ಹಿರಿಯ ಸಾಹಿತಿ, ಕಾದಂಬರಿಕಾರ, ನಾಟಕಕಾರ ಜಿಕೆ ಐತಾಳ್ ವಿಧಿವಶ
Team Udayavani, Sep 19, 2019, 11:16 AM IST
ಮಣಿಪಾಲ/ಕುಂದಾಪುರ: ಅನಕೃ ಪ್ರತಿಷ್ಠಾನದ ಮೊಟ್ಟ ಮೊದಲ ಕಾದಂಬರಿ ಪುರಸ್ಕೃತ ಸಾಹಿತಿ, ಕರ್ನಾಟಕ ಬ್ಯಾಂಕ್ ನಿವೃತ್ತ ಅಧಿಕಾರಿ ಜಿ.ಕೆ(ಗೋಪಾಲಕೃಷ್ಣ )ಐತಾಳ್ ಗುರುವಾರ ನಿಧನ ಹೊಂದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ 1951ರ ಜೂನ್ 25ರಂದು ಜನಿಸಿದ್ದರು. ತಂದೆ ಸೂರ್ಯನಾರಾಯಣ ಐತಾಳ್, ತಾಯಿ ಲಕ್ಷ್ಮೀದೇವಿ. ತಂದೆ ರಂಗಭೂಮಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.
ಜಿಕೆ ಐತಾಳರು ಕೋಟೇಶ್ವರದಲ್ಲಿ ಪ್ರಾಥಮಿಕ, ಪ್ರೌಢಶಿಕ್ಷಣ ಪಡೆದು ನಂತರ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದಿದ್ದರು. ಕರ್ನಾಟಕ ಬ್ಯಾಂಕ್ ನಲ್ಲಿ ಮ್ಯಾನೇಜರ್ ಆಗಿ ವೃತ್ತಿ ಆರಂಭ. ಕಲೆ ಹಾಗೂ ಸಾಹಿತ್ಯದಲ್ಲಿ ಅಭಿರುಚಿ ಹೊಂದಿದ್ದ ಜಿಕೆ ಹವ್ಯಾಸಿ ಬರಹಗಾರರಾಗಿ ಅಂದಿನ ನವಭಾರತ ಪತ್ರಿಕೆಯಲ್ಲಿ ಕಡಲ ತಡಿಯ ಕಲಾವಿದರು ಎಂಬ ಲೇಖನ ಬರೆದಿದ್ದರು.
ಉದಯವಾಣಿ, ತರಂಗ ಸೇರಿದಂತೆ ನಾಡಿನ ಪ್ರಸಿದ್ಧ ಪತ್ರಿಕೆ, ವಾರಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ಆಯ್ದ ಕಥಾ ಸಂಕಲನ ಕಡಲ ತಡಿಯ ಕಥೆಗಳು ಪ್ರಕಟಗೊಂಡಿತ್ತು. ಸಮರ್ಪಣ, ಕಾಟುಮೂಲೆ ಎಸ್ಟೇಟ್ ಧಾರವಾಹಿಯಾಗಿ ಪತ್ರಿಕೆಗಳಲ್ಲಿ ಮೂಡಿಬಂದಿತ್ತು. ಕುಜ ಕಾದಂಬರಿ ತುಷಾರದಲ್ಲಿ, ಮಿನುಗು, ಮಿನುಗೆಲೆ ನಕ್ಷತ್ರ ಕಾದಂಬರಿ ತರಂಗ ವಾರಪತ್ರಿಕೆಯಲ್ಲಿ, ಮೇರೆ ಭಾರತ್ ಮಹಾನ್ ಕಾದಂಬರಿ ಉದಯವಾಣಿ ದೈನಿಕದಲ್ಲಿ ಧಾರವಾಹಿಯಾಗಿ ಪ್ರಕಟವಾಗಿತ್ತು.
ಕುಜ ಕಾದಂಬರಿಯು ತುಷಾರ ಮಾಸ ಪತ್ರಿಕೆ ವಿಂಶತಿ ಕಾದಂಬರಿ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿತ್ತು. ಅಲ್ಲದೇ ಕಾದಂಬರಿ ಕ್ಷೇತ್ರಕ್ಕಾಗಿ ಅನಕೃರವರು ನೀಡಿದ ಶ್ರೇಷ್ಠ ಕೊಡುಗೆಯ ಕುರುಹಾಗಿ ಕಾದಂಬರಿಕಾರರನ್ನು ಪ್ರೋತ್ಸಾಹಿಸುವ ಸಲುವಾಗಿ ಸ್ಥಾಪಿಸಿದ ಮೊಟ್ಟ ಮೊದಲ ಪ್ರಶಸ್ತಿಯನ್ನು ಜಿಕೆ ಐತಾಳರು ಪಡೆದಿದ್ದರು.
ಕಥೆ, ಕಾದಂಬರಿ, ಧಾರವಾಹಿ ಹಾಗೂ ಹಲವಾರು ನಾಟಕಗಳನ್ನೂ ನಿರ್ದೇಶಿಸಿದ್ದರು. ಅಖಿಲ ಕರ್ನಾಟಕ ನಾಟಕ ಸ್ಪರ್ಧೆಯಲ್ಲಿ ನಾವಿಲ್ಲದಾಗ ನಾಟಕಕ್ಕೆ 9 ಪ್ರಶಸ್ತಿಗಳು ಸಂದಿರುವುದು ಜಿಕೆ ಐತಾಳರ ಪ್ರತಿಭೆಗೆ ಹಿಡಿದ ಕೈಗನ್ನಡಿಯಾಗಿದೆ. ಅಷ್ಟೇ ಅಲ್ಲ ಗುಡ್ ಬೈ ಡಾಕ್ಟರ್ ನಾಟಕಕ್ಕೆ 3 ಪ್ರಶಸ್ತಿ, ಥ್ಯಾಂಕ್ಯೂ ಮಿ. ಗ್ಲಾಡ್ ನಾಟಕಕ್ಕೆ 6 ಪ್ರಶಸ್ತಿಗಳು ಐತಾಳರ ಮುಡಿಗೇರಿದ್ದವು.
2002ರಲ್ಲಿ ಜೀವಮಾನ ಸಾಧನೆಗಾಗಿ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಷ್ಠಾನ (ಬೆಂಗಳೂರು) ಪ್ರಶಸ್ತಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ