ಬಳಕೆಗಿಲ್ಲದ ಈದು “ಬಿ’ ಪ್ರಾಥಮಿಕ ಆರೋಗ್ಯ ಉಪಕೇಂದ್ರ

ಕಳೆದ ಮೂರು ವರ್ಷಗಳಿಂದ ಸೇವೆ ಸ್ಥಗಿತಗೊಂಡು ಪಾಳು ಬಿದ್ದ ಕಟ್ಟಡ

Team Udayavani, Nov 6, 2019, 4:34 AM IST

dd-7

ಬಜಗೋಳಿ: ಈದು ಗ್ರಾ.ಪಂ. ವ್ಯಾಪ್ತಿಯ ಪಲ್ಕೆಯಲ್ಲಿರುವ ಹೊಸ್ಮಾರುವಿನ ಈದು “ಬಿ’ ಪ್ರಾಥಮಿಕ ಉಪಕೇಂದ್ರವಾದ ಕಟ್ಟಡಕ್ಕೆ ಬೀಗ ಹಾಕಲಾಗಿದ್ದು, ಸಾರ್ವಜನಿಕ ಬಳಕೆಯಿಲ್ಲದೆ ಸುಸಜ್ಜಿತ ಕಟ್ಟಡ ಪಾಳು ಬೀಳುವಂತಾಗಿದೆ. ಕಟ್ಟಡವು ಮೂಲ ಸೌಕರ್ಯ ಹೊಂದಿದ್ದರೂ ಸಾರ್ವಜನಿ ಕರ ಬಳಕೆಯಿಲ್ಲದೆ ಗಿಡ ಗಂಟಿಗಳು ಆವೃತವಾಗಿ ಪಾಳು ಬಿದ್ದಿವೆ.

2012ರಲ್ಲಿ ಸುಸಜ್ಜಿತ ಕಟ್ಟಡದಲ್ಲಿ ಆರಂಭಗೊಂಡ ಈ ಉಪಕೇಂದ್ರವು ಪ್ರಾರಂಭದಲ್ಲಿ ಉತ್ತಮ ಸೇವೆ ನೀಡುವ ಮೂಲಕ ಈದು ಪರಿಸರದ ಸಾರ್ವ ಜನಿಕರಿಗೆ ಉತ್ತಮ ಸೇವೆ ನೀಡುತ್ತಿತ್ತು. ಆದರೆ ಕಳೆದ 3 ವರ್ಷಗಳಿಂದ ಯಾವುದೇ ಸೇವೆ ನೀಡದೆ ಕಟ್ಟಡಕ್ಕೆ ಬೀಗ ಹಾಕಲಾಗಿದ್ದು, ಪಲ್ಕೆ ಭಾಗದ ಸಾರ್ವಜನಿಕರು ಸುಮಾರು 5 ಕಿ.ಮೀ. ಕ್ರಮಿಸಿ ಹೊಸ್ಮಾರುವಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ಅವಲಂಬಿಸು ವಂತಾಗಿದೆ. ಈ ಭಾಗದಲ್ಲಿ ಯಾವುದೇ ಬಸ್‌ ಸೌಲಭ್ಯವಿಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ.

ಖಾಯಂ ವೈದ್ಯಾಧಿಕಾರಿಗಳಿಲ್ಲ
ಆದರೆ ಹೊಸ್ಮಾರುವಿನಲ್ಲಿರುವ ಈದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಬಜಗೋಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಗಿರೀಶ್‌ ಗೌಡ ವಾರದಲ್ಲಿ ಒಂದು ದಿನ ಹೊಸ್ಮಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ನೀಡುತ್ತಿದ್ದು, ಸಾರ್ವಜನಿಕರು ತುರ್ತು ಸಂದರ್ಭ ಸುಮಾರು 17 ಕಿ.ಮೀ. ದೂರವಿರುವ ಬಜಗೋಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ 27 ಕಿ.ಮೀ. ದೂರವಿರುವ ತಾಲೂಕು ಆರೋಗ್ಯ ಕೇಂದ್ರವನ್ನು ಅವಲಂಬಿಸು ವಂತಾಗಿದೆ.

ಪಾಳು ಬಿದ್ದ ಕಟ್ಟಡ
ಸುಸಜ್ಜಿತ ಕಟ್ಟಡ ಬಳಕೆಯಿಲ್ಲದೆ ಪಾಳು ಬಿದ್ದಿದ್ದು, ಗಿಡಗಂಟಿಗಳು ಆವೃತವಾಗಿದೆ. ಆರಂಭದಲ್ಲಿ ಕಿರಿಯ ಆರೋಗ್ಯ ಮಹಿಳಾ ಸಹಾಯಕಿ ಕಟ್ಟಡದಲ್ಲಿ ಸೇವೆ ಸಲ್ಲಿಸುತ್ತಿದ್ದು, ಸಾರ್ವಜನಿಕರಿಗೆ ಬಹಳ ಅನುಕೂಲವಾಗಿತ್ತು. ಈದು ಪಲ್ಕೆ ಭಾಗದಲ್ಲಿ ಸುಮಾರು 500ಕ್ಕೂ ಅಧಿಕ ಮನೆಗಳಿವೆ.

ಈದು “ಬಿ’ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳೆದ 3 ವರ್ಷಗಳಿಂದ ಬೀಗ ಹಾಕಲಾಗಿದ್ದರೂ ಜನಪ್ರತಿನಿಧಿಗಳು ಯಾವುದೇ ರೀತಿಯಲ್ಲಿ ಪಾಳು ಬಿದ್ದ ಕಟ್ಟಡವನ್ನು ಮರು ಬಳಸುವಲ್ಲಿ ಕ್ರಮ ಕೈಗೊಳ್ಳದೆ ಪಾಳು ಬಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 2018- 19ನೇ ಸಾಲಿನಲ್ಲಿ 2 ಲಕ್ಷ ರೂ. ವೆಚ್ಚದ ಅನುದಾನದಲ್ಲಿ ಆವರಣ ಗೋಡೆ ನಿರ್ಮಿಸುವ ಅಗತ್ಯವಾದರೂ ಏನಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಸಮಸ್ಯೆ ಕುರಿತು ಹಲವು ಬಾರಿ ಜನಪ್ರತಿನಿಧಿಗಳನ್ನು ಸಂಪರ್ಕಿಸಲಾದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳುವಲ್ಲಿ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದು, ಇನ್ನಾದರೂ ಎಚ್ಚೆತ್ತು ಪಲ್ಕೆಯಲ್ಲಿರುವ ಉಪಕೇಂದ್ರ ಕಟ್ಟಡ ಸಾರ್ವಜನಿಕರಿಗೆ ಬಳಕೆಯಾಗುವಂತಾಗಲಿ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಚಿಕಿತ್ಸೆಗೆ ಸೂಕ್ತ ಕ್ರಮ
ಈದು “ಬಿ’ ಉಪಕೇಂದ್ರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪ್ರತಿನಿತ್ಯ ಅಪರಾಹ್ನದ ಅನಂತರ ಚಿಕಿತ್ಸೆ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ಡಾ. ಗಿರೀಶ್‌ ಗೌಡ ಎಂ.,
ಪ್ರಭಾರ ವೈದ್ಯಾಧಿಕಾರಿ, ಈದು ಪ್ರಾಥಮಿಕ ಆರೋಗ್ಯ ಕೇಂದ್ರ.

ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಈ ಸಮಸ್ಯೆ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
-ದಿವ್ಯಶ್ರೀ ಗಿರೀಶ್‌ ಅಮೀನ್‌, ಜಿ.ಪಂ. ಸದಸ್ಯರು

ಉಪಕೇಂದ್ರದಲ್ಲಿಯೇ ಚಿಕಿತ್ಸೆ ನೀಡಿ
ವಯೋವೃದ್ಧರು ನಾವು ಯಾವುದೇ ರೀತಿಯ ಚಿಕಿತ್ಸೆಗಾದರೂ ಹೊಸ್ಮಾರುವಿಗೆ ತೆರಳಲು ಕಷ್ಟಕರವಾಗುತ್ತಿದ್ದು, ಪಲ್ಕೆಯಲ್ಲಿರುವ ಉಪಕೇಂದ್ರದಲ್ಲಿಯೇ ಚಿಕಿತ್ಸೆ ನೀಡುವಂತಾದಲ್ಲಿ ತುಂಬಾ ಪ್ರಯೋಜನವಾದೀತು.
-ಗಿರಿಜಾ ಪೂಜಾರ್ತಿ, ಪಾಪುದಲ್ಕೆ

– ಸಂದೇಶ್‌ ಕುಮಾರ್‌

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udyavara: ತಪಾಸಣೆ ನಿರತ ಕಾರಿಗೆ ಕಾರು ಢಿಕ್ಕಿ; ಮಹಿಳೆಗೆ ಗಾಯ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

Udupi; ಕಾರು ಢಿಕ್ಕಿ: ಸ್ಕೂಟರ್‌ ಸವಾರ ಆಸ್ಪತ್ರೆಗೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.