ಮೀನುಗಾರರ ಬಿಡುಗಡೆಗೆ ನೆರವಾಗಿದ್ದ ಮನೋಹರ ಪಾರೀಕರ್
Team Udayavani, Mar 18, 2019, 3:45 AM IST
ಉಡುಪಿ: ಮಲ್ಪೆ ಭಾಗದಿಂದ ಮೀನುಗಾರಿಕೆಗೆ ತೆರಳಿ ಗೋವಾ ಗಡಿಯಲ್ಲಿ ಬಂಧನವಾದಾಗ ಮುಖ್ಯಮಂತ್ರಿಯಾಗಿದ್ದ ಮನೋಹರ ಪಾರೀಕರ್ ಮಾಡಿದ ನೆರವನ್ನು ಮೀನುಗಾರರು ಎಂದಿಗೂ ಮರೆಯುವಂತಿಲ್ಲ.
11 ಬೋಟುಗಳಲ್ಲಿ ತಲಾ ಐದಾರು ಮೀನುಗಾರರಿದ್ದರು. ಇವರು ಕಾನೂನು ಉಲ್ಲಂ ಸಿದರೆಂದು ಗೋವಾದಲ್ಲಿ ಬೋಟುಗಳನ್ನು ವಶಕ್ಕೆ ತೆಗೆದು ಕೊಳ್ಳಲಾಗಿತ್ತು. ಆಗ ಕೇಂದ್ರ ಸಚಿವರಾಗಿದ್ದ ಅನಂತಕುಮಾರ್ ಮೂಲಕ ತಿಳಿಸಿ ಶಾಸಕ ಕೆ.ರಘುಪತಿ ಭಟ್ ಅವರು ಮೀನುಗಾರರ ನಿಯೋಗದೊಂದಿಗೆ ಗೋವಾಕ್ಕೆ ತೆರಳಿದರು. ಪಾರೀಕರ್ ಅವರು ಚಹಾ ಕೊಟ್ಟು ಮುಖ್ಯ ಕಾರ್ಯದರ್ಶಿಯವರನ್ನು ಕರೆಸಿ ಅತಿ ಕಡಿಮೆ ದಂಡ ವಿಧಿಸಿ ಬಿಡುಗಡೆಗೊಳಿಸುವಂತೆ ಸೂಚಿಸಿದರು.
“ಒಂದು ವೇಳೆ ಪಾರೀಕರ್ ಮಧ್ಯ ಪ್ರವೇಶ ಮಾಡದೆ ಇದ್ದರೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತಿತ್ತು ಮತ್ತು ತುಂಬ ಸಮಸ್ಯೆ ಆಗುತ್ತಿತ್ತು’ ಎಂಬುದನ್ನು ರಘುಪತಿ ಭಟ್ ಅವರು ಸ್ಮರಿಸಿಕೊಳ್ಳುತ್ತಾರೆ. ರಕ್ಷಣಾ ಸಚಿವರಾಗಿದ್ದಾಗ ಅವರ ಸರಳತೆ ಮಾಧ್ಯಮಗಳಲ್ಲಿ ಕಂಡಿದ್ದ ಭಟ್ ಅವರಿಗೆ ಮುಖ್ಯಮಂತ್ರಿಯಾಗಿದ್ದಾಗ ಸಮೀಪದಲ್ಲಿ ನೋಡುವ ಅವಕಾಶ ದೊರಕಿತು.
ಜಿಎಸ್ಬಿ ಹಿತರಕ್ಷಣಾ ವೇದಿಕೆ ಪಡುಬಿದ್ರಿಯಲ್ಲಿ ಎರಡು ವರ್ಷಗಳ ಹಿಂದೆ ಸಮಾವೇಶವನ್ನು ಆಯೋಜಿಸಿದಾಗ ಪಾರೀಕರ್ ಅವರು ಕೇಂದ್ರ ರಕ್ಷಣಾ ಸಚಿವರಾಗಿದ್ದರು. ಆ ಸಂದರ್ಭ ಉಧ್ಘೋಧಕ ಸಂದೇಶ ನೀಡಿದ ಪರಿಕ್ಕರ್ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ರಾಜಾಂಗಣದ ಸಭೆಯಲ್ಲಿಯೂ ಪಾಲ್ಗೊಂಡರು. ಆಗ ಪೇಜಾವರ ಶ್ರೀಗಳ ಐದನೆಯ ಪರ್ಯಾಯದ ಅವಧಿ. ಪರಿಕ್ಕರ್ ಅವರು ಚುನಾವಣೆ ವೇಳೆಯೂ ಆಗಮಿಸಿ ಬಿಜೆಪಿ ಪರ ಪ್ರಚಾರ ಭಾಷಣ ಮಾಡಿದ್ದರು.
ಪಾರೀಕರ್ ನಿಧನಕ್ಕೆ ಸಂತಾಪ
ಗೋವಾ ಮುಖ್ಯಮಂತ್ರಿ ಮನೋಹರ ಪಾರೀಕರ್ ನಿಧನಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಕೆ. ರಘುಪತಿ ಭಟ್, ಜಿಎಸ್ಬಿ ಹಿತರಕ್ಷಣಾ ವೇದಿಕೆ ಸಂಚಾಲಕ ವಿವೇಕಾನಂದ ಶೆಣೈ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ
Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ
Veerappa Moily; ದೇಶಕ್ಕೆ ಕ್ರಿಕೆಟ್ ಕಾಮೆಂಟ್ರಿಯನ್ ಬೇಕಿಲ್ಲ
Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
MUST WATCH
ಹೊಸ ಸೇರ್ಪಡೆ
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ