11 ಜಿಲ್ಲೆಗೆ ತಲಾ 5 ಕೋ.ರೂ. ಬಿಡುಗಡೆ: ಆರ್‌. ಅಶೋಕ್‌

ಪ್ರಾಕೃತಿಕ ವಿಕೋಪ: ಅಗ್ನಿಶಾಮಕ ಇಲಾಖೆಗೆ 20 ಕೋ. ರೂ.

Team Udayavani, Aug 8, 2020, 8:45 AM IST

11 ಜಿಲ್ಲೆಗೆ ತಲಾ 5 ಕೋ.ರೂ. ಬಿಡುಗಡೆ: ಆರ್‌. ಅಶೋಕ್‌

ಉಡುಪಿ: ಪ್ರಾಕೃತಿಕ ವಿಕೋಪ ನಿರ್ವಹಣೆಗಾಗಿ ಉಡುಪಿ, ದ.ಕ. ಜಿಲ್ಲೆ ಸೇರಿದಂತೆ ಒಟ್ಟು 11 ಜಿಲ್ಲೆಗಳಿಗೆ ಹೆಚ್ಚುವರಿಯಾಗಿ ತಲಾ 5 ಕೋ.ರೂ. ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.  ಪ್ರಕೃತಿ ವಿಕೋಪ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಹಾವೇರಿ, ಚಾಮ ರಾಜನಗರ, ಮೈಸೂರು, ಕೊಡಗು, ಧಾರವಾಡ, ಚಿಕ್ಕಮಗಳೂರು ಜಿಲ್ಲೆಗಳಿಗೆ ಅನುದಾನ ಬಿಡುಗಡೆ ಗೊಳಿಸಲಾಗುವುದು ಎಂದರು.

ಬೋಟ್‌ ಇತ್ಯಾದಿ ಉಪಕರಣಗಳ ಖರೀದಿಗೆ ಅಗ್ನಿಶಾಮಕ ಇಲಾಖೆಗೆ 20 ಕೋ.ರೂ. ಬಿಡುಗಡೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿಧಿಯಡಿ 3.5 ಕೋ.ರೂ. ಇದೆ. ಇದು ಕೊರೊನಾ, ಮನೆ ಹಾನಿ ನಿರ್ವಹಣೆಗೆ ಅಲ್ಲದೆ ಇರುವ ಮೊತ್ತವಾಗಿದೆ ಎಂದರು.

ಮನೆ ನಿರ್ಮಿಸಲು ಕಂತು ಬಿಡುಗಡೆ
ಕಳೆದ ವರ್ಷ ಪ್ರವಾಹ ಬಂದಾಗ ಸಂಪೂರ್ಣ ಮನೆ ನಷ್ಟವಾದವರಿಗೆ 5 ಲ.ರೂ., ಅರ್ಧ ಹಾನಿಯಾದವರಿಗೆ 3 ಲ.ರೂ. ಪರಿಹಾರವಾಗಿ ನೀಡಲಾಗಿದ್ದು ಇದು ಈ ವರ್ಷವೂ ಮುಂದುವರಿ ಯಲಿದೆ. ಇದಕ್ಕಾಗಿ ವಸತಿ ನಿಗಮಕ್ಕೆ 340 ಕೋ.ರೂ. ಬಿಡುಗಡೆ ಮಾಡಲಾಗಿದ್ದು ಜಿಲ್ಲಾಧಿಕಾರಿ, ತಹಶೀಲ್ದಾರ್‌ ಮೂಲಕ ಪಡೆದುಕೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಅಕ್ರಮಸಕ್ರಮ: ಅವಧಿ ವಿಸ್ತರಣೆ
53-54 ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸದವರು ಇನ್ನೂ ಅನೇಕರು ಇರುವುದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಎರಡು ವರ್ಷಗಳಿಗೆ ವಿಸ್ತರಿಸಲಾಗುವುದು ಎಂದರು.

ಡಿಕೆಶಿಗೆ ಸಿದ್ದು ಕಾಟ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ವಿರೋಧ ಪಕ್ಷದಲ್ಲಿ ಕುಳಿತಿರುವವರಿಗೆ ಕಾಮಾಲೆ ಕಣ್ಣಾಗಿದೆ. ಎಲ್ಲ ಸಚಿವರು ಜಿಲ್ಲೆಗಳಿಗೆ ಸಂಚಾರ ಮಾಡುತ್ತಿದ್ದಾರೆ. ವಿರೋಧ ಪಕ್ಷದವರಿಗೆ ಕೆಲಸವಿಲ್ಲದೆ ಕೇವಲ ಟೀಕೆ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರರಿಗೆ ಬಿಜೆಪಿಗಿಂತ ಸಿದ್ಧರಾಮಯ್ಯನವರ ಕಾಟವೇ ಹೆಚ್ಚಾಗಿದೆ. ಅವರು ಈ ಸಮಸ್ಯೆಯಿಂದ ಹೊರಬರಲಿ ಎಂದರು.

ಬೊಮ್ಮಾಯಿಗೆ ದೊಡ್ಡ ಹೊಣೆ
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಸವರಾಜ ಬೊಮ್ಮಾಯಿಯವರು ಇಡೀ ರಾಜ್ಯಕ್ಕೆ ಗೃಹ ಸಚಿವರು, ಎರಡು ಜಿಲ್ಲೆಗಳ ಉಸ್ತುವಾರಿ ಇದೆ. ಅವರು ಶಾಸಕರು ಕರೆದಾಗ ಬಂದು ಹೋಗಿದ್ದಾರೆ. ಜಿಲ್ಲಾಧಿಕಾರಿಯವರ ಜತೆ ವೀಡಿಯೋ ಕಾನ್ಫರೆನ್ಸ್‌ ಸಭೆ ನಡೆಸಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇನ್ನೆರಡು
ದಿನಗಳಲ್ಲಿ ಬರುವವರಿದ್ದಾರೆ ಎಂದು ಹೇಳಿದರು.  ಮುಖ್ಯಮಂತ್ರಿಯವರು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ.ರಘುಪತಿ ಭಟ್‌, ಸುನೀಲ್‌ ಕುಮಾರ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ. ಜಗದೀಶ್‌, ಎಸ್‌ಪಿ ವಿಷ್ಣುವರ್ಧನ್‌, ಜಿ.ಪಂ. ಸಿಇಒ ಪ್ರೀತಿ ಗೆಹಲೋತ್‌, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮೊದಲಾದವರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.