ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ಅತ್ಯಂತ ಆದರತೆಯಿಂದ ಉಪಚರಿಸಬೇಕು : ಸುನೀಲ್ ಕುಮಾರ್
Team Udayavani, May 8, 2021, 12:09 PM IST
ಕಾರ್ಕಳ : ವೈದ್ಯಕೀಯ ಚಿಕಿತ್ಸೆ ಬಯಸಿ ಸರಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ಅತ್ಯಂತ ಆದರತೆಯಿಂದ ಉಪಚರಿಸಬೇಕು. ಆಸ್ಪತ್ರೆ ಹೊರಗೆ , ವಾಹನಗಳಲ್ಲಿ ಕಾಯುವುದನ್ನು ತಪ್ಪಿಸಲು ಕಾರ್ಕಳ ಸರಕಾರಿ ಆಸ್ಪತ್ರೆ ಮುಂದೆ ಹಾಸಿಗೆಯುಳ್ಳ ಉಪಚರಿಸುವ ನಾಲ್ಕು ಬೆಡ್ ಗಳ ಆರೈಕೆ ಕೇಂದ್ರ ತೆರೆಯಲಾಗುವುದು ಎಂದು ಶಾಸಕ ವಿ.ಸುನೀಲ್ ಕುಮಾರ್ ಹೇಳಿದರು.
ಶನಿವಾರ ತಾಲೂಕು ಆಸ್ಪತ್ರೆಗೆ ತೆರಳಿ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಜತೆ ಮಾತುಕತೆ ನಡೆಸಿ ಆಸ್ಪತ್ರೆಯ ಕೋವಿಡ್ ನಿರ್ವಹಣೆ ಕುರಿತು ಪರಿಶೀಲಿಸಿ ಮಾತನಾಡಿದರು.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೆ ಸಮಸ್ಯೆಯಾಗಬಾರದು. ಈ ಕಾರಣಕ್ಕೆ ಬಹುಶ; ರಾಜ್ಯದಲ್ಲೆ ಇಂತಹದ್ದೊಂದು ವ್ಯವಸ್ಥೆ ಅಪರೂಪ. ಮೊದಲ ಬಾರಿಗೆ ಆಸ್ಪತ್ರೆಯಲ್ಲಿ ತೆರೆಯಲಾಗುತ್ತಿದೆ ಎಂದರು. ಅನಂತರ ಅವರು ಆಸ್ಪತ್ರೆಯಲ್ಲಿ ತೆರೆಯಲಾಗುವ ಆಕ್ಸಿಜನ್ ಸೆಂಟರ್ ಜಾಗ ಪರಿಶೀಲಿಸಿದರು. ತಾಲೂಕು ವೈದ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ.ಆಡಳಿತಾಧಿಕಾರಿ ಡಾ.ಕೆ.ಎಸ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ