ರಸ್ತೆ ತಿರುವಿನಲ್ಲಿ ಬೆಳೆದ ಗಿಡ ಗಂಟಿಗಳು; ಅಪಾಯಕ್ಕೆ ಆಹ್ವಾನ
Team Udayavani, Nov 26, 2020, 3:13 AM IST
ಮಲ್ಪೆ: ಇಲ್ಲಿನ ಮೀನುಗಾರಿಕೆ ಬಂದರಿನ ಬಾಪುತೋಟ 3ನೇ ಹಂತದ ಬಂದರು ಪ್ರದೇಶದಲ್ಲಿ ರಸ್ತೆ ಉದ್ದಕ್ಕೂ ಗಿಡಗಂಟಿಗಳು ಬೆಳೆದು ನಿಂತಿದ್ದು ಸಮಸ್ಯೆಯಾಗಿದೆ. ರಸ್ತೆಯ ತಿರುವಿನಲ್ಲಿ ಸಂಚರಿಸುವ ವಾಹನಗಳಿಗೆ ಎದುರು ಬದಿಯಿಂದ ಬರುವ ವಾಹನಗಳು ಕಾಣದೆ ಅಪಘಾತಗಳು ಸಂಭವಿಸುತ್ತಿವೆ.
ಮಲ್ಪೆ ಮುಖ್ಯವೃತ್ತದಿಂದ 3ನೇ ಹಂತದ ಬಂದರು ಮತ್ತು ಪಡುಕರೆ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಪ್ರತಿನಿತ್ಯ ಸಾವಿರಾರು ಜನ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ರಸ್ತೆಯ ತಿರುವಿನಲ್ಲಿ ಗಿಡಗಳು ಬಹಳ ಎತ್ತರಕ್ಕೆ ಬೆಳೆದು ನಿಂತಿರುವುದರಿಂದ ಎದುರು ಬರುವ ವಾಹನಗಳು ಕಾಣಿಸುವುದಿಲ್ಲ. ಇನ್ನು ರಾತ್ರಿ ವೇಳೆ ಈ ರಸ್ತೆಯಲ್ಲಿ ವಾಹನ ಚಲಾಯಿಸುವುದು ಇನ್ನೂ ದುಸ್ತರವಾಗಿದೆ. ಆದರೆ ಸಂಬಂಧಪಟ್ಟ ಇಲಾಖೆಯಾಗಲಿ, ಅಧಿಕಾರಿಗಳಾಗಲಿ ಇತ್ತ ಗಮನ ಹರಿಸುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಸ್ಲಿಪ್ವೇ ಸುತ್ತಲೂ ಪೊದೆಗಳು
4 ವರ್ಷಗಳ ಹಿಂದೆ ನಿರ್ಮಾಣ ಗೊಂಡಿದ್ದ, ಇಲ್ಲಿಯವರೆಗೂ ಉಪಯೋಗಕ್ಕೆ ಬಾರದೇ ಶಿಥಿಲಾವಸ್ಥೆಗೆ ತಲುಪಿದ ಸ್ಲಿಪ್ವೇ ಸುತ್ತಲೂ ಪೊದೆಗಳು ಆವರಿಸಿಕೊಂಡಿವೆ. ಬಿಸಿಲ ತಾಪಕ್ಕೆ ಇದೀಗ ಪೊದೆಗಳು ಕರಟಿ ಹೋಗುತ್ತಿದ್ದು ಯಾವುದೇ ಸಂದರ್ಭದಲ್ಲಿ ಬೆಂಕಿ ಬಿದ್ದಲ್ಲಿ ಕೋಟ್ಯಂತರ ರೂ. ವೆಚ್ಚದ ಯೋಜನೆಯೂ ಹಾನಿಗೀಡಾಗುವ ಸಾಧ್ಯತೆ ಇದೆ. ಕೂಡಲೇ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಮೀನುಗಾರರು ಆಗ್ರಹಿಸಿದ್ದಾರೆ.
ತೆರವುಗೊಳಿಸಿ
ಮೀನುಗಾರಿಕೆ ಚಟುವಟಿಕೆಗೆ ಸಂಬಂಧಿಸಿದಂತೆ ಮತ್ತು ಪಡುಕರೆ ಬೀಚ್ ಕಡೆಗೆ ತೆರಳುವ ಪ್ರವಾಸಿಗರಿಂದಾಗಿ ಈ ರಸ್ತೆಯಲ್ಲಿ ನಿರಂತರ ವಾಹನಗಳು ಸಂಚರಿಸುತ್ತಿದ್ದು ಗಿಡಗಳು ಬೆಳೆದು ನಿಂತಿರುವುದರಿಂದ ಅಪಾಯದ ತಾಣವಾಗಿದೆ. ಕೂಡಲೇ ಇವುಗಳನ್ನು ತೆರವುಗೊಳಿಸಿ ಮುಕ್ತ ಸಂಚಾರಕ್ಕೆ ಅನುವುಮಾಡಿಕೊಡಬೇಕಿದೆ.
-ಪ್ರದೀಪ್ ಟಿ. ಸುವರ್ಣ, ಸ್ಥಳೀಯ ಮೀನುಗಾರರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ