4 ಎಕರೆ ಪ್ರದೇಶದಲ್ಲಿ ತಾ| ಕಚೇರಿಗಳ ಸಂಕೀರ್ಣ: ಶಾಸಕ ಲಾಲಾಜಿ

ಕಾಪು ಪ್ರವಾಸಿ ಬಂಗ್ಲೆ ಆವರಣದಲ್ಲಿ ಹೊಸ ಸಮುಚ್ಚಯದ ನೀಲನಕ್ಷೆ ಸಿದ್ಧ

Team Udayavani, Oct 10, 2020, 2:10 AM IST

kapu

ಕಾಪು: ಕಾಪು ಪ್ರವಾಸಿ ಬಂಗ್ಲೆ ಆವರಣದ ಸುಮಾರು 4 ಎಕರೆ ಜಮೀನಿನಲ್ಲಿ ಸರಕಾರಿ ಕಚೇರಿಗಳ ಸಮುಚ್ಚಯ ನಿರ್ಮಾಣ ಮಾಡಿ ತಾಲೂಕಿಗೆ ಸಂಬಂಧಪಟ್ಟ ಎಲ್ಲ ಕಚೇರಿಗಳು ಇಲ್ಲಿಯೇ ಕಾರ್ಯಚಟುವಟಿಕೆ ನಡೆಸುವಂತೆ ಮಾಡುವ ಉದ್ದೇಶವಿದೆ ಎಂದು ಶಾಸಕ ಲಾಲಾಜಿ ಆರ್‌. ಮೆಂಡನ್‌ ತಿಳಿಸಿದರು.

ಕಾಪು ಮಿನಿ ವಿಧಾನಸೌಧ ನಿರ್ಮಾಣ ಕುರಿತಂತೆ ಶುಕ್ರವಾರ ಅಧಿಕಾರಿಗಳೊಂದಿಗೆ ಪ್ರವಾಸಿ ಬಂಗ್ಲೆ ಪರಿಸರಕ್ಕೆ ಭೇಟಿ ನೀಡಿದ ಅವರು ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು. ಕಾಪು ತಾಲೂಕಿಗೆ ಈಗಾಗಲೇ 10 ಕೋ. ರೂ.ವೆಚ್ಚದ ಮಿನಿ ವಿಧಾನ ಸೌಧ ಮಂಜೂರಾಗಿದ್ದು, ಇಲ್ಲಿ ತಹಶೀಲ್ದಾರ್‌ ಕಚೇರಿ ಸಹಿತ 30 ಇಲಾಖೆಗಳು ಕಾರ್ಯಾಚರಿಸಲಿವೆ. ಕರ್ನಾಟಕ ಗೃಹ ಮಂಡಳಿ ಮೂಲಕ ನಿರ್ಮಾಣವಾಗುವ ಯೋಜನೆಗೆ ಪ್ರಾಥಮಿಕ ಹಂತದ 3 ಕೋ. ರೂ. ಅನುದಾನ ಬಿಡುಗಡೆಗಾಗಿ ಆರ್ಥಿಕ ಇಲಾಖೆ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರಿಗೆ ಮನವಿ ಮಾಡಲಾಗಿದೆ. ಮಿನಿ ವಿಧಾನಸೌಧ ನಿರ್ಮಾಣಕ್ಕೆ ಶೀಘ್ರ ಶಿಲಾನ್ಯಾಸ ನೆರವೇರಿಸಲಾಗುವುದು ಎಂದರು.

ಕಾಪು ಮಿನಿ ವಿಧಾನಸೌಧದಲ್ಲಿ ತಾ| ಮ್ಯಾಜಿಸ್ಟ್ರೇಟ್‌ ಕಚೇರಿ, ತಾಲೂಕು ನ್ಯಾಯಾಲಯ ರಚನೆ ಸಹಿತವಾಗಿ ಅಗತ್ಯದ ಕಚೇರಿಗಳ ನೀಲ ನಕಾಶೆ ಸಿದ್ಧಪಡಿಸಲಾಗಿದೆ. ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ಕಾಪು ತಾ.ಪಂ. ಕಚೇರಿ ನಿರ್ಮಾಣವಾಗಲಿದ್ದು, ಜಮೀನು ಮಂಜೂರಾತಿಯಾಗಿದೆ. ಹೊಸ ಸರಕಾರಿ ವಸತಿ ಸಮುಚ್ಚಯ ನಿರ್ಮಾಣಕ್ಕೆ ಪೂರ್ವಭಾವಿಯಾಗಿ ಬಂಗ್ಲೆ ಆವರಣದಲ್ಲಿರುವ ವಸತಿ ಗೃಹಗಳನ್ನು ತೆರವು ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ ಮಲ್ಲಾರು, ಸದಸ್ಯ ರಮೇಶ್‌ ಕೆ. ಪೂಜಾರಿ ಉಳಿಯಾರಗೋಳಿ, ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಕಂದಾಯ ಪರಿವೀಕ್ಷಕ ಕೆ. ರವಿಶಂಕರ್‌, ಗೃಹಮಂಡಳಿ ಎಇಇ ಹರೀಶ್‌, ಗುತ್ತಿಗೆದಾರ ಕೆ. ವಾಸುದೇವ ಶೆಟ್ಟಿ, ವಿನ್ಯಾಸಕ ಯೋಗೀಶ್‌ ಚಂದ್ರಾದರ್‌, ಕಾಪು ಪುರಸಭೆ ಸದಸ್ಯರಾದ ರಮೇಶ್‌ ಹೆಗ್ಡೆ, ಸುರೇಶ್‌ ದೇವಾಡಿಗ ಉಪಸ್ಥಿತರಿದ್ದರು.

ಸರಕಾರಿ ಸಮುಚ್ಚಯದಲ್ಲಿ ಏನೇನಿರಲಿವೆ?
ಕಾಪು ಬಂಗ್ಲೆ ಮೈದಾನದಲ್ಲಿ ಈಗಾಗಲೇ ಪುರಸೌಧ ಕಟ್ಟಡ, ವಿದ್ಯಾರ್ಥಿ- ವಿದ್ಯಾರ್ಥಿನಿಯರ ವಸತಿ ನಿಲಯ, ಕೃಷಿ ಇಲಾಖೆ, ಅರಣ್ಯ ಇಲಾಖೆಯ ಕಚೆೇರಿ, ವಸತಿ ಗೃಹಗಳು ನಿರ್ಮಾಣಗೊಂಡಿವೆ. ಶೀಘ್ರದಲ್ಲಿ ಮಿನಿ ವಿಧಾನಸೌಧ ನಿರ್ಮಾಣವಾಗಲಿದೆ. ಮುಂದಿನ ಹಂತದಲ್ಲಿ ತಾಲೂಕು ಪಂಚಾಯತ್‌ ಕಟ್ಟಡ, ಮೆಸ್ಕಾಂ ಕಚೆೇರಿ, ಸುಸಜ್ಜಿತ ತಾಲೂಕು ಪ್ರವಾಸಿ ಬಂಗ್ಲೆ ಸಹಿತ ವಿವಿಧ ಸರಕಾರಿ ಯೋಜನೆಗಳು ಸರಕಾರಿ ವಸತಿ ಸಮುಚ್ಚಯದಲ್ಲಿ ನಿರ್ಮಾಣಗೊಳ್ಳಲಿವೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.