ನಶಾ ಮುಕ್ತ ಉಡುಪಿ ಅಭಿಯಾನ; ಎಸ್‌ಪಿ ನೇತೃತ್ವದಲ್ಲಿ ದಿಢೀರ್‌ ಕಾರ್ಯಾಚರಣೆ


Team Udayavani, Sep 16, 2020, 7:58 AM IST

 ನಶಾ ಮುಕ್ತ ಉಡುಪಿ ಅಭಿಯಾನ; ಎಸ್‌ಪಿ ನೇತೃತ್ವದಲ್ಲಿ ದಿಢೀರ್‌ ಕಾರ್ಯಾಚರಣೆ

ಎಸ್‌.ಪಿ. ನೇತೃತ್ವದಲ್ಲಿ ದಿಢೀರ್‌ ಕಾರ್ಯಾಚರಣೆ ನಡೆಯಿತು.

ಉಡುಪಿ: ನಶಾ ಮುಕ್ತ ಉಡುಪಿ ಜಿಲ್ಲೆಯ ಅಭಿಯಾನ ವ್ಯಾಪಕವಾಗಿ ನಡೆಯುತ್ತಿದ್ದು ಗಡಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ ಅವರ ನೇತೃತ್ವದಲ್ಲಿ ಕಲ್ಸಂಕ ವೃತ್ತದ ಬಳಿ ಸಂಜೆ 5ರ ಬಳಿಕ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿದರು.

ವಾಹನಗಳಲ್ಲಿ ಹೆಚ್ಚುವರಿ ಲೈಟ್‌, ಹಾರ್ನ್ಗಳ ಅಳವಡಿಕೆ, ಸೂಕ್ತ ದಾಖಲೆ ಇಲ್ಲದವರು ಸಹಿತ ಒಟ್ಟು 115 ಪ್ರಕರಣ ದಾಖಲಿಸಿ 65 ಸಾವಿರ ರೂ. ದಂಡ ವಸೂಲು ಮಾಡಲಾಯಿತು. ಸಂಚಾರ ಪೊಲೀಸ್‌ ಠಾಣೆಯಲ್ಲಿ 80 ಪ್ರಕರಣ ದಾಖಲಾಗಿ 40 ಸಾವಿರ ರೂ. ದಂಡ ವಸೂಲು ಮಾಡಲಾಯಿತು. ನಗರ ಪೊಲೀಸ್‌ ಠಾಣೆಯಲ್ಲಿ 35 ಪ್ರಕರಣ ದಾಖಲಾಗಿ 25 ಸಾವಿರ ರೂ.ದಂಡ ಸಂಗ್ರಹವಾಯಿತು.

50ಕ್ಕೂ ಅಧಿಕ ಪೊಲೀಸರು
ಈ ಅಭಿಯಾನಕ್ಕಾಗಿ ಜಿಲ್ಲೆಯಾ ದ್ಯಂತ 50ಕ್ಕೂ ಅಧಿಕ ಮಂದಿ ಹಿರಿಯ ಪೊಲೀಸರು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿಗಳು ಶಾಲಾ- ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಶಾಲೆ ಅಥವಾ ಕಾಲೇಜಿನ ಕ್ಯಾಂಪಸ್‌ಗಳಲ್ಲಿ ಮಾದಕ ವಸ್ತುಗಳ ಬಳಕೆ ಪ್ರಕರಣ ಕಂಡುಬಂದರೆ ಆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್‌ಪಿ ಟಿ.ಆರ್‌. ಜೈಶಂಕರ್‌, ಸಂಚಾರ ಪೊಲೀಸ್‌ ಠಾಣೆಯ ನಿರೀಕ್ಷಕ ಅಬ್ದುಲ್‌ ಖಾದರ್‌, ನಗರ ಠಾಣೆಯ ಪೊಲೀಸ್‌ ನಿರೀಕ್ಷಕ ಶಕ್ತಿವೇಲು ಉಪಸ್ಥಿತರಿದ್ದರು.

ನಿಯಮ ಉಲ್ಲಂಘಿಸಿದರೆ ಕ್ರಮ
ಮಾದಕ ವಸ್ತುಗಳ ಸಾಗಾಟ ನಿಯಂತ್ರಣ ಹಾಗೂ ಸುವ್ಯವಸ್ಥಿತ ಸಂಚಾರ ನಿಯಮ ಪಾಲನೆಯ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮುಂದಿನ ದಿನಗಳಲ್ಲಿಯೂ ಜಿಲ್ಲೆಯ ವಿವಿಧೆಡೆ ಇದೇ ರೀತಿ ದಿಢೀರ್‌ ಕಾರ್ಯಾಚರಣೆ ನಡೆಸಲಾಗುವುದು. ವಾಹನಗಳ ಮಾಡಿಫೈ ಸಹಿತ ಸಂಚಾರ ನಿಯಮ ಉಲ್ಲಂ ಸುವವರ ಮೇಲೆ ಕ್ರಮ ಜರಗಿಸಲಾಗುವುದು.
-ಎನ್‌.ವಿಷ್ಣುವರ್ಧನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಉಡುಪಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.