ಆನೆಕೆರೆ, ದಾನಶಾಲೆ ರಸ್ತೆಯಲ್ಲಿ ನಿತ್ಯ ಧೂಳಿನ ಮಜ್ಜನ

 ಕುಡಿಯುವ ನೀರು ಸರಬರಾಜಿಗೆಂದು ಪೈಪ್‌ ಅಳವಡಿಕೆ ಕಾಮಗಾರಿಯಿಂದ ಸಮಸ್ಯೆ ಉದ್ಭವ

Team Udayavani, Dec 15, 2021, 5:29 PM IST

ಆನೆಕೆರೆ, ದಾನಶಾಲೆ ರಸ್ತೆಯಲ್ಲಿ ನಿತ್ಯ ಧೂಳಿನ ಮಜ್ಜನ

ಕಾರ್ಕಳ: ನಗರದ ಆನೆಕೆರೆ-ದಾನ ಶಾಲೆ ಪರಿಸರದಲ್ಲಿ ಕಾಮಗಾರಿ ಸಲುವಾಗಿ ಅಗೆದಿದ್ದ ರಸ್ತೆ ಈಗ ಧೂಳುಮಯವಾಗಿದೆ. ಇದರಿಂದಾಗಿ ಪರಿಸರದ ಜನ ಕಂಗೆಟ್ಟು ಹೋಗಿದ್ದಾರೆ.

ನಗರದ ಆನೆಕೆರೆ, ದಾನಶಾಲೆ ಭಾಗದಲ್ಲಿ ಕುಡಿಯುವ ನೀರು ಸರಬರಾಜಿಗೆಂದು ಪೈಪ್‌ ಅಳವಡಿಸುವ ಕಾಮಗಾರಿ ನಡೆದಿತ್ತು. ಬಳಿಕ ಅಲ್ಲಿ ಧೂಳಿನ ಸಮಸ್ಯೆ ಸ್ಥಳೀಯ ನಾಗರಿಕರನ್ನು ಅತೀವವಾಗಿ ಕಾಡುತ್ತಿದೆ. ತಿಂಗಳಿನಿಂದ ಈ ಸಮಸ್ಯೆಯಿದೆ. ದಾನಶಾಲೆ ಜಂಕ್ಷನ್‌ನಲ್ಲಿ ಹೆಚ್ಚು ಸಮಸ್ಯೆ ಕಂಡುಬರುತ್ತಿದೆ.

ಕಾಂಕ್ರೀಟ್‌ ಒಡೆದು ರಸ್ತೆ ಬದಿ ಕಣಿವೆ ನಿರ್ಮಿಸಲಾಗಿದೆ. 350 ಹಾಗೂ 300 ಎಂಎಂ ಗಾತ್ರದ ಪೈಪ್‌ಗ್ಳನ್ನು ಈ ಭಾಗದಲ್ಲಿ ಅಳವಡಿಸಲಾಗಿದೆ. ಒಂದು ವಾಹನ ಹೋದ ಮರುಕ್ಷಣದಲ್ಲೇ ಧೂಳು ಏಳುತ್ತಿರುವುದರಿಂದ ರಸ್ತೆ ಬದಿಗಳ ಅಂಗಡಿ, ಮನೆಗಳ ನಿವಾಸಿಗಳು ಧೂಳು ಸೇವಿಸುವಂತಾಗಿದೆ.

ಆನೆಕೆರೆ-ದಾನಶಾಲೆ ಮಾರ್ಗವಾಗಿ ತೆರಳುವ ಆನೆಕೆರೆ ಜಂಕ್ಷನ್‌ನ ಸಹಿತ ಇನ್ನಿತರ ಕಡೆ ಅಂಗಡಿ ವ್ಯಾಪಾರ ವಹಿವಾಟು ನಡೆಸುತ್ತಿರುವವರೆಲ್ಲರೂ ರಸ್ತೆ ಬದಿಯ ಧೂಳು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಲ್ಲದೆ ಇಲ್ಲಿನ ನಿವಾ ಸಿ ಗಳ ಮನೆಯ ಕಿಟಕಿ, ಬಾಗಿಲುಗಳ ಮೂಲಕ ಧೂಳು ಒಳಹೊಕ್ಕು ಸಮಸ್ಯೆ ಸೃಷ್ಟಿಸುತ್ತಿದೆ. ಬಿಸಿಲ ತಾಪ ಹೆಚ್ಚಿದಂತೆ ಸಮಸ್ಯೆ ಹಿರಿದಾಗುತ್ತದೆ.

ವ್ಯಾಪಾರಿಗಳು, ಪರಿಸರದ ನಿವಾಸಿಗಳು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಹೋಗಬೇಕಿದೆ. ಧೂಳಿನಿಂದ ಅಲರ್ಜಿ, ಕೆಮ್ಮು, ಶೀತ ಇನ್ನಿತರ ಸಮಸ್ಯೆಗಳು ಕಾಣಬರುತ್ತಿದ್ದು. ಆಸ್ಪತ್ರೆ ಬಾಗಿಲು ತಟ್ಟುತ್ತಿದ್ದಾರೆ. ಹಿರಿಯ ನಾಗರಿಕರು, ಮಹಿಳೆಯರು, ಮಕ್ಕಳು ಹೆಚ್ಚಾಗಿ ಕಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ರೋಗದ ಆತಂಕ ಜನರನ್ನು ಕಾಡುತ್ತಿದೆ.
ಧೂಳು ಎದ್ದಾಗಲೆಲ್ಲ ನೀರು ಹಾಯಿಸುವುದೇ ನಿತ್ಯದ ಕೆಲಸ ಎನ್ನುವಂತಾಗಿದೆ. ರಸ್ತೆ ಬದಿ ತೆರಳುವವರು ಕೂಡ ಧೂಳಿನ ಸಮಸ್ಯೆಗೆ ಒಳಗಾಗಿ ರೋಗಗಳನ್ನು ತಂದುಕೊಳ್ಳುತ್ತಿದ್ದಾರೆ. ಪರಿಸರದ ಮನೆಗಳು ಧೂಳಿನಿಂದ ಕೆಂಬಣ್ಣಕ್ಕೆ ತಿರುಗಿದೆ.

2019-20ನೇ ಸಾಲಿನಲ್ಲಿ ನಗರೋತ್ಥಾನ ಯೋಜನೆಯಡಿಯಲ್ಲಿ ಕರ್ನಾಟಕ ಸರಕಾರ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ಯೋಜನೆಯಡಿ ಕುಡಿಯುವ ನೀರು ಸರಬರಾಜು ಈ ಕಾಮಗಾರಿ ಈ ಭಾಗದಲ್ಲಿ ನಡೆಸಲಾಗಿತ್ತು.

ವಾಹನ ದಟ್ಟಣೆ ಹೆಚ್ಚು
ಕಾರ್ಕಳ ನಗರಕ್ಕೆ ಮಂಗಳೂರು ಹಾಗೂ ಬೆಳ್ತಂಗಡಿ ಭಾಗಗಳಿಂದ ದಾನಶಾಲೆ- ಆನೆಕೆರೆ ರಸ್ತೆಯ ಮೂಲಕ ಸಹಸ್ರಾರು ವಾಹನಗಳು ಸಂಚಾರ ಬೆಳೆಸುತ್ತವೆ. ಇದರಿಂದ ಮತ್ತಷ್ಟೂ ಧೂಳು ಎದ್ದು ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಸ್ಥಳಿಯರು ಹೇಳುತ್ತಿದ್ದು, ಸಮಸ್ಯೆಯ ಬಗ್ಗೆ ಪುರಸಭೆ ಗಮನಕ್ಕೆ ತರಲಾಗಿದೆ. ಆದಷ್ಟೂ ಬೇಗ ಸರಿ ಪ ಡಿಸಲಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಗಮನಕ್ಕೆ ತರುವೆ
ಧೂಳಿನಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಕುರಿತು ಕುಡಿಯುವ ನೀರು ಮಂಡಳಿಯ ಒಳಚರಂಡಿ, ನೀರು ಸರಬರಾಜು ಮಂಡಳಿಯ ಎಂಜಿನಿಯರ್‌ ಗಮನಕ್ಕೆ ತರಲಾಗುವುದು.
-ರೂಪಾ ಟಿ. ಶೆಟ್ಟಿ, ಮುಖ್ಯಾಧಿಕಾರಿ ಪುರಸಭೆ ಕಾರ್ಕಳ

ಡಾಮರು ಹಾಕಿ ಕೊಡುತ್ತೇವೆ
ಕಾರ್ಕಳ ಉತ್ಸವ ನಡೆಯಲಿದೆ ಎನ್ನುವ ಕಾರಣದಿಂದ ಸ್ವಲ್ಪ ದಿನ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದೆವು. ಇದೀಗ ಉತ್ಸವ ಮುಂದೂಡಿಕೆ ಆಗಿರುವುದರಿಂದ ಮತ್ತೆ ಕಾಮಗಾರಿ ಆರಂಭಿಸುತ್ತೇವೆ. ಮುಖ್ಯವಾಗಿ ದಾನಶಾಲೆ ಜಂಕ್ಷನ್‌ನಲ್ಲಿ ಧೂಳಿನ ಸಮಸ್ಯೆ ಹೆಚ್ಚು ಇರುವುದರಿಂದ ಇಲ್ಲಿ ಡಾಮರು ಕಾಮಗಾರಿಗೊಳಿಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಲಾಗುವುದು.
– ರಕ್ಷಿತ್‌, ಎಂಜಿನಿಯರ್‌ ಒಳಚರಂಡಿ, ನೀರು ಸರಬರಾಜು ಮಂಡಳಿ

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.