ಜನಜೀವನ ಸಹಜ ಸ್ಥಿತಿಗೆ; ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ

ಪರಿಹಾರ ವಿತರಣೆಗೆ ನಷ್ಟ ಲೆಕ್ಕಾಚಾರ ಸಂಗ್ರಹ ಕಾರ್ಯ; ಪರಿಹಾರ ನಿರೀಕ್ಷೆಯಲ್ಲಿ ಸಂತ್ರಸ್ತರು

Team Udayavani, Sep 23, 2020, 4:35 AM IST

uDUPI-2

ಆರೋಗ್ಯ ಇಲಾಖೆ ಸಿಬಂದಿ ರೋಗ ತಡೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲಿಸಿದರು.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಸೂಚನೆ ಮುಕ್ತಾಯಗೊಂಡಿದ್ದು, ನೆರೆಹಾನಿ ಪ್ರದೇಶಗಳು ಸಹಜ ಸ್ಥಿತಿಗೆ ಬರುತ್ತಿವೆ. ನಷ್ಟದ ವಿವರಗಳನ್ನು ಕಲೆಹಾಕುವ ನಿಟ್ಟಿನಲ್ಲಿ ಕಂದಾಯ, ಕೃಷಿ ಮತ್ತು ತೋಟಗಾರಿಕೆ, ಪಿಡಬ್ಲ್ಯುಡಿ, ಮೆಸ್ಕಾಂ ಸಹಿತ ಹಲವು ಇಲಾಖೆಗಳು ನಿರತವಾಗಿವೆ.

ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯ ಸಿಬಂದಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಾಂಕ್ರಾಮಿಕ ರೋಗ ತಡೆ ಉಂಟಾಗದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾ, ಸಮುದಾಯ, ಪ್ರಾ. ಆರೋಗ್ಯ ಕೇಂದ್ರಗಳ ಸಿಬಂದಿ ಸೋಮವಾರದಿಂದಲೇ ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಅತಿವೃಷ್ಟಿ ಹಾನಿ ವಿವರ ಉಡುಪಿ ಜಿಲ್ಲೆಯಲ್ಲಿ ಅತಿವೃಷ್ಟಿ ಹಾನಿಗಳ ಬಗ್ಗೆ ಸಮೀಕ್ಷೆ ನಡೆಯುತ್ತಿದೆ. ಸೆ.22ರ ಮಾಹಿತಿಯ ಪ್ರಕಾರ ತೋಟಗಾರಿಕೆ ಇಲಾಖೆಯ ವ್ಯಾಪ್ತಿಯಲ್ಲಿ 34.66 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದ್ದು, 39.32 ಲ.ರೂ.ನಷ್ಟ ಸಂಭವಿಸಿದೆ.

ಕಾಪು ತಾಲೂಕಿನಲ್ಲಿ 34.93 ಲ.ರೂ., ಬ್ರಹ್ಮಾವರ 18.10 ಲ.ರೂ., ಕಾರ್ಕಳ 1.80 ಲ.ರೂ., ಬೈಂದೂರಿನಲ್ಲಿ 3 ಲ.ರೂ., ಉಡುಪಿಯಲ್ಲಿ 31.74 ಲ.ರೂ. ನಷ್ಟ ಅಂದಾಜಿಸಲಾಗಿದೆ. ಮೆಸ್ಕಾಂ ಉಡುಪಿ, ಕುಂದಾಪುರ ವಿಭಾಗ ವ್ಯಾಪ್ತಿಯಲ್ಲಿ 2 ದಿನಗಳಲ್ಲಿ 106 ಕಂಬಗಳು
ಧರೆಗುರುಳಿದ್ದು, 10 ವಿದ್ಯುತ್‌ ಪ್ರವಾಹಕ ಮತ್ತು 3 ಕಿ.ಮೀ. ಉದ್ದದ ತಂತಿಗಳಿಗೆ ಹಾನಿಯಾಗಿ ಸುಮಾರು 25 ಲ.ರೂ. ನಷ್ಟ‌ವಾಗಿದೆ ಸುಮಾರು
460 ಹೆ. ಭತ್ತದ ಗದ್ದೆಗಳು ನೆರೆ ಪೀಡಿತವಾಗಿವೆ. ನೆರೆ ಇಳಿದ ಅನಂತರ ನಷ್ಟ ಅಂದಾಜು ಮಾಡಲಾಗುವುದು ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪರಿಹಾರ ಪಡೆಯಲು ಏನೇನು ದಾಖಲೆ ಬೇಕು
ಎಲ್ಲ ಸಂತ್ರಸ್ತರನ್ನು ಅಧಿಕಾರಿಗಳು ಭೇಟಿ ಮಾಡಿ ಮಾಹಿತಿ ಸಂಗ್ರಹಿಸುತ್ತಾರೆ. ಒಂದು ವೇಳೆ ತಪ್ಪಿ ಹೋದಲ್ಲಿ ಸಂತ್ರಸ್ತರು ಸ್ಥಳೀಯ ಗ್ರಾಮಕರಣಿಕರಿಗೆ ಹಾನಿಯ ಬಗ್ಗೆ 1 ಫೋಟೋ ಹಾಗೂ ಹಾನಿಯ ವರದಿ ಅಂದಾಜು ಮೊತ್ತ ಸೇರಿಸಿ ಪಡಿತರ ಚೀಟಿ, ಆಧಾರ್‌, ಬ್ಯಾಂಕ್‌ ಪಾಸ್‌ ಪುಸ್ತಕ, ಮನೆ ತೆರಿಗೆ ರಶೀದಿ, ಸಾಧ್ಯ ವಾದರೆ ಆರ್‌ಟಿಸಿ ಇತ್ಯಾದಿ ದಾಖಲೆಗಳನ್ನು ಸಲ್ಲಿಸಬೇಕು. ಅನಂತರ ಗ್ರಾಮಕರಣಿಕರು ಸ್ಥಳಕ್ಕೆ ಭೇಟಿ ನೀಡಿ ನಷ್ಟದ ಬಗ್ಗೆ ಮಾಹಿತಿ ಲೆಕ್ಕಾಚಾರ ಪಡೆದುಕೊಳ್ಳಲಿದ್ದಾರೆ.

ನಷ್ಟದ ಮೊತ್ತ ಲೆಕ್ಕಾಚಾರ
ಜಿಲ್ಲೆಯಲ್ಲಿ ಮಳೆ ಹಾಗೂ ನೆರೆ ನಿಂತುಹೋದ ಮೇಲೆ ನಷ್ಟದ ಬಗ್ಗೆ ಮಾಹಿತಿ ಕಲೆಹಾಕುವಲ್ಲಿ ವಿವಿಧ ಇಲಾಖೆಗಳು ಮುಂದಾಗಿವೆ. ಮನೆ ಕಳೆದುಕೊಂಡವರು, ಬೆಳೆಹಾನಿ, ಜಾನುವಾರು ಕಳೆದುಕೊಂಡವರು ಸಹಿತ ಹಲವು ಮಂದಿ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳಿಗೆ ತಹಶೀಲ್ದಾರ್‌ಗಳು, ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ನಷ್ಟದ ಮೊತ್ತದ ಲೆಕ್ಕಾಚಾರದಲ್ಲಿ ತೊಡಗಿಸಿ ಕೊಂಡಿದ್ದಾರೆ. ಬಟ್ಟೆಬರೆ, ಗೃಹೋಪಯೋಗಿ ಸಾಮಗ್ರಿ, ಮನೆ ಕಳೆದುಕೊಂಡವರು, ಹೊಸ ಮನೆ ನಿರ್ಮಿಸುವವರಿಗೆ, 15ರಿಂದ 25 ಶೇ. ಹಾನಿಗೊಳಗಾದ ಮನೆಗಳು, 25ರಿಂದ 75ಶೇ. ಹಾನಿಗೊಳಗಾದ ಮನೆಗಳು ಸಹಿತ ನಷ್ಟದ ಲೆಕ್ಕಾಚಾರಗಳನ್ನು ವಿಂಗಡಿಸಲಾಗುತ್ತದೆ. ಇಂತಹವರಿಗೆ ಕೇಂದ್ರ ಸರಕಾರದ ಪ್ರಾಕೃತಿಕ ವಿಕೋಪ ನಿಧಿಯಡಿ ಪರಿಹಾರ ಕಾರ್ಯ ಮಂಜೂರು ಮಾಡಲಾಗುತ್ತದೆ.

2000 ರೂ. ನಗರಸಭಾ ವ್ಯಾಪ್ತಿ ಯಲ್ಲಿ ಹೆಚ್ಚುವರಿ ಪರಿಹಾರ
05 ಲ.ರೂ. ಕೆಡವಿ ಹೊಸ ಮನೆ ಕಟ್ಟಲು ಪರಿಹಾರ

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.