾಗದಂತೆ ತಡೆಗಟ್ಟುವ ಜತೆಗೆ ಎಲ್ಲ ಕಡೆಗಳಲ್ಲಿ ತ್ರೀ ಫೇಸ್‌ ವಿತರಣೆಗೆ ಮಾರ್ಗ ನಿರ್ಮಿಸುವ ಹಾಗೂ ನಿರಂತರ ವಿದ್ಯುತ್ಛಕ್ತಿ ಲಭ್ಯತೆಗೆ ವಿಕೇಂದ್ರಿಕೃತ ವಿತರಣೆ, ಉತ್ಪಾದನೆ ಸಹ ಯೋಜನೆಯಲ್ಲಿ ಒಳಗೊಂಡಿದೆ.
12 ಕೋ.ರೂ. ವೆಚ್ಚದ ಯೋಜನೆ
ಒಟ್ಟು 12 ಕೋ.ರೂ.ಯೋಜನೆಯ ಕಾಮಗಾರಿ ಇದಾಗಿದೆ. ಆಯ್ಕೆಯಾಗಿರುವ ಪ್ರತೀ ಗ್ರಾಮಗಳಲ್ಲಿ 40 ಲ.ರೂ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. ಟೋಟರ್‌ ಟರ್ನ್ ಕೀ ಪ್ರಾಜೆಕ್ಟ್ ಇದಾಗಿದ್ದು ಎಲ್ಲ ಸಾಮಗ್ರಿಗಳನ್ನು ಗುತ್ತಿಗೆದಾರರೇ ತರಲಿದ್ದಾರೆ. ಒಬ್ಬ ಗುತ್ತಿಗೆದಾರನಿಗೆ 1ರಿಂದ 2 ಗ್ರಾಮಗಳನ್ನು ನೀಡಲಾಗಿದೆ. ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದ್ದು, ಜನವರಿ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ. 1 ವರ್ಷಗಳ ಕಾಲ ಗುತ್ತಿಗೆದಾರರೇ ನಿರ್ವಹಣೆ ನೋಡಿಕೊಳ್ಳಲಿದ್ದಾರೆ. ಅನಂತರ ಮೆಸ್ಕಾಂಗೆ ಹಸ್ತಾಂತರ ನಡೆಯಲಿದೆ.
ನಡೆಯಲಿರುವ ಅಭಿವೃದ್ಧಿ ಕೆಲಸಗಳು
ಮಾದರಿ ವಿದ್ಯುತ್‌ ಗ್ರಾಮ ಯೋಜನೆಯು ವಿದ್ಯುತ್‌ ವ್ಯವಸ್ಥೆ ಬಲವರ್ಧನೆಗೆ ಆದ್ಯತೆ ನೀಡುತ್ತದೆ. ಅಪಾಯ ಕಾರಿ ಸ್ಥಿತಿಯಲ್ಲಿರುವ ವಿದ್ಯುತ್‌ ಕಂಬ, ಮಾರ್ಗ, ಪರಿವರ್ತಕ ದುರಸ್ತಿ ಮಾಡುವುದು, ಇಡೀ ಮಾರ್ಗಕ್ಕೆ ಸುರಕ್ಷಾ ವ್ಯವಸ್ಥೆ ಕಲ್ಪಿಸುವುದು, ಗ್ರಾಮದಲ್ಲಿ ಸೋಲಾರ್‌ ದೀಪ ಹಾಗೂ ಟೈಮರ್‌ ಸ್ವಿಚ್‌ ಅಳವಡಿಕೆ ಮೊದಲಾದ ಅಂಶಗಳನ್ನು ಒಳಗೊಂಡಿದೆ.
ಮಾದರಿ ಗ್ರಾಮ ಆಯ್ಕೆ ಹೇಗೆ?
ಅಗತ್ಯಕ್ಕೆ ಅನುಗುಣವಾಗಿ ಪ್ರತಿ ಹೋಬಳಿಗೆ ಒಂದು ಗ್ರಾಮದಂತೆ ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ 1000ದಿಂದ 2,000 ಜನಸಂಖ್ಯೆ ಇರುವ 5 ಗ್ರಾಮಗಳನ್ನು ಗುರುತಿಸಲಾಗುತ್ತದೆ. ಈ ಮೂಲಕ ಆ ಗ್ರಾಮಗಳಿಗೆ ಅನುದಾನ ಮೀಸಲಿಟ್ಟು ವಿದ್ಯುತ್‌ ಸುಸ್ಥಿತಿಗೆ ಆಗಬೇಕಾದ ಕ್ರಮ ಕೈಗೊಳ್ಳಲಾಗುತ್ತದೆ. ವಿದ್ಯುತ್‌ ಮಾರ್ಗ, ವಿದ್ಯುತ್‌ ಕಂಬ, ವಿದ್ಯುತ್‌ ಪರಿವರ್ತಕ ಸರಿಪಡಿಸುವುದು, ವೋಲ್ಟೆàಜ್‌ ತೊಂದರೆಯಾಗದಂತೆ ಅಗತ್ಯ ಪರಿವರ್ತಕ ಜೋಡಣೆ, ಹಳೆಯ ತಂತಿಗಳ ಬದಲಾವಣೆ, ಆಧುನಿಕ ರೀತಿಯಲ್ಲಿ ಬೀದಿ ದೀಪಗಳ ವ್ಯವಸ್ಥೆಗಳು ಈ ಯೋಜನೆಯಲ್ಲಿ ಇರಲಿದೆ.
ಗುರುತಿಸಲಾಗಿರುವ ಗ್ರಾಮಗಳು
ಕಾಪು ವಿಧಾನ ಸಭಾ ಕ್ಷೇತ್ರ
ಮಟ್ಟು, ಹೇರೂರು, ಪಿಲಾರು, ಮರ್ಣೆ, ಬೆಳ್ಳರ್ಪಾಡಿ
ಕಾರ್ಕಳ ವಿಧಾನ ಸಭಾ ಕ್ಷೇತ್ರ
ಹೆಬ್ರಿ, ವರಂಗ, ಸಾಣೂರು, ಬಜಗೋಳಿ, ನಿಟ್ಟೆ
ಉಡುಪಿ ವಿಧಾನಸಭಾ ಕ್ಷೇತ್ರ
ಮೂಡುತೋನ್ಸೆ, ಕಳತ್ತೂರು, ಹಲುವಳ್ಳಿ, ಕೆಂಜೂರು, ಹಾರಾಡಿ
ಕುಂದಾಪುರ ವಿಧಾನಸಭಾ ಕ್ಷೇತ್ರ
ಕಾಡೂರು, ಶಿರೂರು, ಅಮಾಸೆಬೈಲು, ಮಡಾಮಕ್ಕಿ, ಶೇಡಿಮನೆ 
ಬೈಂದೂರು ವಿಧಾನಸಭಾ ಕ್ಷೇತ್ರ ಅಂಪಾರು, ಸಿದ್ಧಾಪುರ, ನಾಡಾ, ಕಾಲತೋಡು, ಜಡ್ಕಲ್‌ 
ಉಡುಪಿ-ಚಿಕ್ಕಮಗಳೂರು ಲೋ. ಕ್ಷೇತ್ರ ಬೆಳ್ಮಣ್‌, ಅಲೆವೂರು, ನಾಲ್ಕೂರು, ಮೊಳಹಳ್ಳಿ, ಕಿರಿಮಂಜೇಶ್ವರ
05 ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಆಯ್ಕೆಯಾಗುವ ಗ್ರಾಮಗಳು
40 ಲ.ರೂ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.