ವಿವಿಧೆಡೆಯ 4 ಎಕರೆ ಪ್ರದೇಶದಲ್ಲಿ ಭತ್ತ ಕೃಷಿ
ಮಟ್ಟು: ಹಡಿಲು ಗದ್ದೆಗಿಳಿದ ಎಕ್ಸ್ ಕೆಡೆಟ್ ಟೀಂ
Team Udayavani, Jun 26, 2020, 5:15 AM IST
ಕಟಪಾಡಿ:ನೇಷನ್ ಫಸ್ಟ್ ತಂಡವು (ಎಕ್ಸ್ಕೆಡೆಟ್ ಟೀಂ) ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಪ್ರದೇಶದಲ್ಲಿ ಕೋಟೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ಸಾಧನಾ ದೇಜಪ್ಪ ಕೋಟ್ಯಾನ್ ಎಂಬವರ ಹಡಿಲು ಬಿದ್ದ ಗದ್ದೆಯಲ್ಲಿ ನೇಜಿ ನಾಟಿ ಮಾಡಿತು.
ಯುವ ಜನರನ್ನೇ ಹೊಂದಿದ್ದ ಈ ತಂಡವು ಉಳುಮೆ ಪೂರೈಸಿ ನಾಟಿ ಮಾಡಲು ಸಮತಟ್ಟುಗೊಳಿಸಿದ ಗದ್ದೆಯಲ್ಲಿ ಸಾಲು ನಾಟಿ ಪದ್ಧತಿಯಲ್ಲಿ ನೇಜಿ ನೆಟ್ಟರು.
ಸುಮಾರು 24 ದಿನಗಳ ಎಂ.ಒ. 4 ತಳಿಯ ನೇಜಿಯನ್ನು ನಾಟಿ ಪೂರೈಸಿದ ತಂಡದಲ್ಲಿ ಸುಮಾರು 20 ಮಂದಿ ತೊಡಗಿಸಿಕೊಂಡಿದ್ದರು.
ಕೃಷಿಯಿಂದ ವಿಮುಖರಾದವರನ್ನು ಸೆಳೆಯುವುದು ಮತ್ತು ಯುವ ಜನ ರಲ್ಲಿ ಕೃಷಿ ಬಗ್ಗೆ ಅರಿವು ಮೂಡಿಸುವ ಉದ್ದೇಶ ದಿಂದ ಈ ತಂಡವು ಉಡುಪಿಯ ವಿವಿಧ ಪ್ರದೇಶದಲ್ಲಿ ಸುಮಾರು 4 ಎಕರೆ ಹಡಿಲು ಬಿದ್ದ ಗದ್ದೆಯನ್ನು ಈ ವರ್ಷ ನಾಟಿ ಮಾಡುತ್ತಿದೆ.
ನೇಷನ್ ಫಸ್ಟ್ ತಂಡವು ಮೆ| ಪ್ರಕಾಶ್ ರಾವ್ ಅವರ ಮಾರ್ಗದರ್ಶನ ಮತ್ತು ಸೂರಜ್ ಕಿದಿಯೂರು ಅವರ ನೇತೃತ್ವದಲ್ಲಿ ಕೃಷಿ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ