ನಿಟ್ಟೆ ಪರಿಸರದಲ್ಲಿ ಮಿತಿಮೀರಿದ ಮಂಗಗಳ ಉಪಟಳ

ಜನ ಕೈ ಚೆಲ್ಲಿ ಕುಳಿತಿದ್ದಾರೆ. ಪಂಚಾಯತ್‌, ಸರಕಾರಕ್ಕೆದೂರಿತ್ತರೂ ಪ್ರಯೋಜನವಾಗಿಲ್ಲ.

Team Udayavani, Jan 3, 2023, 2:12 PM IST

ನಿಟ್ಟೆ ಪರಿಸರದಲ್ಲಿ ಮಿತಿಮೀರಿದ ಮಂಗಗಳ ಉಪಟಳ

ಕಾರ್ಕಳ: ಒಂದೆಡೆ ಪ್ರಾಕೃತಿಕ ವಿಕೋಪದಿಂದ ಸಮಸ್ಯೆ. ಇನ್ನೊಂದೆಡೆ ನಿರಂತರ ಮಳೆಯಿಂದು ವಾತಾವರಣದಲ್ಲಿನ ಬದಲಾವಣೆಯಿಂದ ಕೃಷಿಗೆ ತೊಂದರೆ ಆಗುತ್ತಿದೆ. ಇದೆಲ್ಲದರ ಮಧ್ಯೆ ಉಳಿದ ಅಲ್ಪ ಫ‌ಸಲು ಮಂಗಗಳ ಪಾಲಾಗುತ್ತಿದೆ. ಇದರಿಂದ ಕೃಷಿಕರು ಬೇಸತ್ತು ಹೋಗಿದ್ದು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಾರ್ಕಳ ತಾಲೂಕಿನ ನಿಟ್ಟೆ ಪರಿಸರದ ಜನರಿಗೆ ಮಂಗಳಗಳ ಉಪಟಳ ಬಾರಿ ಹೆಚ್ಚಾಗಿದೆ. ಈ ಭಾಗದ ಹಲವು ಕೃಷಿಕರು ಮಂಗಗಳ ನಿರಂತರ ಉಪಟಳಕ್ಕೆ ಬೇಸತ್ತು ಹೋಗಿದ್ದಾರೆ. ಮಂಗಗಳು ಗುಂಪಾಗಿ ತೆಂಗು ತೋಟ ಸಹಿತ ಕೃಷಿ ತೋಟಗಳಿಗೆ ದಾಳಿಯಿಡುತ್ತಿವೆ. ಉಳಿಸಿಕೊಂಡ ಅಲ್ಪ ಫ‌ಸಲನ್ನು ಕೂಡ ಉಳಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಗೆ ಅವುಗಳ ಉಪಟಳ ತಳ್ಳಿದೆ. ಇದು ರೈತರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಅಸಂಖ್ಯಾಕ ಪ್ರಮಾಣದಲ್ಲಿ
ಕೃಷಿಕರ ಮನೆಗಳಿದ್ದು ಸೀಯಾಳ, ಅಡಿಕೆ ಇತರ ಅಲ್ಪಾವಧಿ ಬೆಳೆಗಳ ಫ‌ಸಲನ್ನು ತಿಂದು ಹಾಳುಗೆಡವುತ್ತಿವೆ.

ಸುತ್ತಮುತ್ತಲಿನ ಕಾಡಿನಿಂದ ಮಂಗಗಳ ಹಿಂಡು ತೋಟಗಳಿಗೆ ಮುತ್ತಿಗೆ ಹಾಕಿ ಬಿಡುತ್ತಿವೆ. ಅವುಗಳನ್ನು ಓಡಿಸುವ ಯಾವ ಪ್ರಯತ್ನಗಳು ಈಡೇರುತ್ತಿಲ್ಲ. ಹಿಂಡಾಗಿ ಬರುವ ಮಂಗಗಳು ತೆಂಗು ಕಂಗು ಬಾಳೆ ಹಲಸು ಮಿಶ್ರ ಬೆಳೆಗಳಿಗೆ ದಾಳಿಯಿಟ್ಟು ಅಪಾರ ಪ್ರಮಾಣದ ನಷ್ಟ ಆಗುತ್ತಿದೆ. ತಿಂದು ಬಿಸಾಡಿದ ಕಾಯಿಗಳ ಮರ ಬುಡದಲ್ಲಿ ನೋಡಿದರೆ ಮರುಕ ಹುಟ್ಟುತ್ತದೆ. ಅಷ್ಟು ಪ್ರಮಾಣದಲ್ಲಿ ಈ ಭಾಗದಲ್ಲಿ ಮಂಗಗಳಿಂದ ಉಪಟಳವಿದೆ ಎಂದು ಅಲ್ಲಿನ ಕೃಷಿಕರು ಅಳಲು ವ್ಯಕ್ತಪಡಿಸುತ್ತಿದ್ದಾರೆ.

ಮಂಗಗಳ ಹಾವಳಿ ತಡೆಯಲು ರೈತ ನಾನಾ ವಿಧದಲ್ಲಿ ಬೆದರುಗೊಂಬೆ, ಸಿಡಿಮದ್ದು, ಡಬ್ಬಿ ಶಬ್ಧ ಮಾಡಿ ಪ್ರಯತ್ನಿಸಿದರೂ ನಿಯಂತ್ರಣ ಸಾಧ್ಯವಾಗದೆ ಪರಿಸರದ ಜನ ಕೈ ಚೆಲ್ಲಿ ಕುಳಿತಿದ್ದಾರೆ. ಪಂಚಾಯತ್‌, ಸರಕಾರಕ್ಕೆದೂರಿತ್ತರೂ ಪ್ರಯೋಜನವಾಗಿಲ್ಲ. ಸರಕಾರದಿಂದ ಮಂಗಗಳ ಹಾವಳಿಯಿಂದ ಹಾನಿಗೊಳಗಾದ ಫ‌ಸಲುಗಳಿಗೆ ಸೂಕ್ತ ಪರಿಹಾರವನ್ನು ನೀಡುತ್ತಿಲ್ಲ. ಇವೆಲ್ಲದರಿಂದ ರೈತರು ಈಗ ಮಂಗಗಳ ಕಾಟದಿಂದ ಬೇಸತ್ತು ಹೋಗಿ ಕೃಷಿ ನಡೆಸುವುದಕ್ಕೆ ಹಿಂದೇಟು ಹಾಕುವ ಸ್ಥಿತಿಗೆ ತಲುಪಿದ್ದಾರೆ.

ಮನೆಗೂ ನುಗ್ಗುತ್ತವೆ
ಕೃಷಿ ತೋಟಗಳಿಗೆ ನುಗ್ಗುವ ವಾನರರು ಫ‌ಸಲು ನಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ಮನೆಯ ಅಂಗಳದವರೆಗೂ ಧಾವಿಸಿ ಬಂದು ಹೊಸ್ತಿಲಲ್ಲಿ ಬೆಳೆದ ತರಕಾರಿ, ಫ‌ಲ ಪುಷ್ಪಗಳಿಗೂ ಹಾನಿ ಮಾಡುತ್ತವೆ. ಮುಂದುವರಿದೂ ಮನೆಯ ಒಳಗಡೆಗೂ ಮುನ್ನುಗ್ಗಲು ಪ್ರಯತ್ನಿಸುತ್ತವೆ. ಒಂಟಿ ಹೆಂಗಸರು ಓಡಿಸಲು ಹೋದರೆ ಹೋದರೆ ಮಂಗಗಳೇ ತಿರುಗು ಹೆದರಿಸಿ ಕಳುಹಿಸುತ್ತಿವೆ.

ಇತ್ತೀಚಿನ ದಿನಗಳಲ್ಲಂತೂ ಈ ಭಾಗದಲ್ಲಿ ಅತೀವ ಸಮಸ್ಯೆಗಳನ್ನು ಮಂಗಗಳು ತಂದಿಡುತ್ತಿವೆ. ಅವುಗಳಿಗೆ ಯಾರ ಬಗ್ಗೆ ಯಾವ ಭಯವೂ ಇಲ್ಲ. ಇಲಾಖೆಗಳು ಇವುಗಳ ಹಾವಳಿ ತಡೆಗೆ ಏನಾದರೂ ಪ್ರಯತ್ನಗಳನ್ನು ನಡೆಸಬೇಕು. ಗರಿಷ್ಠ ಪ್ರಮಾಣದ ಪರಿಹಾರವನ್ನಾದರೂ ಹಾನಿಗೆ ನೀಡುವಂತಾಗಬೇಕು.
-ದಿನೇಶ್‌, ಸ್ಥಳೀಯ ಕೃಷಿ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.