ಮಹಾಲಿಂಗೇಶ್ವರನಿಗೆ ತೇರು ಕಟ್ಟುವ ಕಡಲ ಮಕ್ಕಳು


Team Udayavani, Mar 17, 2019, 4:35 AM IST

padu.png

ಪಡುಬಿದ್ರಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರೆ ಧ್ವಜಾ ರೋಹಣವಾಗಿದ್ದು, ಇದೀಗ ತೇರು ಕಟ್ಟುವ ಕಾರ್ಯ ಶುರುವಾಗಿದೆ.

ತೇರು ಕಟ್ಟುವ ಕಾರ್ಯಕ್ಕೆ ವಿಶೇಷ ಮಹತ್ವವಿದ್ದು  ಮೊಗವೀರ ಸಮಾಜದವರೇ ಇಲ್ಲಿ ತೇರು ಕಟ್ಟುತ್ತಾರೆ. ಕಡಲ ಮಕ್ಕಳು ಕಾಯಕಕ್ಕೆ ರಜೆ ಸಾರಿ ತೇರು ಕಟ್ಟುವ ಕಾಯಕವನ್ನು ನೂರಾರು ವರ್ಷಗಳಿಂದ ಚಾಚೂ ತಪ್ಪದೆ ನಡೆಸಿಕೊಂಡು ಬರುತ್ತಿದ್ದಾರೆ.

ಮೊಗವೀರ ಸಮಾಜದಿಂದ ಸೇವೆ
ಮಾ.14ರಂದು ಜಾತ್ರೆ ಆರಂಭವಾಗಿದ್ದು, ಮಾ.21ರಂದು ದೇವರ ರಥೋತ್ಸವ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಪಡುಬಿದ್ರಿ ಕಾಡಿಪಟ್ಣ ಹಾಗೂ ನಡಿಪಟ್ಣ ಎಂಬ ಎರಡು ಊರು ಮೊಗವೀರ ಸಮುದಾಯದವರು ಸಾಂಘಿಕವಾಗಿ ಪಡುಬಿದ್ರಿ ದೇಗುಲದ ರಥವನ್ನು ಆಯ ಪ್ರಮಾಣ ಬದ್ಧವಾಗಿ ಕಟ್ಟಿ ಕೊಡುತ್ತಾರೆ. ದೊಡ್ಡ ವ್ಯಾಸದ ಸುತ್ತಳತೆಯ ಈ ಬ್ರಹ್ಮರಥವನ್ನು ಆಯನದ ಬಲಿ ನಡೆದ ಬಳಿಕ ಬೆಳಗ್ಗಿನ 7ಗಂಟೆಗೆ ಹೊರತರುತ್ತಾರೆ. ನಾಲ್ಕು ಘನಮರಗಳನ್ನು ನೆಟ್ಟು, 6 ಅಡ್ಡ ಹಲಗೆಗಳ ಅಖಾಡಗಳನ್ನು ನಿರ್ಮಿಸಿ, ಬೆತ್ತ ಹಾಗೂ ಅಡಕೆ ರೀಪುಗಳನ್ನು  ಸುತ್ತಲೂ ಕಟ್ಟಿ ಮಧ್ಯಾಹ್ನದ 1-30ರ ಸುಮಾರಿಗೆ ಪೂರ್ಣಗೊಳಿಸಿ, ರಥದ ತುತ್ತತುದಿಯ ಮುಕುಟವನ್ನೂ ಇಟ್ಟು ಸಿದ್ಧಗೊಳಿಸುತ್ತಾರೆ.  

ತೇರು ಹೊರಕ್ಕೆ ತರುವ ಮೊದಲು ಗ್ರಾಮ ದೇವರು, ಶ್ರೀ ಕುಲಮಹಾಸ್ತ್ರೀ, ಶ್ರೀ ಮಹಾಲಕ್ಷಿ$¾à ದೇವರನ್ನು ಪ್ರಾರ್ಥಿಸಿ ಕೆಲಸವನ್ನು ಆರಂಭಿಸುತ್ತಾರೆ. ಬಳಿಕ ಕಟ್ಟಿದ ತೇರನ್ನು ದೇವಸ್ಥಾನದ ಎದುರು ಎಳೆದು ತಂದು ನಿಲ್ಲಿಸುತ್ತಾರೆ. ಅಲ್ಲಿಂದ ದೇವಸ್ಥಾನದ ಧ್ವಜಸ್ತಂಭದ ಮುಂದೆ ತೆರಳಿ ಅರ್ಚಕರೊಂದಿಗೆ ಮೊಗವೀರ ಜನಾಂಗದ ಉನ್ನತಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಗುತ್ತದೆ. ಬಳಿಕ ಪ್ರಸಾದ ನೀಡಲಾಗುತ್ತದೆ. 

ತೇರು ಕಟ್ಟುವ ಗೌರವ
ಹಿಂದೆ ತೇರು ಕಟ್ಟಲು ವ್ಯಕ್ತಿಯೊಬ್ಬರಿಗೆ 1-2 ರೂ. ನೀಡಲಾಗುತ್ತಿದ್ದು. ಇಂದು ದೇಗುಲ ಭಂಡಾರದಿಂದ 90 ರೂ. ಪಾವತಿಸಲಾಗುತ್ತದೆ. ದೇಗುಲ ರಥ ಕಟ್ಟುವುದು ಒಂದು ಗೌರವವಾಗಿದ್ದು ಮೊಗವೀರ ಸಮುದಾಯದವರು ಇದನ್ನು ಶ್ರದ್ಧಾ ಭಕ್ತಿಗಳಿಂದ ಮಾಡುತ್ತಾರೆ. ರಥ ಕಟ್ಟುವ ಕಾಯಕದ ಬಳಿಕ ಶ್ರದ್ಧಾಳುಗಳಿಗೆ ಅನ್ನಪ್ರಸಾದ ಬಡಿಸಲಾಗುತ್ತದೆ.  
ಈ ಬಾರಿ ತೇರು ಕಟ್ಟುವ ಕಾಯಕವನ್ನು ಪಡುಬಿದ್ರಿ ನಡಿಪಟ್ಣ, ಕಾಡಿಪಟ್ಣ ಸಂಯುಕ್ತ ಸಭೆಯ ಅಧ್ಯಕ್ಷ ಸುಕುಮಾರ್‌ ಶ್ರೀಯಾನ್‌, ಕಾಡಿಪಟ್ಣ ಮೊಗವೀರ ಸಭೆಯ ಅಧ್ಯಕ್ಷ ಲೀಲಾಧರ ಸಾಲ್ಯಾನ್‌, ನಡಿಪಟ್ಣ ಸಭೆಯ ಅಧ್ಯಕ್ಷ ಶೇಖರ ಸಾಲ್ಯಾನ್‌ ಯುವಕರ ಮತ್ತು ಹಿರಿಯರ ದಂಡಿನೊಂದಿಗೆ ನಡೆಸಿದ್ದಾರೆ.  

ಟಾಪ್ ನ್ಯೂಸ್

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.