ಪೆರಂಪಳ್ಳಿ: ವಾಹನ ಸವಾರರ ಸುರಕ್ಷತೆಗಿಲ್ಲ ಆದ್ಯತೆ; ತಿಂಗಳ ಅಂತರದಲ್ಲಿ ಮತ್ತೂಂದು ಅಪಘಾತ


Team Udayavani, Nov 22, 2022, 3:13 PM IST

2

ಉಡುಪಿ: ಅಪಘಾತ ವಲಯ ಪೆರಂಪಳ್ಳಿಯ ಸುಂದರಿ ಗೇಟ್‌ ಬಳಿಯ ತಿರುವಿನಲ್ಲಿ ರವಿವಾರ ತಡರಾತ್ರಿ ಮತ್ತೂಂದು ಅಪಘಾತ ನಡೆದಿದೆ. ಇದೇ ಸ್ಥಳದಲ್ಲಿ ತಿಂಗಳ ಅಂತರದಲ್ಲಿ ನಡೆದ ಎರಡನೇ ಅಪಘಾತ ಇದಾಗಿದೆ.

ರವಿವಾರ ತಡರಾತ್ರಿ ಅಂಬಾಗಿಲು ವಿನಿಂದ ಮಣಿಪಾಲದತ್ತ ತೆರಳುತ್ತಿದ್ದ ಹುಂಡೈ ಐ10 ಕಾರು ಅಪಘಾತಕ್ಕೀಡಾಗಿದೆ. ಕಾರಿನ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಅ.17ರಂದು ಇದೇ ಸ್ಥಳದಲ್ಲಿ ಕಾರೊಂದು ಇದೇ ರೀತಿ ತಂತಿಕಂಬಕ್ಕೆ ಢಿಕ್ಕಿ ಹೊಡೆದು ಅಪಘಾತವಾಗಿತ್ತು. ಬಳಿಕ ಹೊಸ ವಿದ್ಯುತ್‌ ಕಂಬ ಅಳವಡಿಕೆ ಮಾಡಲಾಗಿತ್ತು. ಈಗ ಹೊಸ ಕಂಬಕ್ಕೆ ಕಾರು ಢಿಕ್ಕಿ ಹೊಡೆದಿದ್ದು, ಮತ್ತೂಮ್ಮೆ ಕಂಬ ಬದಲಾಯಿಸುವ ಅಗತ್ಯ ಎದುರಾಗಿದೆ.

ವಿದ್ಯುತ್‌ ವ್ಯತ್ಯಯ

ಘಟನೆ ನಡೆದ ಸಂದರ್ಭದಲ್ಲಿ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಮೆಸ್ಕಾಂನವರು ವಿದ್ಯುತ್‌ ನಿಲುಗಡೆಗೊಳಿಸಿದರು. ಇದರಿಂದ ರಾತ್ರಿ ಪೂರ್ತಿ ವಿದ್ಯುತ್‌ ಇಲ್ಲದೆ ಸ್ಥಳೀಯರು ದಿನ ಕಳೆದರು.

ಅಪಾಯಕಾರಿ ತಿರುವು

ಇದೊಂದು ಅಪಾಯಕಾರಿ ತಿರುವಾಗಿದೆ. ಈ ಭಾಗದಲ್ಲಿ ಸಂಚಾರ ಮಾಡಿದ ಹಲವು ಚಾಲಕರು, ಸವಾರರಿಗೆ ಈ ಬಗ್ಗೆ ಅರಿವಾಗಿದೆ. ಆದರೆ ಸಂಬಂಧಪಟ್ಟ ಇಲಾಖೆ ಮೌನವಾಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಅವೈಜ್ಞಾನಿಕ ರೀತಿಯಲ್ಲಿ ತಿರುವು ನಿರ್ಮಿಸಿರುವುದರಿಂದ ವೇಗದಿಂದ ಬರುವ ವಾಹನಗಳು ನಿಯಂತ್ರಣ ತಪ್ಪುತ್ತಿವೆ ಎಂದುಬು ಸ್ಥಳೀಯರ ಆತಂಕವಾಗಿದೆ.

ಹಲವು ಅಪಘಾತ

ಈ ಭಾಗದಲ್ಲಿ ಈಗಾಗಲೇ 10ರಿಂದ 12 ಅಪಘಾತಗಳು ನಡೆದಿವೆ. ಈ ಬಗ್ಗೆ ಇದುವರೆಗೂ ಎಚ್ಚರಿಕೆ ಫ‌ಲಕವಾಗಲಿ ಸೂಚನ ಫ‌ಲಕವನ್ನಾಗಲಿ ಅಳವಡಿಕೆ ಮಾಡಿಲ್ಲ. ಅಪರೂಪಕ್ಕೆ ಬರುವ ವಾಹನಗಳೇ ಹೆಚ್ಚಾಗಿ ಅಪಘಾತಕ್ಕೀಡಾಗುತ್ತಿವೆ. ಸ್ಥಳೀಯ ವಾಹನ ಚಾಲಕರಿಗೆ ಈ ಅವೈಜ್ಞಾನಿಕ ತಿರುವಿನ ಮಾಹಿತಿ ಇರುವ ಕಾರಣ ನಿಧಾನವಾಗಿ ವಾಹನ ಚಲಾಯಿಸುತ್ತಾರೆ. ಆದರೆ ಇತರರಿಗೆ ಇದು ಗೊಂದಲಕಾರಿಯಾಗಿ ಪರಿಣಮಿಸುತ್ತಿದೆ.

ಉಬ್ಬುತಗ್ಗು-ಎಚ್ಚರಿಕೆ ಫ‌ಲಕ ಅತ್ಯಗತ್ಯ

ಅಪಘಾತಕ್ಕೀಡಾದ ವಾಹನವನ್ನು ಸೋಮವಾರ ಬೆಳಗ್ಗೆ ಹಿಟಾಚಿ ಮೂಲಕ ತೆರವು ಮಾಡಲಾಯಿತು. ಈ ಭಾಗದಲ್ಲಿ ಮತ್ತಷ್ಟು ಭೀಕರ ಅಪಘಾತಗಳು ಉಂಟಾಗುವುದನ್ನು ತಡೆಗಟ್ಟ ಬೇಕಾದರೆ ಶೀಘ್ರವಾಗಿ ಉಬ್ಬುತಗ್ಗು ಹಾಗೂ ಎಚ್ಚರಿಕೆಯುಳ್ಳ ಸೂಚನ ಫ‌ಲಕವನ್ನು ಅಳವಡಿಸುವ ಅಗತ್ಯವಿದೆ. ಕಡಿದಾದ ತಿರುವು ಭಾಗದಲ್ಲಿಯೇ ಯೂಟರ್ನ್ ಕಲ್ಪಿಸಿರುವುದೂ ಕೂಡ ಅಪಘಾತಕ್ಕೆ ಕಾರಣವಾಗಿದೆ. ಅತ್ತಕಡೆಯಿಂದ ಬರುವ ವಾಹನಗಳಿಗೆ ಕಡಿದಾದ ಪೊದೆಯಿಂದಾಗಿ ಯಾವುದೇ ವಾಹನಗಳು ಬರುವುದು ಗೋಚರಕ್ಕೆ ಬರುತ್ತಿಲ್ಲ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.