ಕಾಪು ಪಿಲಿಕೋಲದ ದೈವ ನರ್ತಕ ಗುಡ್ಡ ಪಾಣಾರರಿಗೆ ರಾಜ್ಯೋತ್ಸವ ಗೌರವ
Team Udayavani, Oct 31, 2022, 12:44 PM IST
ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾದ ಕಾಪುವಿನ ದ್ವೈ ವಾರ್ಷಿಕ ಪಿಲಿಕೋಲ ದೈವದ ನರ್ತಕರಾಗಿ ಸೇವೆ ಸಲ್ಲಿಸುತ್ತಿರುವ ಮೂಳೂರಿನ ಗುಡ್ಡ ಪಾಣಾರ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.
ಗುಡ್ಡ ಪಾಣಾರ ಅವರು ಅವಿದ್ಯಾವಂತರಾಗಿದ್ದರೂ ಹಿರಿಯರಿಂದ ಬಳುವಳಿಯಾಗಿ ಬಂದಿರುವ ದೈವಾರಾಧನೆ ಮತ್ತು ಜಾನಪದ ಕಲೆಗಳನ್ನು ಪೋಷಿಸಿ, ಮುಂದಿನ ತಲೆಮಾರಿನವರೆಗೂ ಉಳಿಸಿ ಬೆಳೆಸುವ ಕಾಯಕದಲ್ಲಿ ತೊಡಗಿಸಿಕೊಂಡು ಬಂದಿದ್ದಾರೆ.
48 ವರ್ಷಗಳಿಂದ ದೈವಾರಾಧನೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅವರು 38 ವರ್ಷಗಳಿಂದ ಪಿಲಿಕೋಲ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಪು ಸಾವಿರ ಸೀಮೆಯ ವಿವಿಧೆಡೆ ಪಂಜುರ್ಲಿ, ವರ್ತೆ, ಗುಳಿಗ, ಬಬ್ಬರ್ಯ, ತನ್ನಿಮಾನಿಗ ಸಹಿತ ಇತರ ದೈವಗಳ ನರ್ತನ ಸೇವೆ ನಡೆಸುತ್ತಿದ್ದು ಅವರು ಪಿಲಿ ಕೋಲ ನರ್ತನ ಸೇವೆ ಆರಂಭಿಸಿದ ಬಳಿಕ ಇತರ ದೈವಗಳ ನರ್ತನ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ.
ಇದನ್ನೂ ಓದಿ:ಮೊರ್ಬಿ ಸೇತುವೆ ಕುಸಿತ ದುರಂತ: ರಕ್ಷಣಾ, ಪರಿಹಾರ ಕಾರ್ಯದಲ್ಲಿ ಅಸಡ್ಡೆ ಇಲ್ಲ: ಪ್ರಧಾನಿ ಮೋದಿ
ರಾಜ್ಯೋತ್ಸವ ಪ್ರಶಸ್ತಿಯ ಬಗ್ಗೆ ಮಾತನಾಡಿದ ಗುಡ್ಡ ಪಾಣಾರ ಅವರು, 20ನೇ ವರ್ಷದಿಂದಲೇ ದೈವಗಳ ನರ್ತಕನಾಗಿ ತಂದೆಯಿಂದ ಬಳುವಳಿಯಾಗಿ ಬಂದ ಸೇವೆಯನ್ನು ನಡೆಸಿಕೊಂಡು ಬಂದಿದ್ದೇನೆ. ಪ್ರಾಮಾಣಿಕ ಸೇವೆಗೆ ದೈವ ಕೃಪೆ ರೂಪದಲ್ಲಿ ಪ್ರಶಸ್ತಿ ಲಭಿಸಿದೆ ಎನ್ನುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ