4 ಸಾವಿರ ಮನೆಗಳಿಗೆ ‘ಬೆಳಕು’ ನೀಡಲು ಬಾಕಿ


Team Udayavani, Jul 30, 2022, 1:32 PM IST

9

ಉಡುಪಿ: ಬಡತನ ರೇಖೆಗಿಂತ ಕೆಳಗಿ ರುವ ಕುಟುಂಬಗಳಲ್ಲಿ ವಿದ್ಯುತ್‌ ಸಂಪರ್ಕವಿಲ್ಲದ ಮನೆಗಳಿಗೆ ವಿದ್ಯುತ್‌ ಒದಗಿಸುವ ರಾಜ್ಯಸರಕಾರದ ಮಹತ್ವಾಕಾಂಕ್ಷೆ “ಬೆಳಕು’ ಯೋಜನೆ ಮೂಲಕ ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ 3,500 ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿದ್ದು, ಇನ್ನೂ 4 ಸಾವಿರ ಮನೆಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಲು ಬಾಕಿ ಉಳಿದಿದೆ.

ಪ್ರಾರಂಭಿಕ ಹಂತದಲ್ಲಿ ಗ್ರಾ.ಪಂ. ನಿರಾಕ್ಷೇಪಣ ಪತ್ರಗಳನ್ನು ಕಡ್ಡಾಯ ಮಾಡಲಾಗಿತ್ತು. ಇದರಿಂದ ಗ್ರಾಮಾಂತರ ಭಾಗದ ನಿವಾಸಿಗಳಿಗೆ ತೊಂದರೆ ಉಂಟಾಗಿತ್ತು. ಬಳಿಕ ಯಾವುದೇ ದಾಖಲೆಗಳು ಬೇಡ. ಆಧಾರ್‌ ಕಾರ್ಡ್‌ ಅಥವಾ ವಾಸವಾಗಿರುವ ಮನೆಗೆ ಸಂಬಂಧಿಸಿದ ದಾಖಲೆ ನೀಡಿದರೆ ಸಾಕು ಎಂದು ಸಚಿವರು ಸೂಚಿಸಿದ್ದರು. ಅದರಂತೆ ಈಗ ಎನ್‌ಒಸಿ ಇಲ್ಲದೆಯೇ ಅರ್ಹರಿಗೆ ವಿದ್ಯುತ್‌ ಸಂಪರ್ಕ ನೀಡಲಾಗುತ್ತಿದೆ.

ನೀಡಲಾಗಿರುವ ಸಂಪರ್ಕ

ಜಿಲ್ಲೆಯ ಉಡುಪಿ ವಿಭಾಗದಲ್ಲಿ 593, ಕಾರ್ಕಳ ವಿಭಾಗದಲ್ಲಿ 1139, ಕುಂದಾಪುರ ವಿಭಾಗದಲ್ಲಿ 1,817 ಸಹಿತ ಒಟ್ಟು 3,549 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇದಕ್ಕಾಗಿ 4 ಸಾವಿರಕ್ಕೂ ಅಧಿಕ ಅರ್ಜಿಗಳು ಫ‌ಲಾನುಭವಿಗಳಿಂದ ಬಂದಿತ್ತು.

ಬಾಕಿ ಉಳಿಕೆಗೆ ಕಾರಣ

ಜಿಲ್ಲೆಯ ಕುಂದಾಪುರ, ಬೈಂದೂರು ಭಾಗದಲ್ಲಿ ಹೆಚ್ಚಿನ ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿ ಇದೆ. ಕೆಲವೊಂದು ಮನೆಗಳಿಗೆ ಸಂಪರ್ಕ ಒದಗಿಸಲು ಹಲವಾರು ತಂತಿಕಂಬಗಳನ್ನು ಹಾಕಬೇಕಾಗುತ್ತದೆ. ಹಾಗೆಯೇ ಈ ಯೋಜನೆ ಬಂದ ಬಳಿಕ ಹಲವಾರು ಮಂದಿ ಸಣ್ಣ-ಪುಟ್ಟ ಮನೆಗಳನ್ನು ಮಾಡಿಕೊಂಡು ವಾಸ್ತವ್ಯ ಹೂಡಿ ಅವರೂ ಬೆಳಕು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಎಲ್ಲ ಕಾರಣ ಗಳಿಂದಾಗಿ 4 ಸಾವಿರದಷ್ಟು ಹೊಸ ಸಂಪರ್ಕ ನೀಡಲು ಬಾಕಿ ಉಳಿದಿದೆ.

ಸೂಕ್ತ ಪರಿಶೀಲನೆ

ಬೆಳಕು ಯೋಜನೆಗೆ ನೋಂದಣಿ ಮಾಡಿರುವ ಪ್ರತಿಯೊಬ್ಬ ಫ‌ಲಾನುಭವಿಗಳ ವಿವರಗಳನ್ನು ನೋಡಿ ಮನೆಗಳನ್ನು ಪರಿಶೀಲಿಸುವ ಕೆಲಸ ಮೆಸ್ಕಾಂನಿಂದ ನಡೆಯುತ್ತಿದೆ. ಒಂದೇ ಊರಿನಲ್ಲಿ ವಿದ್ಯುತ್‌ ಸಂಪರ್ಕವಿಲ್ಲದ ಹಲವಾರು ಮನೆಗಳಿದ್ದರೆ ಅವುಗಳನ್ನು ಗುರುತಿಸಿ ಹೆಚ್ಚುವರಿ ಟ್ರಾನ್ಸ್‌ ಫಾರ್ಮರ್‌ಗಳು ಬೇಕಿದ್ದರೆ ಅಳವಡಿಸುವ ಪ್ರಕ್ರಿಯೆ ಹಾಗೂ ಹೆಚ್ಚುವರಿ ವಿದ್ಯುತ್‌ ಕಂಬಗಳು, ತಂತಿಗಳ ಅಳವಡಿಕೆ ಪ್ರಕ್ರಿಯೆಗಳೂ ನಡೆಯಲಿವೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಶೀಘ್ರ ವಿದ್ಯುತ್‌ ಸಂಪರ್ಕ: ಜಿಲ್ಲೆಯಲ್ಲಿ ಈಗಾಗಲೇ 3 ಸಾವಿರಕ್ಕೂ ಅಧಿಕ ಫ‌ಲಾನುಭವಿಗಳು ಬೆಳಕು ಯೋಜನೆಯ ಸೌಲಭ್ಯ ಪಡೆದುಕೊಂಡಿದ್ದಾರೆ. ವಿದ್ಯುತ್‌ ಸಂಪರ್ಕ ಇಲ್ಲದ 4 ಸಾವಿರದಷ್ಟು ಮನೆಗಳನ್ನು ಗುರುತಿಸಲಾಗಿದೆ. ಈ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದ್ದು, ಆದಷ್ಟು ಶೀಘ್ರದಲ್ಲಿ ಇವರಿಗೆ ವಿದ್ಯುತ್‌ ಸಂಪರ್ಕ ನೀಡುವ ಕೆಲಸವಾಗಲಿದೆ. -ನರಸಿಂಹ ಪಂಡಿತ್‌, ಮೆಸ್ಕಾಂ ಅಧೀಕ್ಷಕ ಎಂಜಿನಿಯರ್‌, ಉಡುಪಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.