ರಾಮ-ವಿಠಲ, ಶ್ರೀಕೃಷ್ಣ, ರಾಮಲಲ್ಲಾ…


Team Udayavani, Dec 31, 2019, 7:00 AM IST

ve-47

ಮಣಿಪಾಲ: ಶ್ರೀ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರ ಪಟ್ಟದ ದೇವರು ರಾಮ- ವಿಠಲ. ಇವರು ಶ್ರೀಗಳು ನಿತ್ಯವೂ ಪೂಜಿಸುತ್ತಿದ್ದ ದೇವರು. ತಮ್ಮ ಐದು ಪರ್ಯಾಯ ಸಂದರ್ಭಗಳಲ್ಲಿ ಶ್ರೀಗಳು ಉಡುಪಿಯ ಕಡೆಗೋಲು ಶ್ರೀಕೃಷ್ಣನನ್ನು ಪೂಜಿಸಿದ್ದವರು. ಅತ್ತ ಅಯೋಧ್ಯೆಯಲ್ಲಿ ವಿವಾದಿತ ಕಟ್ಟಡ ಉರುಳಿದ ಮರುದಿನ ನಸುಕಿನಲ್ಲಿ ರಾಮಲಲ್ಲಾನನ್ನು ಪ್ರತಿಷ್ಠಾಪಿಸಿದ 12 ಮಂದಿ ಸಂತರಲ್ಲಿ ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರೂ ಓರ್ವರಾಗಿದ್ದರು.

ಕಣ್ವತೀರ್ಥದಿಂದ ಬಂದ ಶ್ರೀರಾಮ, ವಿಠಲನ ರೂಪದಲ್ಲಿ ಶ್ರೀಕೃಷ್ಣ ಮತ್ತು ಉಡುಪಿಯ ಬಾಲಕೃಷ್ಣನಿಗೆ ಪೂಜೆ ಸಲ್ಲಿಸುವ, ಆರಾಧಿಸುವ ಅಪೂರ್ವ ಭಾಗ್ಯ ಪೇಜಾವರ ಶ್ರೀಗಳದ್ದಾಗಿತ್ತು. ಪೇಜಾವರ ಶ್ರೀಗಳು ಅಯೋಧ್ಯೆ ಚಳವಳಿಯಲ್ಲಿ ಮುಂಚೂ ಣಿಯಲ್ಲಿದ್ದವರು. 1996ರ ಡಿ. 6ರಂದು ಕಟ್ಟಡ ಕುಸಿದ ಬಳಿಕ ಅದರೊಳಗಿದ್ದ ರಾಮಲಲ್ಲಾನ ವಿಗ್ರಹವನ್ನು ಕಾರ್ಯಕರ್ತರು ಎಲ್ಲೋ ಕೊಂಡೊಯ್ದಿದ್ದರು. ಪ್ರಾಯಃ ಇದಾಗುವಾಗ ಬೆಳಗ್ಗಿನ ಜಾವ ಆಗಿತ್ತು. ಸಾವಿರಾರು ಜನರ ಜಮಾವಣೆ, ಎಲ್ಲೆಡೆ ಗಂಭೀರ ವಾತಾವರಣವಿತ್ತು. ಡಿ. 7ರ ಬೆಳಗ್ಗೆ ಪೇಜಾವರ ಶ್ರೀಗಳೂ ತರಾತುರಿಯಲ್ಲಿ ಹೋಗುವಾಗ ದಾರಿ ಮಧ್ಯೆ ಕಾರ್ಯಕರ್ತರು ಆ ವಿಗ್ರಹವನ್ನು ಮೂಲ ಸ್ಥಳದಲ್ಲಿ ಇರಿಸುವಂತೆ ಹೇಳಿದರು. ಶ್ರೀಗಳು ಘಳಿಗೆ, ಮುಹೂರ್ತ ಯಾವುದನ್ನೂ ಕಾಣದೆ ತತ್‌ಕ್ಷಣವೇ ರಾಮಮಂತ್ರವನ್ನು ಹೇಳಿ ಪ್ರತಿಷ್ಠಾಪನೆ ಮಾಡಿದರು.

ಪೇಜಾವರ ಶ್ರೀಗಳು ಐದು ಪರ್ಯಾಯಗಳಲ್ಲಿ ಉಡುಪಿಯ ಶ್ರೀಕೃಷ್ಣನನ್ನು ಪೂಜಿಸಿದ್ದಾರೆ. ಮೊದಲ ಬಾರಿಗೆ ಪರ್ಯಾಯ ಪೀಠವೇ ರುವಾಗ ಅವರಿಗೆ ಕಿರಿವಯಸ್ಸು. 2016-18ರ ಐದನೆಯ ಪರ್ಯಾಯದಲ್ಲಿ ಇಳಿಪ್ರಾಯದಲ್ಲಿದ್ದರು. ಅದು ಪಟ್ಟದ ದೇವರಾದ ರಾಮವಿಠಲನ ಜತೆಗೆ ಉಡುಪಿಯ ಕಡೆಗೋಲು ಕೃಷ್ಣನನ್ನೂ ಪೂಜಿಸುವ ಸುಯೋಗ. ಹೀಗೆ ರಾಮನನ್ನೂ ವಿಠಲನನ್ನೂ ಶ್ರೀಕೃಷ್ಣನನ್ನೂ ಅಯೋಧ್ಯೆಯ ರಾಮಲಲ್ಲಾನನ್ನೂ ಪೂಜಿಸುವ ಅವಕಾಶ ಅಪೂರ್ವದಲ್ಲಿ ಅಪೂರ್ವವಲ್ಲದೆ ಇನ್ನೇನು!

20 ವರ್ಷಗಳ ಹಿಂದಿನ ಜ್ವರವೂ ಈಗ ಬಾಧಿಸಿದ್ದ ಜ್ವರವೂ
1999ರ ಪ್ರಥಮೈಕಾದಶಿಯಂದು ಶ್ರೀಗಳಿಗೆ ಜ್ವರ ಬಾಧಿಸಿತ್ತು. ಬೆಂಗಳೂರಿನಲ್ಲಿ ಮಧ್ಯಾಹ್ನ ಸಾವಿರಾರು ಶಿಷ್ಯರಿಗೆ ತಪ್ತಮುದ್ರಾಧಾರಣೆ ಮಾಡಿ ಸಂಜೆ ಚೆನ್ನೈಗೆ ತೆರಳಿ ಅಲ್ಲಿಯೂ ತಪ್ತಮುದ್ರೆ ಅನುಗ್ರಹಿಸಿ ಮರುದಿನ ಬೆಳಗ್ಗೆ ಬೆಂಗಳೂರಿಗೆ ಬಂದರು. ಒಂದೆಡೆ ಜ್ವರ ಬಾಧೆ, ಇನ್ನೊಂದೆಡೆ ನಿರಶನದ ದೃಢ ದೀಕ್ಷೆ. ಇದಾಗಿ ಎರಡು ದಶಕಗಳ ಬಳಿಕ ಅದೇ ರೀತಿ ಜ್ವರ ಬಂದಿತ್ತು. ಆದರೂ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾತನಾಡಿದರು. 1999ರಲ್ಲಿ ಅವರ ದೇಹ ಈಗಿನಿಂದ ಹೆಚ್ಚು ದೃಢವಾಗಿತ್ತು. ಆದರೆ ಈಗ ವಯೋಸಹಜವಾಗಿ ದೇಹ ದುರ್ಬಲವಾದ ಕಾರಣ ಅಸೌಖ್ಯವನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ.

ದೇಶವೇ ದೇಹವಿದ್ದಂತೆ
1967ರಲ್ಲಿ ಬಿಹಾರದಲ್ಲಿ ಭೀಕರ ಬರಗಾಲ. ಕರ್ನಾಟಕದ ಮೂಲೆ ಮೂಲೆಗಳಿಂದ ಸಹಾಯ ಕೇಳಿದರು. “ದೇವರ ಕೃಪೆ ಬಯಸುವ ಸಜ್ಜನರಿಗೆ ಇದೊಂದು ಸದವಕಾಶ. ಗ್ರಹಣದಂತೆ ಇದೂ ಒಂದು ಪರ್ವಕಾಲ. ದುಃಖ ಪೀಡಿತರ ಸೇವೆ ಮಾಡಿ ಆ ಮೂಲಕ ಸರ್ವಾಂತರ್ಯಾಮಿ ಪರಮಾತ್ಮನ ಅನುಗ್ರಹಕ್ಕೆ ಪಾತ್ರರಾಗುವ ದೊಡ್ಡ ಅವಕಾಶ’ ಎಂದು ಘೋಷಿಸಿದರು. ಉರಿಬಿಸಿಲಿನಲ್ಲಿ ಪಾದಯಾತ್ರೆ ಕೈಗೊಂಡರು. “ಎಲ್ಲೋ ದೂರದ ಸಮಸ್ಯೆಗೆ ನಾವೇಕೆ ಕೊಡಬೇಕು’ ಎಂದು ಕೆಲವರು ಪ್ರಶ್ನಿಸಿದರು. “ನಮ್ಮ ದೇಹದ ಒಂದು ಅಂಗಕ್ಕೆ ತೊಂದರೆಯಾದರೂ ಇಡೀ ದೇಹವೇ ಕಾಳಜಿ ವಹಿಸುತ್ತದೆ. ಅದರಂತೆ ಭರತಖಂಡ ನಮ್ಮದು. ಅದರ ಒಂದು ಭಾಗದಲ್ಲಿ ತೊಂದರೆಯಾದರೂ ಇಡೀ ದೇಶವೇ ಸಹಾಯಕ್ಕೆ ಸಜ್ಜಾಗಬೇಕು’ ಎಂದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.