ಸರಕಾರಿ ಶಾಲೆಗಳೆರಡರ ಸ್ವರೂಪ ಬದಲಿಸಿದ ನರೇಗಾ!

ತಾಲೂಕಿನ 2 ಸರಕಾರಿ ಶಾಲೆಗಳಿಗೆ ಮೂಲಸೌಕರ್ಯ, ಹಿರ್ಗಾನ ಗ್ರಾ.ಪಂ. ಮಾದರಿ ಕಾರ್ಯ

Team Udayavani, Jun 15, 2022, 1:35 PM IST

8

ಕಾರ್ಕಳ: ಗ್ರಾಮೀಣ ಅಭಿವೃದ್ಧಿಗೆ ಸಹಕರಿಸುತ್ತಿರುವ ನರೇಗಾ ಯೋಜನೆ ಸರಕಾರಿ ಶಾಲೆಯ ಅಭಿವೃದ್ಧಿಗೂ ನೆರವಾಗಿ ಸರಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸುವಂತೆ ಮಾಡಲಾಗುತ್ತಿದೆ.

ಗ್ರಾ.ಪಂ. ನರೇಗಾ ಸಿಬಂದಿ, ಕಾರ್ಕಳ ತಾ|ನಲ್ಲಿ ಮೊದಲ ಬಾರಿಗೆ 2 ಶಾಲೆಗಳ ಮೂಲ ಸೌಕರ್ಯ ಈಡೇರಿಕೆಗೆ ನರೇಗಾ ಯೋಜನೆ ಬಳಸಿಕೊಳ್ಳಲಾಗಿದೆ. ಹಿರ್ಗಾನ ಗ್ರಾ.ಪಂ. ವ್ಯಾಪ್ತಿಯ ಹಿರ್ಗಾನ ಸ. ಪ್ರೌಢಶಾಲೆ ಹಾಗೂ ನೆಲ್ಲಿಕಟ್ಟೆ ಸ.ಹಿ.ಪ್ರಾ. ಇವೆರಡು ಸರಕಾರಿ ಶಾಲೆಗಳನ್ನು ಮ.ಗಾಂ.ಉ. ಖಾತರಿ ಯೋಜನೆಯಡಿ ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ ಎರಡು ಶಾಲೆಗಳಲ್ಲಿ ತಲಾ 6 ಲಕ್ಷ ರೂ. ಹಾಗೂ 4 ಲಕ್ಷ ರೂ. ಸೇರಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಆವರಣ ಗೋಡೆ ನಿರ್ಮಾಣಗೊಳಿಸಿ, ಭದ್ರತೆ ಕಲ್ಪಿಸಲಾಗಿದೆ. 1.60 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಇಂಗು ಗುಂಡಿ ನಿರ್ಮಿಸಲಾಗಿದೆ. 855 ಮಾನವ ದಿನ ಸೃಜನೆಯಾಗಿದೆ.

ಗ್ರಾ.ಪಂ. ಮಾದರಿ ಕಾರ್ಯ: ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಪ್ರಾಮುಖ್ಯತೆ ನೀಡಲಾಗುತ್ತಿದೆ. ಪೂರಕವಾಗಿ ಶಾಲೆಗಳಲ್ಲಿ ಸಮುದಾಯ ಬಚ್ಚಲು ಗುಂಡಿಯನ್ನು ನರೇಗಾ ಯೋಜನೆಯಡಿ ರಚಿಸಲಾಗಿದೆ. ಶಾಲೆ ಯಲ್ಲಿ ನಿತ್ಯ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ಸಮರ್ಪಕವಾಗಿ ವಿಲೇವಾರಿ ಮಾಡಲಾಗುತ್ತಿದೆ.

ಕಾಡು ಪ್ರಾಣಿ ಭೀತಿ ದೂರ: ಹಿರ್ಗಾನ ಅರಣ್ಯದಂಚಿನಲ್ಲಿರುವ ಗ್ರಾಮ ವಾಗಿದ್ದು, ಶಾಲೆಗೆ ಸುಸಜ್ಜಿತವಾದ ಕಟ್ಟಡವಿದ್ದರೂ ಸಮರ್ಪಕ ಆವರಣ ಗೋಡೆಯಿಲ್ಲದೆ ಸ್ಥಳೀಯರು ಶಾಲೆಯ ಆವರಣದೊಳಗೆ ಬರುತ್ತಿದ್ದರು. ಅಲ್ಲದೆ ಇಲ್ಲಿ ಕಾಡು ಪ್ರಾಣಿಗಳ ಹಾವಳಿಯೂ ಹೆಚ್ಚಾಗಿ ಕಾಡುತ್ತಿತ್ತು. ಆದ್ದರಿಂದ ಆವರಣ ಗೋಡೆಯ ಆವಶ್ಯಕತೆಯಿತ್ತು.

ಬಚ್ಚಲುಗುಂಡಿ ನಿರ್ಮಾಣ: ಮಕ್ಕಳು ಕೈ ತೊಳೆದ ನೀರು, ಅಡುಗೆ ಕೋಣೆಯ ಪಾತ್ರೆ, ತರಕಾರಿ ಇನ್ನಿತರ ವಸ್ತುಗಳನ್ನು ತೊಳೆದ ನೀರನ್ನು ತೆಂಗಿನ ಬುಡಕ್ಕೆ ಹರಿಯಲು ಬಿಡುತ್ತಿದ್ದೆವು. ನರೇಗಾ ಯೋಜನೆಯಡಿ ಬಚ್ಚಲು ಗುಂಡಿ ನಿರ್ಮಿಸಿದ ಬಳಿಕ ನೀರನ್ನು ಗುಂಡಿಯಲ್ಲಿ ಇಂಗಿಸಲಾಗುತ್ತಿದೆ. ಉದ್ಯೋಗ ಖಾತರಿ ಯೋಜನೆಯಡಿ ಪೌಷ್ಟಿಕ ಕೈ ತೋಟ ನಿರ್ಮಾಣಕ್ಕೂ ಬೇಡಿಕೆಯಿಟ್ಟಿದ್ದೇವೆ ಎನ್ನುತ್ತಾರೆ ಹಿರ್ಗಾನ ಸ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಹೇಮಲತಾ ಅವರು.

ಶಾಲೆಯ ಪಕ್ಕದಲ್ಲಿ ರಸ್ತೆಯಿದ್ದು, ಮಕ್ಕಳ ಹಿತದೃಷ್ಟಿಯಿಂದ ಶಾಲೆಗೆ ಆವರಣ ಗೋಡೆಯ ಆವಶ್ಯಕತೆ ಇತ್ತು, ನರೇಗಾ ಯೋಜನೆಯಡಿ ಆವರಣ ಗೋಡೆ ನಿರ್ಮಾಣವಾಗಿರುವುದರಿಂದ ಸಾಕಷ್ಟು ಉಪಯೋಗವಾಗಿದೆ ಎಂದು ನೆಲ್ಲಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಲ್ಲಿಕಾ ಹೇಳುತ್ತಾರೆ.

ಹಿರ್ಗಾನ ಗ್ರಾ.ಪಂ. ಎರಡು ಶಾಲೆಗಳಿಗೆ ಆವರಣ ಗೋಡೆ ಹಾಗೂ ಬಚ್ಚಲು ಗುಂಡಿ ನಿರ್ಮಾಣಗೊಂಡಿವೆ. ಇನ್ನು ಮುಂದಿನ ಹಂತದಲ್ಲಿ ಚಿಕ್ಕಲ್‌ಬೆಟ್ಟು ಸರಕಾರಿ ಶಾಲೆಗೆ ಬಚ್ಚಲು ಗುಂಡಿ ರಚನೆಯಾಗಲಿದೆ. ಜತೆಗೆ ಎಲ್ಲಾ ಶಾಲೆಗಳಿಗೆ ಮಳೆ ನೀರು ಕೊಯ್ಲು, ಪೌಷ್ಟಿಕ ಕೈ ತೋಟ ನಿರ್ಮಾಣವಾಗಲಿದೆ. ಅಜಾದಿ ಕಿ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಉದ್ಯಾನವನವನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನರೇಗಾ ಯೋಜನೆಯಡಿ ಇನ್ನು ಹೆಚ್ಚಿನ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹಿರ್ಗಾನ ಗ್ರಾ.ಪಂ. ಅಧ್ಯಕ್ಷ ಸಂತೋಷ್‌ ಶೆಟ್ಟಿ ಅಭಿಪ್ರಾಯಪಟ್ಟರು.

ಹಿರ್ಗಾನ ಗ್ರಾ.ಪಂ. ಅಮೃತ ಗ್ರಾ.ಪಂ.ಗೆ ಆಯ್ಕೆಗೊಂಡಿದ್ದು, ಉದ್ಯೋಗ ಖಾತರಿ ಯೋಜನೆಯಡಿ ಸರಕಾರಿ ಶಾಲೆಗಳನ್ನು ಸಮಗ್ರ ಅಭಿವೃದ್ಧಿಪಡಿಸಲಾಗುತ್ತದೆ. 3 ಸರಕಾರಿ ಶಾಲೆಗಳ ಪೈಕಿ ಈಗ ಎರಡು ಶಾಲೆಗಳಿಗೆ ಆವರಣ ಗೋಡೆ ಹಾಗೂ ಸಮುದಾಯ ಬಚ್ಚಲು ಗುಂಡಿ ನಿರ್ಮಾಣ ವಾಗಿದೆ. ಅಮೃತ ಉದ್ಯಾನವನ ಸೇರಿದಂತೆ ಇನ್ನಿತರ ಮಾದರಿ ಕಾಮಗಾರಿಗಳನ್ನು ಅನುಷ್ಠಾನ ಗೊಳಿಸಲು ಯೋಜನೆ ರೂಪಿಸಿದ್ದೇವೆ ಎಂದು ಹಿರ್ಗಾನ ಪಿಡಿಒ ಸಂಧ್ಯಾ ಶೆಟ್ಟಿ ಹೇಳಿದರು.

ಅಧಿಕಾರಿಗಳ ಭೇಟಿ: ರಕ್ಷಣ ಸಚಿವಾಲಯದ ನಿರ್ದೇಶಕರು, ಜಲಶಕ್ತಿ ಅಭಿಯಾನದ ನೋಡಲ್‌ ಅಧಿಕಾರಿ ಪಿಯುಷ್‌ ರಂಜನ್‌ ಹಾಗೂ ಅಡಿಷನಲ್‌ ಸೆಕ್ರೆಟರಿ ದೇಬಾಶ್ರಿ ಮುಖರ್ಜಿ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ವೇಳೆ ಹಿರ್ಗಾನ ಗ್ರಾ.ಪಂ.ನಲ್ಲಿ ಜಲಶಕ್ತಿ ಅಭಿಯಾನದಡಿ ಮನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಸರಕಾರಿ ಪ್ರೌಢಶಾಲೆಯ ಸಮುದಾಯ ಬಚ್ಚಲು ಗುಂಡಿಯನ್ನು ಪರಿಶೀಲನೆ ನಡೆಸಿದರು.

ಜಿಲ್ಲೆಗೆ ಮಾದರಿ:  ಗ್ರಾ.ಪಂ.ನ ಚುನಾಯಿತ ಪ್ರತಿನಿಧಿಗಳು, ಪಂ.ಅಧಿಕಾರಿ, ಸಿಬಂದಿಯಲ್ಲಿನ ಅಭಿವೃದ್ಧಿ, ಹೊಂದಾಣಿಕೆ ಮನೋಭಾವ ಯೋಜನೆ ಸಫ‌ಲತೆಗೊಳ್ಳುವಲ್ಲಿ ಸಹಕಾರಿಯಾಗಿದೆ. ತಾ.ಪಂ. ನರೇಗಾ ಸಿಬಂದಿ, ಕಾರ್ಯ ಕ್ಷಮತೆಯಿಂದಲೂ ಸಾಧ್ಯವಾಗಿದೆ. ಗ್ರಾ.ಪಂ. ತಾ|ನಲ್ಲಿ ಅಷ್ಟೇ ಅಲ್ಲ ಜಿಲ್ಲೆಗೂ ಮಾದರಿಯಾಗಿದೆ. -ಗುರುದತ್ತ್, ಇ.ಒ. ತಾ.ಪಂ. ಕಾರ್ಕಳ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.