Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

ಮೈಸೂರು ಕೇಂದ್ರ ಕಾರಾಗೃಹದ ಖೈದಿಗಳಿಗೆ ರಾಮ ಮಂತ್ರ ಬೋಧನೆ

Team Udayavani, Sep 29, 2023, 1:14 PM IST

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

ಉಡುಪಿ: ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು, ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಂದೇಶ ನೀಡಿದ್ದಾರೆ.

ಮೈಸೂರಿನಲ್ಲಿ ತಮ್ಮ 36 ನೇ ಚಾತುರ್ಮಾಸ್ಯ ವ್ರತದ ಕೊನೆಯ ದಿನ ಶುಕ್ರವಾರದಂದು ಮೈಸೂರಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಲಯನ್ಸ್ ಕ್ಲಬ್ , ರೋಟರಿ ಕ್ಲಬ್ , ರೋಟರಿ ಇನ್ನರ್ ವೀಲ್ ಕ್ಲಬ್ ಗಳ ಆಶ್ರಯದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ವಿವಿಧ ಸವಲತ್ರು ವಿತರಣೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಖೈದಿಗಳಿಗೆ ರಾಮ ಮಂತ್ರ ಬೋಧಿಸಿ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿಗಳು ಮಾನವರೆನಿಸಿಕೊಂಡ ನಾವು ಸಂಘ ಜೀವಿಗಳು . ನಾವು ಯಾರೂ ಒಬ್ಬರೇ ಜೀವಿಸಲು ಕಷ್ಟ ಹೀಗಿರುವಾಗ ಎಲ್ಲರೂ ಸುಖ ಸಂತೋಷಕ್ಕಾಗಿ ಹಂಬಲಿಸುತ್ತೇವೆ ಎಂದರು.

ಕೆಲವು ಬಾರಿ ನಮ್ಮ ಸುಖ ಸಂತೋಷಕ್ಕಾಗಿ ಅನ್ಯರಿಗೆ ಕಷ್ಟ ದುಃಖ ಕೊಡುತ್ತೇವೆ, ಇದಕ್ಕಾಗಿ ಕೆಟ್ಟ ಕೆಲಸಗಳಿಗೂ ಮುಂದಾಗುತ್ತೇವೆ. ಅದರಿಂದಾಗಿ ಸಮಾಜದಲ್ಲಿ ಅಶಾಂತಿ ಅಪರಾಧಗಳು, ದುಃಖ ಕಷ್ಟ ನಷ್ಟಗಳು ಉಂಟಾಗುತ್ತವೆ. ಆದ್ದರಿಂದ ಅನ್ಯರಿಗೆ ದುಃಖವಾದರೂ ಪರವಾಗಿಲ್ಲ ನಮ್ಮ ಸುಖ ಸಂತೋಷ ಮುಖ್ಯ ಎಂಬ ಮನಸ್ಥಿತಿಯಿಂದ ಹೊರಬಂದು ನಮ್ಮಸಂತೋಷ ಅನ್ಯರ ಸಂತೋಷಕ್ಕೂ ಕಾರಣವಾಗುವ ಸತ್ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು ಎಂದು ಸಂದೇಶ ನೀಡಿದರು.

ಒಂದು ವೇಳೆ ಇನ್ನೊಬ್ಬರಿಗೆ ನಮ್ಮಿಂದ ಒಳಿತಾಗದಿದ್ದರೂ ಕೆಡುಕಾಗದಂತೆ ಎಚ್ಚರ ವಹಿಸಬೇಕು ಇದರಿಂದ ಇಹದಲ್ಲೂ ಪರದಲ್ಲೂ ನಮಗೆಲ್ಲ ಶ್ರೇಯಸ್ಸಿದೆ ಅದನ್ನೇ ಧರ್ಮ ಎನ್ನುವುದು. ಅಂಥಹ ಸನಾತನ ಧರ್ಮವೇ ಶಾಶ್ವತವೂ ಆಗಿದೆ ಎಂದು ಹೇಳಿದರು.

ಬೇಟೆ, ದರೋಡೆ ಮೊದಲಾದ ಕೆಲಸಗಳಲ್ಲಿಯೇ ಬದುಕುತ್ತಿದ್ದ ವಾಲ್ಮೀಕಿ ಒಂದು ತಿರುವಿನಿಂದ ತಿಳಿವಳಿಕೆ ಪಡೆದು ರಾಮಮಂತ್ರವನ್ನು ಜಪಿಸುತ್ತಾ ರಾಮಾಯಣವನ್ನೇ ರಚಿಸಿ ಇವತ್ತು ಲೋಕವೆಲ್ಲ ಪೂಜಿಸುವ ಮಹರ್ಷಿಯಾದ. ಇದು ನಮಗೆ ಮಾದರಿಯಾಗಬೇಕು. ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸಂದೇಶ ನೀಡಿದ್ದಾರೆ.

ತಿಳಿದೋ ತಿಳಿಯದೆಯೋ ಅಪರಾಧಗಳು ನಮ್ಮಿಂದಾಗುತ್ತವೆ. ನಾಗರಿಕ ಸಮಾಜದ ನಿಯಮಾನುಸಾರ ಶಿಕ್ಷೆ ಅನುಭವಿಸಬೇಕಾಗುತ್ತದೆ ಆದರೆ ಶಿಕ್ಷೆ ಅನುಭವಿಸಿ ಹೊರಗೆ ಬರುವಾಗ ನಮ್ಮ ಆತ್ಮಸಾಕ್ಷಿಯಾಗಿ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟಾಗ ಪರಿಶುದ್ಧರಾಗಲು ಸಾಧ್ಯವಿದೆ ಮುಂದೆ ಇಂಥಹ ಅಪರಾಧಗಳನ್ನು ನಡೆಸದೇ ಒಳ್ಳೆಯ ನಾಗರಿಕರಾಗಿ ಬದುಕುವ ಮೂಲಕ ಅಪರಾಧ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸೋಣ ಎಂದು ಕಿವಿಮಾತು ಹೇಳಿದರು. ಜಿಲ್ಲಾ ಕೇಂದ್ರ ಕಾರಾಗೃಹ ಅಧೀಕ್ಷಕ ಪಿ ಎಸ್ ರಮೇಶ್, ಲಯನ್ಸ್, ರೋಟರಿ, ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Election: ಅನಂತಕುಮಾರ ಹೆಗಡೆ ಅವರೇ ಉತ್ತರ ಕನ್ನಡದ ಬಿಜೆಪಿ ಅಭ್ಯರ್ಥಿ: ಕಾಗೇರಿ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.