ಮೀನುಗಾರಿಕೆಗೆ ಪರ್ಸಿನ್‌, ತ್ರೀಸೆವೆಂಟಿ ಬೋಟುಗಳ ಸಿದ್ಧತೆ

ಈ ವರೆಗೆ ಕಡಲಿಗಿಳಿದದ್ದು 400 ಬೋಟುಗಳು ಮಾತ್ರ; ಮಲ್ಪೆ ಬಂದರಿನಲ್ಲಿ ಕೋವಿಡ್‌ ಸುರಕ್ಷತೆ ನಿಯಮ ಜಾರಿ

Team Udayavani, Aug 27, 2020, 6:16 AM IST

ಮೀನುಗಾರಿಕೆಗೆ ಪರ್ಸಿನ್‌, ತ್ರೀಸೆವೆಂಟಿ ಬೋಟುಗಳ ಸಿದ್ಧತೆ

ಮಲ್ಪೆ: ಯಾಂತ್ರಿಕ ಮೀನುಗಾರಿಕೆ ಋತು ಆರಂಭಗೊಂಡು ತಿಂಗಳಾ ಗುತ್ತಾ ಬಂದರೂ ಮಲ್ಪೆ ಬಂದರಿನಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ದೋಣಿಗಳು ಕಡಲಿಗಿಳಿದಿಲ್ಲ. ಆ. 20ರಿಂದ ಯಾಂತ್ರಿಕ ಮೀನುಗಾರಿಕೆ ಬೋಟುಗಳು ಕಡಲಿಗಿಳಿಯಲು ಆರಂಭಿಸಿದ್ದು, ಈಗಾಗಲೇ ಕೇವಲ 400
ರಷ್ಟು ಮಾತ್ರ ಆಳಸಮುದ್ರ ಬೋಟುಗಳು ತೆರಳಿವೆ. ಸುಮಾರು 400ರಷ್ಟು ಆಳಸಮುದ್ರ ಬೋಟುಗಳು ಸಿದ್ಧತೆಯಲ್ಲಿದ್ದು, ಇನ್ನಷ್ಟೇ ತೆರಳಬೇಕಾಗಿವೆ. ಪರ್ಸಿನ್‌ ಮೀನುಗಾರರು ತಮ್ಮ ಸಂಘದ ನಿರ್ಧಾರದಂತೆ ಸಾಮೂಹಿಕ ಪ್ರಾರ್ಥನೆ ನಡೆಸಿ ಆ. 30ರಂದು ತೆರಳಲು ತೀರ್ಮಾನಿಸಿದ್ದಾರೆ. ತ್ರೀಸೆವೆಂಟಿ, ಸಣ್ಣಟ್ರಾಲ್‌ ಬೋಟುಗಳು ಆ. 26ರಿಂದ ಮೀನುಗಾರಿಕೆಗೆ ಹೋಗಲು ನಿರ್ಧರಿಸಿದ್ದು ಹಂತ ಹಂತವಾಗಿ ಎಲ್ಲ ವರ್ಗಗಳ ದೋಣಿಗಳು ಮೀನುಗಾರಿಕೆ ತೆರಳಲಿವೆ.

ಆ. 1ರಿಂದ ಮೀನುಗಾರಿಕೆಗೆ ಅವಕಾಶ
ವಿದ್ದರೂ ಕೋವಿಡ್‌-19 ಸೋಂಕು ಆವರಿಸುವ ಭಯದಿಂದಾಗಿ ಜಿಲ್ಲಾಡಳಿತವು ಮೀನುಗಾರಿಕೆ ಚಟುವಟಿಕೆ ನಡೆಸಲು ಸೂಕ್ತ ನಿದರ್ಶನವನ್ನು ನೀಡಬೇಕೆಂದು ಮೀನುಗಾರರು ಕಾದು ಕುಳಿತಿದ್ದರು. ಮೀನುಗಾರಿಕೆಗೆ ಯಾವುದೇ ನಿರ್ಬಂಧ ಇಲ್ಲದಿದ್ದರೂ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆ ನಡೆಸಲು ನಿರ್ಬಂಧವಿದೆ. ಇದೀಗ ಮೀನುಗಾರಿಕೆ ಇಲಾಖೆ ಮತ್ತು ಜಿಲ್ಲಾಡಳಿತ ನೀಡಿದ ನಿರ್ದೇಶನದಂತೆ ಮೀನುಗಾರಿಕೆ ಆರಂಭಗೊಂಡಿದೆ.

ಸಭೆಯ ತೀರ್ಮಾನಗಳು
ಸಭೆಯಲ್ಲಿ ಕೆಲವೊಂದು ನಿಯಮ ರೂಪಿಸಲಾಗಿದೆ. ಬಂದರಿನೊಳಗೆ ಹೊರ ರಾಜ್ಯದ ವಾಹನಗಳ ನಿಲುಗಡೆಗೆ ಅವಕಾಶ ಇರುವುದಿಲ್ಲ. ದ್ವಿಚಕ್ರ, ಕಾರುಗಳನ್ನು ನಿಗದಿತ ಸ್ಥಳದಲ್ಲಿಯೇ ಪಾರ್ಕ್‌ ಮಾಡಬೇಕು. ಮೀನು ಮಾರಾಟದ ಮಹಿಳೆಯರಿಗೆ ಬಂದರಿನೊಳಗೆ ಮೀನು ಖರೀದಿ ಮಾಡಲು ಅವಕಾಶವಿದ್ದು, ಚಿಲ್ಲರೆ ಮಾರಾಟಕ್ಕೆ ಅವಕಾಶವಿಲ್ಲ. ಮೀನುಗಾರಿಕೆ ಮುಗಿಸಿ ಬಂದರಿಗೆ ಬರುವ ದೋಣಿಗಳ ಮೀನು ಖಾಲಿ ಮಾಡುವ ಸಮಯದಲ್ಲಿ ಆಯಾಯ ವಿಭಾಗ ಮೀನುಗಾರ ಸಂಘದ ಸ್ವಯಂ ಸೇವಕರನ್ನು ನಿಯೋಜಿಸಿ, ಸಾಮಾಜಿಕ ಅಂತರವನ್ನು ಕಾಯ್ದು ಮೀನು ಖಾಲಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಎಲ್ಲರೂ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಸಂಘದ ಅಧ್ಯಕ್ಷ ಕೃಷ್ಣ ಎಸ್‌. ಸುವರ್ಣ ತಿಳಿಸಿದ್ದಾರೆ.

ಪಾಳಿ ಆಧಾರದಲ್ಲಿ ಮೀನು ಅನ್‌ಲೋಡ್‌
ಪಾಳಿ ಆಧಾರದಲ್ಲಿ ವಿವಿಧ ವರ್ಗಗಳ‌ ಬೋಟ್‌ಗಳ ಮೀನುಗಳನ್ನು ಖಾಲಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಮುಂಜಾನೆ 4.30ರಿಂದ ಬೆಳಗ್ಗೆ 8 ಗಂಟೆಯವರೆಗೆ ಆಳಸಮುದ್ರ ಬೋಟ್‌, 8ರಿಂದ 9.30ರ ವರೆಗೆ ತ್ರೀಸೆವೆಂಟಿ ಬೋಟುಗಳು, ಮಧ್ಯಾಹ್ನ 1 ಗಂಟೆಯ ಬಳಿಕ ಸಣ್ಣಟ್ರಾಲ್‌ಬೋಟು, ಸಂಜೆ 4 ಗಂಟೆಯ ಅನಂತರ ಪಸೀìನ್‌ ಬೋಟುಗಳ ಮೀನುಗಳನ್ನು ಖಾಲಿ ಮಾಡಲಾಗುತ್ತದೆ.

ಬಂದರು ಪ್ರವೇಶಕ್ಕೆ ಮಾಸ್ಕ್ ಕಡ್ಡಾಯ
ವಿವಿಧ ಮೀನುಗಾರ ಸಂಘಗಳ ವತಿಯಿಂದ ಮುಂದಿನ ಸೀಮಿತ ಅವಧಿಯವರೆಗೆ ಪ್ರತಿದಿನ ರಾತ್ರಿ 9 ಗಂಟೆಯ ಬಳಿಕ ಮಲ್ಪೆ ಬಂದರು ಪ್ರದೇಶವನ್ನು ಸಂಪೂರ್ಣವಾಗಿ ಸ್ಯಾನಿಟೈಸ್‌ ಮಾಡಲು ತೀರ್ಮಾನಿಸ ಲಾಗಿದೆ. ಬಂದರು ಪ್ರವೇಶಕ್ಕೆ ಮಾಸ್ಕ್ ಕಡ್ಡಾಯ. ಮಾಸ್ಕ್ ಇಲ್ಲದೆ ಪ್ರವೇಶ ಮಾಡುವವರ ಬಗ್ಗೆ ಕ್ರಮ ತೆಗೆದು ಕೊಳ್ಳಲು ಪೊಲೀಸ್‌ ಇಲಾಖೆ , ಕರಾವಳಿ ಕಾವಲು ಪಡೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ.
-ಕೃಷ್ಣ ಎಸ್‌. ಸುವರ್ಣ,  ಅಧ್ಯಕ್ಷರು, ಮಲ್ಪೆ ಮೀನುಗಾರರ ಸಂಘ

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.