ಎಚ್ಚರ: ಬಾಯಾರಿ ಬಂದನೆಂದು ನೀರು ಕೊಟ್ಟ ಮಹಿಳೆ.. ಕತ್ತಿಗೆ ಕೈ ಹಾಕಿ ಸರ ಎಳೆದ ವಂಚಕ!
Team Udayavani, Nov 22, 2020, 9:16 AM IST
Representative Image
ಶಿರ್ವ: “ಕಾಲ ಸರಿಯಿಲ್ಲ ಕಣ್ರೀ.. ಹಿಂದಿನ ಕಾಲದಲ್ಲಿ ಅಪರಿಚಿತರು ಬಂದರೂ ಊಟ ಹಾಕಿಸಿ ಕಳುಹಿಸುತ್ತಿದ್ದೆವು, ಈಗ ನೀರು ಕೊಡಲು ಭಯವಾಗುತ್ತದೆ..” ಎನ್ನುವ ಮಾತುಗಳನ್ನು ನಾವು ಕೇಳಿರುತ್ತೇವೆ. ಇಂತಹುದೇ ಘಟನೆ ಶನಿವಾರ ನಡೆದಿದೆ. ಅದೂ ಉಡುಪಿ ಜಿಲ್ಲೆಯ ಶಿರ್ವ ಗ್ರಾಮದ ಬಂಟಕಲ್ಲು ಬಳಿ!
ಹೌದು, ಬಾಯಾರಿಕೆಯಾಗುತ್ತಿದೆ ನೀರು ಕೊಡಿ ಎಂದು ಒಬ್ಬಂಟಿ ಮಹಿಳೆಯ ಮನೆಗೆ ಬಂದ ಅಪರಿಚಿತನೋರ್ವ ಆಕೆಯ ಕತ್ತಿಗೆ ಕೈ ಹಾಕಿ ಚಿನ್ನದ ಸರವನ್ನು ದೋಚಿ ಪರಾರಿಯಾಗಿರುವ ಘಟನೆ ಬಂಟಕಲ್ಲು ದೇವಸ್ಥಾನದ ಬಳಿ ಶನಿವಾರ ಸಂಜೆ ನಡೆದಿದೆ.
ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ವಸಂತಿ (72 ವ) ಚಿನ್ನದ ಸರ ಕಳೆದುಕೊಂಡ ಮಹಿಳೆ. ಶನಿವಾರ ಸಂಜೆ 6.30ರ ಸುಮಾರಿಗೆ ಮನೆಯ ಬಳಿ ಬೈಕ್ ನಲ್ಲಿ ಬಂದ ಅಪರಿಚಿತ ವಸಂತಿ ಅವರ ಬಳಿ ಕುಡಿಯಲು ನೀರು ಕೊಡುವಂತೆ ಕೇಳಿದ. ವಸಂತಿ ಅವರು ನೀರು ತರಲು ಮನೆಯೊಳಗೆ ಹೋದಾಗ ಆಕೆಯನ್ನು ಹಿಂಬಾಲಿಸಿದ ಆತ ಮನೆಯೊಳಗೆ ಹೋಗಿ ಆಕೆಯ ಕುತ್ತಿಗೆಯಲ್ಲಿದ್ದ 36 ಗ್ರಾಂ ತೂಕದ 1.60 ಲಕ್ಷ ರೂ ಮೌಲ್ಯ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಬೇಡ ಬೇಡವೆಂದರೂ ಗಿಫ್ಟ್ ಕಳುಹಿಸಿ ಮಹಿಳೆಗೆ 14.91 ಲ.ರೂ. ವಂಚನೆ!
ವಂಚಕ ಕಪ್ಪು ಬಣ್ಣದ ಬೈಕ್ ನಲ್ಲಿ ಬಂದಿದ್ದು, ನೀಲಿ ಬಣ್ಣದ ಗೆರೆಗಳಿರುವ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಹಾಗೂ ಕಪ್ಪುಬಣ್ಣದ ಹೆಲ್ಮೆಟ್ ಧರಿಸಿದ್ದ.
ಸರ ಕಳೆದುಕೊಂಡ ವಸಂತಿ ಅವರು ಶಿರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’