ನಶಾ ಮುಕ್ತ ಉಡುಪಿ ಅಭಿಯಾನ; ಎಸ್ಪಿ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ
Team Udayavani, Sep 16, 2020, 7:58 AM IST
ಎಸ್.ಪಿ. ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆಯಿತು.
ಉಡುಪಿ: ನಶಾ ಮುಕ್ತ ಉಡುಪಿ ಜಿಲ್ಲೆಯ ಅಭಿಯಾನ ವ್ಯಾಪಕವಾಗಿ ನಡೆಯುತ್ತಿದ್ದು ಗಡಿ ಪೊಲೀಸರು ಬಿಗು ತಪಾಸಣೆ ನಡೆಸುತ್ತಿದ್ದಾರೆ. ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರ ನೇತೃತ್ವದಲ್ಲಿ ಕಲ್ಸಂಕ ವೃತ್ತದ ಬಳಿ ಸಂಜೆ 5ರ ಬಳಿಕ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿದರು.
ವಾಹನಗಳಲ್ಲಿ ಹೆಚ್ಚುವರಿ ಲೈಟ್, ಹಾರ್ನ್ಗಳ ಅಳವಡಿಕೆ, ಸೂಕ್ತ ದಾಖಲೆ ಇಲ್ಲದವರು ಸಹಿತ ಒಟ್ಟು 115 ಪ್ರಕರಣ ದಾಖಲಿಸಿ 65 ಸಾವಿರ ರೂ. ದಂಡ ವಸೂಲು ಮಾಡಲಾಯಿತು. ಸಂಚಾರ ಪೊಲೀಸ್ ಠಾಣೆಯಲ್ಲಿ 80 ಪ್ರಕರಣ ದಾಖಲಾಗಿ 40 ಸಾವಿರ ರೂ. ದಂಡ ವಸೂಲು ಮಾಡಲಾಯಿತು. ನಗರ ಪೊಲೀಸ್ ಠಾಣೆಯಲ್ಲಿ 35 ಪ್ರಕರಣ ದಾಖಲಾಗಿ 25 ಸಾವಿರ ರೂ.ದಂಡ ಸಂಗ್ರಹವಾಯಿತು.
50ಕ್ಕೂ ಅಧಿಕ ಪೊಲೀಸರು
ಈ ಅಭಿಯಾನಕ್ಕಾಗಿ ಜಿಲ್ಲೆಯಾ ದ್ಯಂತ 50ಕ್ಕೂ ಅಧಿಕ ಮಂದಿ ಹಿರಿಯ ಪೊಲೀಸರು ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿಗಳು ಶಾಲಾ- ಕಾಲೇಜುಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದ್ದಾರೆ. ಯಾವುದೇ ಶಾಲೆ ಅಥವಾ ಕಾಲೇಜಿನ ಕ್ಯಾಂಪಸ್ಗಳಲ್ಲಿ ಮಾದಕ ವಸ್ತುಗಳ ಬಳಕೆ ಪ್ರಕರಣ ಕಂಡುಬಂದರೆ ಆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಪ್ರಕರಣ ದಾಖಲಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್ಪಿ ಟಿ.ಆರ್. ಜೈಶಂಕರ್, ಸಂಚಾರ ಪೊಲೀಸ್ ಠಾಣೆಯ ನಿರೀಕ್ಷಕ ಅಬ್ದುಲ್ ಖಾದರ್, ನಗರ ಠಾಣೆಯ ಪೊಲೀಸ್ ನಿರೀಕ್ಷಕ ಶಕ್ತಿವೇಲು ಉಪಸ್ಥಿತರಿದ್ದರು.
ನಿಯಮ ಉಲ್ಲಂಘಿಸಿದರೆ ಕ್ರಮ
ಮಾದಕ ವಸ್ತುಗಳ ಸಾಗಾಟ ನಿಯಂತ್ರಣ ಹಾಗೂ ಸುವ್ಯವಸ್ಥಿತ ಸಂಚಾರ ನಿಯಮ ಪಾಲನೆಯ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮುಂದಿನ ದಿನಗಳಲ್ಲಿಯೂ ಜಿಲ್ಲೆಯ ವಿವಿಧೆಡೆ ಇದೇ ರೀತಿ ದಿಢೀರ್ ಕಾರ್ಯಾಚರಣೆ ನಡೆಸಲಾಗುವುದು. ವಾಹನಗಳ ಮಾಡಿಫೈ ಸಹಿತ ಸಂಚಾರ ನಿಯಮ ಉಲ್ಲಂ ಸುವವರ ಮೇಲೆ ಕ್ರಮ ಜರಗಿಸಲಾಗುವುದು.
-ಎನ್.ವಿಷ್ಣುವರ್ಧನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ