Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ
ಮೈಸೂರು ಕೇಂದ್ರ ಕಾರಾಗೃಹದ ಖೈದಿಗಳಿಗೆ ರಾಮ ಮಂತ್ರ ಬೋಧನೆ
Team Udayavani, Sep 29, 2023, 1:14 PM IST
ಉಡುಪಿ: ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು, ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಂದೇಶ ನೀಡಿದ್ದಾರೆ.
ಮೈಸೂರಿನಲ್ಲಿ ತಮ್ಮ 36 ನೇ ಚಾತುರ್ಮಾಸ್ಯ ವ್ರತದ ಕೊನೆಯ ದಿನ ಶುಕ್ರವಾರದಂದು ಮೈಸೂರಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಲಯನ್ಸ್ ಕ್ಲಬ್ , ರೋಟರಿ ಕ್ಲಬ್ , ರೋಟರಿ ಇನ್ನರ್ ವೀಲ್ ಕ್ಲಬ್ ಗಳ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ವಿವಿಧ ಸವಲತ್ರು ವಿತರಣೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಖೈದಿಗಳಿಗೆ ರಾಮ ಮಂತ್ರ ಬೋಧಿಸಿ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿಗಳು ಮಾನವರೆನಿಸಿಕೊಂಡ ನಾವು ಸಂಘ ಜೀವಿಗಳು . ನಾವು ಯಾರೂ ಒಬ್ಬರೇ ಜೀವಿಸಲು ಕಷ್ಟ ಹೀಗಿರುವಾಗ ಎಲ್ಲರೂ ಸುಖ ಸಂತೋಷಕ್ಕಾಗಿ ಹಂಬಲಿಸುತ್ತೇವೆ ಎಂದರು.
ಕೆಲವು ಬಾರಿ ನಮ್ಮ ಸುಖ ಸಂತೋಷಕ್ಕಾಗಿ ಅನ್ಯರಿಗೆ ಕಷ್ಟ ದುಃಖ ಕೊಡುತ್ತೇವೆ, ಇದಕ್ಕಾಗಿ ಕೆಟ್ಟ ಕೆಲಸಗಳಿಗೂ ಮುಂದಾಗುತ್ತೇವೆ. ಅದರಿಂದಾಗಿ ಸಮಾಜದಲ್ಲಿ ಅಶಾಂತಿ ಅಪರಾಧಗಳು, ದುಃಖ ಕಷ್ಟ ನಷ್ಟಗಳು ಉಂಟಾಗುತ್ತವೆ. ಆದ್ದರಿಂದ ಅನ್ಯರಿಗೆ ದುಃಖವಾದರೂ ಪರವಾಗಿಲ್ಲ ನಮ್ಮ ಸುಖ ಸಂತೋಷ ಮುಖ್ಯ ಎಂಬ ಮನಸ್ಥಿತಿಯಿಂದ ಹೊರಬಂದು ನಮ್ಮಸಂತೋಷ ಅನ್ಯರ ಸಂತೋಷಕ್ಕೂ ಕಾರಣವಾಗುವ ಸತ್ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು ಎಂದು ಸಂದೇಶ ನೀಡಿದರು.
ಒಂದು ವೇಳೆ ಇನ್ನೊಬ್ಬರಿಗೆ ನಮ್ಮಿಂದ ಒಳಿತಾಗದಿದ್ದರೂ ಕೆಡುಕಾಗದಂತೆ ಎಚ್ಚರ ವಹಿಸಬೇಕು ಇದರಿಂದ ಇಹದಲ್ಲೂ ಪರದಲ್ಲೂ ನಮಗೆಲ್ಲ ಶ್ರೇಯಸ್ಸಿದೆ ಅದನ್ನೇ ಧರ್ಮ ಎನ್ನುವುದು. ಅಂಥಹ ಸನಾತನ ಧರ್ಮವೇ ಶಾಶ್ವತವೂ ಆಗಿದೆ ಎಂದು ಹೇಳಿದರು.
ಬೇಟೆ, ದರೋಡೆ ಮೊದಲಾದ ಕೆಲಸಗಳಲ್ಲಿಯೇ ಬದುಕುತ್ತಿದ್ದ ವಾಲ್ಮೀಕಿ ಒಂದು ತಿರುವಿನಿಂದ ತಿಳಿವಳಿಕೆ ಪಡೆದು ರಾಮಮಂತ್ರವನ್ನು ಜಪಿಸುತ್ತಾ ರಾಮಾಯಣವನ್ನೇ ರಚಿಸಿ ಇವತ್ತು ಲೋಕವೆಲ್ಲ ಪೂಜಿಸುವ ಮಹರ್ಷಿಯಾದ. ಇದು ನಮಗೆ ಮಾದರಿಯಾಗಬೇಕು. ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಂದೇಶ ನೀಡಿದ್ದಾರೆ.
ತಿಳಿದೋ ತಿಳಿಯದೆಯೋ ಅಪರಾಧಗಳು ನಮ್ಮಿಂದಾಗುತ್ತವೆ. ನಾಗರಿಕ ಸಮಾಜದ ನಿಯಮಾನುಸಾರ ಶಿಕ್ಷೆ ಅನುಭವಿಸಬೇಕಾಗುತ್ತದೆ ಆದರೆ ಶಿಕ್ಷೆ ಅನುಭವಿಸಿ ಹೊರಗೆ ಬರುವಾಗ ನಮ್ಮ ಆತ್ಮಸಾಕ್ಷಿಯಾಗಿ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟಾಗ ಪರಿಶುದ್ಧರಾಗಲು ಸಾಧ್ಯವಿದೆ ಮುಂದೆ ಇಂಥಹ ಅಪರಾಧಗಳನ್ನು ನಡೆಸದೇ ಒಳ್ಳೆಯ ನಾಗರಿಕರಾಗಿ ಬದುಕುವ ಮೂಲಕ ಅಪರಾಧ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸೋಣ ಎಂದು ಕಿವಿಮಾತು ಹೇಳಿದರು. ಜಿಲ್ಲಾ ಕೇಂದ್ರ ಕಾರಾಗೃಹ ಅಧೀಕ್ಷಕ ಪಿ ಎಸ್ ರಮೇಶ್, ಲಯನ್ಸ್, ರೋಟರಿ, ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ