ಡಾ| ಪೈಯವರಿಂದ ಜಗದ ಕಣ್ಣು ಮಣಿಪಾಲದತ್ತ: ಪೇಜಾವರ ಶ್ರೀ

ಡಾ| ಟಿಎಂಎ ಪೈ 125ನೇ ಜನ್ಮದಿನೋತ್ಸವದಲ್ಲಿ ಪೇಜಾವರ ಶ್ರೀಗಳು

Team Udayavani, May 1, 2023, 6:35 AM IST

ಡಾ| ಪೈಯವರಿಂದ ಜಗದ ಕಣ್ಣು ಮಣಿಪಾಲದತ್ತ: ಪೇಜಾವರ ಶ್ರೀ

ಮಣಿಪಾಲ: ಡಾ| ಟಿಎಂಎ ಪೈ ಅವರ ಸತತ ಪ್ರಯತ್ನ ಶೀಲತೆಯಿಂದಾಗಿ ಇಂದು ಮಣಿಪಾಲವನ್ನು ಪ್ರಪಂಚವೇ ಕಣ್ಣೆತ್ತಿ ನೋಡುವಂತಾಗಿದೆ ಮತ್ತು ಉಡುಪಿಗೆ ಮಣಿಪಾಲ ಒಂದು ಹೆಮ್ಮೆಯ ಸಂಕೇತವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಮಣಿಪಾಲ ಸಮೂಹ ಸಂಸ್ಥೆಗಳ ವತಿಯಿಂದ ಹೊಟೇಲ್‌ ವ್ಯಾಲಿವ್ಯೂ ಸಭಾಂಗಣದಲ್ಲಿ ರವಿವಾರ ನಡೆದ ಸಂಸ್ಥಾಪಕರ ದಿನಾಚರಣೆಯಲ್ಲಿ (ಡಾ| ಟಿಎಂಎ ಪೈ ಅವರ 125ನೇ ಜನ್ಮದಿನ) ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಶೀರ್ವಚನ ನೀಡಿದ ಶ್ರೀಪಾದರು, ಒಬ್ಬ ವ್ಯಕ್ತಿಯ ಜನ್ಮದಿನವನ್ನು ಸಾಮೂಹಿಕವಾಗಿ ಆಚರಿಸುವ ಹಿಂದೆ ಅವರು ಸಮಾಜಕ್ಕೆ ನೀಡಿದ ಕೊಡುಗೆ ಇರುತ್ತದೆ ಎಂದರು.

ಮಣ್ಣ ಪಳ್ಳದಂತಹ (ಮಣ್ಣಿನ ಹಳ್ಳ) ಪ್ರದೇಶದಲ್ಲಿ ಡಾ| ಪೈಯವರು ಕಂಡ ಹತ್ತು ಹಲವು ಕನಸುಗಳು ನನಸಾಗುವುದಕ್ಕೆ ಅವರ ಪ್ರಯತ್ನವಿದೆ. ಇದಕ್ಕಾಗಿ ಪ್ರಪಂಚವೇ ಮಣಿಪಾಲವನ್ನು ಅಚ್ಚರಿಯಿಂದ ನೋಡುವಂತಾಗಿದೆ ಎಂದು ಹೇಳಿದರು.

ದೂರದೃಷ್ಟಿ ವ್ಯಕ್ತಿತ್ವ
ಎಸೆಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪ್ಲಂಬಿಂಗ್‌, ಕಾಪೆìಂಟರಿ ಮೊದಲಾದ ವೃತ್ತಿ ಕೌಶಲ ಹೆಚ್ಚಿಸಲು 1940ರ ದಶಕದಲ್ಲಿಯೇ ಡಾ| ಟಿಎಂಎ ಪೈಯವರು ಅಕಾಡೆಮಿ ಆಫ್ ಜನರಲ್‌ ಎಜುಕೇಶನ್‌ (ಎಜಿಇ) ಸಂಸ್ಥೆಯನ್ನು ಹುಟ್ಟುಹಾಕಿದರು. ಈಗ ಹೊಸ ಶಿಕ್ಷಣ ನೀತಿಯಡಿ ಕೌಶಲಾಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. 1953ರಲ್ಲಿ ದೇಶದ ಮೊದಲ ಪಬ್ಲಿಕ್‌ ಪ್ರೈವೇಟ್‌ ಪಾರ್ಟ್‌ನರ್‌ಶಿಪ್‌ (ಪಿಪಿಪಿ) ಮಾದರಿಯ ವೈದ್ಯಕೀಯ ಕಾಲೇಜನ್ನು ಮಣಿಪಾಲದಲ್ಲಿ ಆರಂಭಿಸಿದರು. ಈಗ ಪಿಪಿಪಿ ಮಾದರಿ ರಾಷ್ಟ್ರದ ನೀತಿಯಾಗಿದೆ. ಜನಸಂಖ್ಯೆಯನ್ನು ದೇಶದ ಸಂಪತ್ತಾಗಿ ರೂಪಿಸುವ ಕನಸು ಕಂಡವರು ಡಾ| ಪೈ. ಇಂತಹವರೇ ದೂರದೃಷ್ಟಿಯುಳ್ಳವರು ಎಂದು ಸ್ವಾಗತಿಸಿದ ಮಾಹೆ ಸಹಕುಲಾಧಿಪತಿ, ಎಜಿಇ ಅಧ್ಯಕ್ಷ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು.

ಡಾ| ಟಿಎಂಎ ಪೈಯವರ ಜೀವನ ಗಾಥೆಯನ್ನು ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಸ್ಮರಿಸಿ ಇಂದು ಭಾರತ ಸರಕಾರದಿಂದ ಮಾನ್ಯತೆ ಪಡೆದ ಶ್ರೇಷ್ಠ ಸಂಸ್ಥೆಯಾಗಿದೆ. ವಿದೇಶಗಳಲ್ಲಿಯೂ ಕ್ಯಾಂಪಸ್‌ ಹೊಂದಿದೆ ಎಂದರು.

“ಸುದರ್ಶನ’ ಕೃತಿ ಬಿಡುಗಡೆ
ಮಾಹೆ ಪ್ರಸಾರಾಂಗವಾದ ಮಣಿಪಾಲ್‌ ಯುನಿವರ್ಸಲ್‌ ಪ್ರಸ್‌ (ಎಂಯುಪಿ) ಮರುಮುದ್ರಿಸಿದ ಮೂಲ್ಕಿ ವಿಜಯಾ ಕಾಲೇಜಿನ ಡಾ| ಅಡ್ಯನಡ್ಕ ಕೃಷ್ಣ ಭಟ್‌ ಸಂಪಾದಿಸಿದ್ದ ಡಾ| ಪೈಯವರ ಸಾಧನೆಗಳನ್ನು ವಿವರಿಸುವ “ಸುದರ್ಶನ’ ಕೃತಿಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿದರು.

ಎಜಿಇ ಕುಲಸಚಿವ, ಮಣಿಪಾಲ್‌ ಎಜುಕೇಶನ್‌ ಆ್ಯಂಡ್‌ ಮೆಡಿಕಲ್‌ ಗ್ರೂಪ್‌ (ಎಂಇಎಂಜಿ) ಅಧ್ಯಕ್ಷ ಡಾ| ರಂಜನ್‌ ಪೈಯವರು ಸ್ವಾಮೀಜಿಯವರನ್ನು ಗೌರವಿಸಿದರು. ಮಾಹೆ ಟ್ರಸ್ಟಿ ವಸಂತಿ ಆರ್‌. ಪೈ, ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿ., ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್‌ ಯು. ಪೈ, ಡಾ| ಟಿ.ಎಂ.ಎ. ಪೈ ಫೌಂಡೇಶನ್‌ ಅಧ್ಯಕ್ಷ ಟಿ. ಅಶೋಕ್‌ ಪೈ ಉಪಸ್ಥಿತರಿದ್ದರು. ಮಾಹೆ ಸಹಕುಲಪತಿ ಡಾ| ನಾರಾಯಣ ಸಭಾಹಿತ್‌ ಅತಿಥಿ ಪರಿಚಯ ಮಾಡಿದರು. ಕುಲ ಸಚಿವ ಡಾ| ಗಿರಿಧರ್‌ ಕಿಣಿ ವಂದಿಸಿದರು. ಗಾಂಧಿಯನ್‌ ಸೆಂಟರ್‌ನ ಸುಶ್ಮಿತಾ ಶೆಟ್ಟಿ ನಿರ್ವಹಿಸಿದರು. “ಸುದರ್ಶನ’ ಕೃತಿ ಕುರಿತು ಪ್ರಾಧ್ಯಾಪಕ ಡಾ| ಶ್ರೀನಿವಾಸಾಚಾರ್ಯ ವಿವರಿಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳು, ಶ್ರೇಷ್ಠ ವೃತ್ತಿಪರ ಸಿಬಂದಿಗಳನ್ನು ಪುರಸ್ಕರಿಸಲಾಯಿತು.

ಶ್ರೀವಿಶ್ವೇಶತೀರ್ಥರ ಜನ್ಮನಕ್ಷತ್ರ, ಡಾ| ಪೈ ಜನ್ಮದಿನ ಒಂದೇ ದಿನ…!
ನಮ್ಮ ಗುರುಗಳಿಗೂ (ಶ್ರೀ ವಿಶ್ವೇಶತೀರ್ಥ ಶ್ರೀಪಾದರು) ಡಾ| ಟಿಎಂಎ ಪೈಯವರಿಗೂ ಇದ್ದ ಬಾಂಧವ್ಯ ಲೌಕಿಕವಾದುದಲ್ಲ, ದೈವಿಕವಾದುದು. ಅವರ ಹೆಸರಿನಲ್ಲಿಯೇ ಅದು (ಅನಂತ) ಅಡಕವಾಗಿದೆ. ಯಾವುದೇ ಕಾರ್ಯ ಮಾಡುವ ಮುನ್ನ ಡಾ| ಪೈಯವರು ಗುರುಗಳಲ್ಲಿ ಚರ್ಚೆ ನಡೆಸು ತ್ತಿದ್ದರು. ಇವರಿಬ್ಬರ ಒಡನಾಟ, ಬಾಂಧವ್ಯ ಕೃಷ್ಣಾರ್ಜುನರ ಸಂಬಂಧದಂತೆ. ನಮ್ಮ ಗುರುಗಳ 93ನೇ ಜನ್ಮನಕ್ಷತ್ರದ ದಿನವಾದ ಇಂದೇ ಡಾ| ಪೈಯವರ 125ನೇ ಜನ್ಮದಿನೋತ್ಸವ ನಡೆದಿರುವುದು ಆ ಬಾಂಧವ್ಯವನ್ನು ತೋರಿಸುತ್ತದೆ.
– ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಪೇಜಾವರ ಮಠ, ಉಡುಪಿ

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.