Udupi: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಅಧಿಕಾರಿಗಳ ನೇಮಕ

ಹಳ್ಳಿಗಳಲ್ಲಿ ಏರುತ್ತಿರುವ ರಾಜಕೀಯ ತೆರೆ ಮರೆಯ ರಂಗು ; ಆ.17ರ ಬಳಿಕ ಚುನಾವಣೆ

Team Udayavani, Aug 4, 2023, 3:23 PM IST

13-udupi-eletion

ಉಡುಪಿ/ಕಾಪು/ಬ್ರಹ್ಮಾವರ: ಗ್ರಾ. ಪಂ. ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಆ.17ರ ಅನಂತರ ಹಲವೆಡೆ ನಡೆಯುವ ಸಾಧ್ಯತೆ ಇದ್ದು, ಜಿಲ್ಲೆಯ ಎಲ್ಲ ಗ್ರಾ. ಪಂ.ಗಳಿಗೆ ಈಗಾಗಲೇ ಗೊತ್ತುಪಡಿಸಿದ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ನೇಮಕ ಮಾಡಿದ್ದಾರೆ.

ಬ್ರಹ್ಮಾವರ ತಾಲೂಕಿನ ಕನ್ಯಾನ ಗ್ರಾ.ಪಂ.ನಲ್ಲಿ ವಿಳಂಬವಾಗಿ ಚುನಾವಣೆ ನಡೆದ ಕಾರಣ ಅಲ್ಲಿನ ಅಧ್ಯಕ್ಷ, ಉಪಾಧ್ಯಕ್ಷರ ಅವಧಿ ಮುಗಿದಿಲ್ಲ. ಕುಂದಾಪುರ ತಾಲೂಕಿನ ಹೊಸಾಡು ಗ್ರಾ.ಪಂ.ನಲ್ಲಿ ಚುನಾವಣೆ ನಡೆದಿಲ್ಲ. ಇವೆರಡು ಬಿಟ್ಟು ಜಿಲ್ಲೆಯ 153 ಗ್ರಾ.ಪಂ.ಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆಯಲಿದೆ.

ಜಿಲ್ಲೆಯಲ್ಲಿ ಈಗಾಗಲೇ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮುಂದಿನ ಎರಡೂವರೆ ವರ್ಷದ ಅವಧಿಗೆ ಜಿಲ್ಲಾಡಳಿತ ಮೀಸಲಾತಿ ನಿಗದಿಗೊಳಿಸಿದೆ. ಗ್ರಾ. ಪಂ. ಅಧಿಕಾರಕ್ಕಾಗಿ ಕಾಂಗ್ರೆಸ್‌-ಬಿಜೆಪಿ ಬೆಂಬಲಿಗರಿಂದ ಬಾರಿ ಕಸರತ್ತು ನಡೆಯುತ್ತಿದ್ದು, ಹಳ್ಳಿ ರಾಜಕಾರಣ ಗರಿಗೆದರಿದೆ. ಮೀಸಲಾತಿ ಅರ್ಹತೆ ಪಡೆದ ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಶುರುವಾಗಿದ್ದು, ಎಲ್ಲ ರೀತಿಯ ರಾಜಕೀಯ ಲೆಕ್ಕಾಚಾರ ಆರಂಭಗೊಂಡಿದೆ.

ಗ್ರಾ.ಪಂ.ಗಳಲ್ಲಿ ಎರಡನೇ ಅವಧಿಯ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ನಡೆಯುವುದರಿಂದ ಕೆಲವು ಕಡೆಗಳಲ್ಲಿ ಅಧಿಕಾರಕ್ಕಾಗಿ ಹಣ ಬಲ, ಪಕ್ಷ ಬಲವು ಹೆಚ್ಚಾಗಿ ನಡೆಯುತ್ತಿದೆ. ಕೆಲವು ಗ್ರಾ.ಪಂ.ಗಳಲ್ಲಿ ಅವಿರೋಧ ಆಯ್ಕೆ ಸಾಧ್ಯತೆ ಹೆಚ್ಚಿದೆ. ಕೆಲವು ಕಡೆ ಗಳಲ್ಲಿ ಕಳೆದ ಮೊದಲನೇ ಅವಧಿಯಲ್ಲಿ ಇದ್ದಂತಹ ಗ್ರಾ.ಪಂ. ಸದಸ್ಯರು ಬೇರೆ ಒಂದು ಗುಂಪಿನಿಂದ ಮತ್ತೂಂದು ಗುಂಪುಗಳಿಗೆ ಅಧಿಕಾರಕ್ಕಾಗಿ ಬದಲಾವಣೆ ಆಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ. ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕೆ ಶಾಸಕರ ಖರೀದಿ ಇದ್ದಂತೆ ಗ್ರಾ. ಪಂ. ಮಟ್ಟದಲ್ಲಿಯೂ ಸಹ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡು, ಕಾಂಗ್ರೆಸ್‌ ಆಡಳಿತ ಚುಕ್ಕಾಣಿ ಹಿಡಿದಿದೆ. ಜಿಲ್ಲೆಯಲ್ಲಿ ಎಲ್ಲ ಐದು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿರುವ ಹಿನ್ನೆಲೆಯಲ್ಲಿ ಎರಡು ರಾಜಕೀಯ ಪಕ್ಷಗಳ ಲೆಕ್ಕಾಚಾರ ಸೂಕ್ಷ್ಮವಾಗಿ ರೂಪುಗೊಳ್ಳುತ್ತಿವೆ. ಈ ನೆಲೆಯಲ್ಲಿ ಮುಂಬರುವ ತಾ.ಪಂ., ಜಿ.ಪಂ. ಹಾಗೂ ಲೋಕಸಭಾ ಚುನಾವಣೆ ವೇಳೆಗೆ ಹಳ್ಳಿ ರಾಜಕೀಯ ಚಿತ್ರಣವೇ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳಿಂದ ಬದಲಾಗುವ ಸಾಧ್ಯತೆ ದಟ್ಟವಾಗಿದೆ.

ತಾಲೂಕಿನ ಗ್ರಾ. ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನೇಮಕಗೊಂಡ ಅಧಿಕಾರಿಗಳ ವಿವರ ಇಂತಿದೆ:

ಉಡುಪಿ ತಾಲೂಕು: 16 ಗ್ರಾ.ಪಂ.

ಪೆರ್ಡೂರು, ಕುಕ್ಕೆಹಳ್ಳಿ: ಎಸ್‌.ಎನ್‌. ರಮೇಶ್‌, ಸಹಾಯಕ ನಿರ್ದೇಶಕರು, ತಾಲೂಕು ಸಮಾಜ ಕಲ್ಯಾಣ ಇಲಾಖೆ;

ಬೈರಂಪಳ್ಳಿ, ಬೊಮ್ಮರಬೆಟ್ಟು: ಗೌತಮ್‌ ಶಾಸ್ತ್ರಿ, ಭೂವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ;

ಕಲ್ಯಾಣಪುರ, ತೋನ್ಸೆ: ಶಂಕರ್‌, ಜಿಲ್ಲಾ ವ್ಯವಸ್ಥಾಪಕರು, ಅಂಬೇಡ್ಕರ್‌ ನಿಗಮ;

ತೆಂಕನಿಡಿಯೂರು, ಬಡಾನಿಡಿಯೂರು: ಮೋಹನ್‌ರಾಜ್‌, ಸಹಾಯಕ ನಿರ್ದೇಶಕರು, ಕೃಷಿ ಇಲಾಖೆ;

ಅಂಬಲಪಾಡಿ, ಕಡೆಕಾರು: ಚಂದ್ರೇಗೌಡ, ಬಿಇಒ, ಉಡುಪಿ;

ಉದ್ಯಾವರ, 80 ಬಡಗಬೆಟ್ಟು: ನಿಧೀಶ್‌, ಸಹಾಯಕ ತೋಟಗಾರಿಕಾ ನಿರ್ದೇಶಕರು;

ಆತ್ರಾಡಿ, ಕೊಡಿಬೆಟ್ಟು: ಹಾಜಿರಾ ಸಜಿನಿ, ಭೂವಿಜ್ಞಾನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ;

ಮಣಿಪುರ, ಅಲೆವೂರು: ವಿನಾಯಕ ಪೂಜಾರ್‌, ಎಇಇ, ಲೋಕೋಪಯೋಗಿ ಇಲಾಖೆ.

ಬ್ರಹ್ಮಾವರ ತಾಲೂಕು: 26 ಗ್ರಾ.ಪಂ.

ಕೋಟತಟ್ಟು, ಕೋಟ: ಎಚ್‌.ವಿ. ಇಬ್ರಾಹಿಂಪುರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ,

ಪಾಂಡೇಶ್ವರ, ಐರೋಡಿ: ಇಂದು ಎಂ. ಸಾಲಿಗ್ರಾಮ ಪ.ಪಂ. ಮುಖ್ಯಾಧಿಕಾರಿ,

ಬಾರಕೂರು, ವಡ್ಡರ್ಸೆ: ಸುಪ್ರಭಾ, ಕೋಟ ಸಹಾಯಕ ಕೃಷಿ ಅಧಿಕಾರಿ,

ಯಡ್ತಾಡಿ, ಶಿರಿಯಾರ: ಕೆ. ರಂಗನಾಥ ಕ್ಷೇತ್ರ ಶಿಕ್ಷಣಾಧಿಕಾರಿ,

ಬಿಲ್ಲಾಡಿ, ಆವರ್ಸೆ: ಅಶೋಕ ಪೂಜಾರಿ, ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌,

ಹೆಗ್ಗುಂಜೆ, ಹನೆಹಳ್ಳಿ: ಪವಿತ್ರಾ ಎಸ್‌., ಕೋಟದ ಸಹಾಯಕ ತೋಟಗಾರಿಕಾ ಅಧಿಕಾರಿ,

ಕಾಡೂರು, ನಾಲ್ಕೂರು: ಡಾ| ಪ್ರದೀಪ್‌ ಕುಮಾರ್‌, ಸಾಯಿಬ್ರಕಟ್ಟೆ ಪಶು ವೈದ್ಯಾಧಿಕಾರಿ,

ಕೊಕ್ಕರ್ಣೆ, ಚೇರ್ಕಾಡಿ: ಮಹಾಂತೇಶ, ಬ್ರಹ್ಮಾವರ ಸಹಾಯಕ ತೋಟಗಾರಿಕೆ ಅಧಿಕಾರಿ,

ಕಳ್ತೂರು, ಕರ್ಜೆ: ಡಾ| ಮಂಜುನಾಥ ಅಡಿಗ, ಕಳ್ತೂರು ಪಶು ವೈದ್ಯಾಧಿಕಾರಿ,

ಆರೂರು, ಉಪ್ಪೂರು: ಕುಮಾರ್‌ ನಾಯಕ್‌, ಶಿಶು ಅಭಿವೃದ್ಧಿ ಯೋಜನಾಧಿಕಾರಿ,

ವಾರಂಬಳ್ಳಿ, ಹಾರಾಡಿ: ಪಾಪಣ್ಣ ಎನ್‌.ಎ., ಬಾರಕೂರು ಕಾಲೇಜು ಸಹಾಯಕ ಪ್ರಾಧ್ಯಾಪಕ,

ಚಾಂತಾರು, ಹಾವಂಜೆ: ಸತೀಶ್‌ ಕುಮಾರ್‌, ಸಹಾಯಕ ಪ್ರಾಧ್ಯಾಪಕ,

ಹಂದಾಡಿ, ನೀಲಾವರ: ರಾಘವ ಶೆಟ್ಟಿ ಶಿಕ್ಷಣ ಸಂಯೋಜಕ.

ಕಾಪು ತಾಲೂಕು: 16 ಗ್ರಾ.ಪಂ.

ಬೆಳ್ಳೆ, ಮುದರಂಗಡಿ, ಪಲಿಮಾರು: ಗುರುಪ್ರಸಾದ್‌, ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ,

ಕುರ್ಕಾಲು,ಶಿರ್ವ, ಕಟಪಾಡಿ: ಸಚಿನ್‌, ಮೀನುಗಾರಿಕಾ ಸಹಾಯಕ ನಿರ್ದೇಶಕರು, ಉಡುಪಿ,

ಇನ್ನಂಜೆ, ಮಜೂರು, ಪಡುಬಿದ್ರಿ: ವರುಣ್‌ ಕೆ.ಜೆ., ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ ಉಡುಪಿ,

ಕೋಟೆ: ವಿವೇಕಾನಂದ ಗಾಂವ್ಕರ್‌, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ಉಡುಪಿ,

ಕುತ್ಯಾರು, ಎಲ್ಲೂರು: ವೆಂಕಟೇಶ್‌, ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ, ಉಡುಪಿ,

ಬೆಳಪು, ಬಡಾ: ನಿಧೀಶ್‌ ಕೆ.ಜೆ., ಸಹಾಯಕ ನಿರ್ದೇಶಕರು, ತೋಟಗಾರಿಕಾ ಇಲಾಖೆ, ಉಡುಪಿ,

ತೆಂಕ, ಹೆಜಮಾಡಿ: ಅಶ್ವಿ‌ನಿ ಎಂ.ಎಂ., ಭೂ ವಿಜ್ಞಾನಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ.

ಟಾಪ್ ನ್ಯೂಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.