ಜಿಲ್ಲೆಯಲ್ಲಿ 1,840 ಮೀ. ಕಡಲು ಕೊರೆತ: ತಾತ್ಕಾಲಿಕ, ಶಾಶ್ವತ ಪರಿಹಾರಕ್ಕೆ ಪ್ರಸ್ತಾವನೆ


Team Udayavani, Jul 18, 2022, 12:36 PM IST

9

ಉಡುಪಿ: ಜಿಲ್ಲೆಯಲ್ಲಿ ಮಳೆ -ಗಾಳಿಯಿಂದ ವ್ಯಾಪಕ ಹಾನಿ ಸಂಭವಿಸಿದ್ದು, ಕಡಲ್ಕೊರೆತವು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಸಮುದ್ರ ಪ್ರಕ್ಯುಬ್ಧಗೊಂಡು ಬೃಹತ್‌ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ಜೂನ್‌, ಜುಲೈ ತಿಂಗಳ ಮಳೆಗೆ ಜಿಲ್ಲೆಯಲ್ಲಿ 1,840 ಮೀಟರ್‌ ಉದ್ದದಷ್ಟು ಕಡಲ್ಕೊರೆತ ಸಂಭವಿಸಿದೆ.

ಎಲ್ಲೆಲ್ಲಿ ಹಾನಿ?

ಬೈಂದೂರು ತಾಲೂಕಿನ ಮರವಂತೆ ಗ್ರಾಮದ ನಾಗಬನ ಬಳಿ 350 ಮೀ., ಕಿರಿಮಂಜೇಶ್ವರ ಗ್ರಾಮದ ಆದ್ರಗೋಳಿ ಸಮೀಪ 200 ಮೀ., ಕುಂದಾಪುರದ ಗುಜ್ಜಾಡಿ ಹೊಸಾಡು ಗ್ರಾಮದ ಕಂಚುಗೋಡಿನಲ್ಲಿ 250 ಮೀ., ಕಾಪು ತಾಲೂಕಿನ ಮುಳೂರಿನಲ್ಲಿ 200 ಮೀ., ಪಡುಬಿದ್ರಿಯ ನಡಿಪಟ್ನದಲ್ಲಿ 270 ಮೀ., ಕೈಪುಂಜಾಲುವಿನಲ್ಲಿ 240 ಮೀ., ಬ್ರಹಾವರ ಕೋಟ ಪಡುಕರೆಯಲ್ಲಿ 130 ಮೀ. ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕುತ್ಪಾಡಿ ಕಡಲ ತೀರದಲ್ಲಿ 200 ಮೀ.ನಷ್ಟು ಕಡಲು ಕೊರೆತ ಸಂಭವಿಸಿದೆ. ಪರಿಣಾಮ ಸಮುದ್ರ ತೀರದಲ್ಲಿದ್ದ ಬಹುತೇಕ ತೆಂಗಿನ ಮರಗಳು ಧರೆಗೆ ಉರುಳಿವೆ. ರಸ್ತೆ ಹಾಗೂ ಮೀನುಗಾರಿಕೆ ದೋಣಿಗಳಿಗೆ ಹಾನಿಯಾಗಿವೆ.

ತುರ್ತು ಕಾಮಗಾರಿಗೆ ಪ್ರಸ್ತಾವನೆ

ಜಿಲ್ಲೆಯಲ್ಲಿ ಕಡಲ್ಕೊರೆತದಿಂದ ಆಗಿರುವ ಹಾನಿಗೆ ತುರ್ತು ಕಾಮಗಾರಿ ಮೂಲಕ ಸರಿಪಡಿಸಲು ಸರಕಾರಕ್ಕೆ 13.82 ಕೋ. ರೂ., ಅಂದಾಜು ಪ್ರಸ್ತಾವನೆ ಸಲ್ಲಿಸಲಾ ಗಿದೆ. ಮರವಂತೆ ನಾಗಬನದ ಬಳಿ ಕಡಲ ತೀರದಲ್ಲಿ 2.63 ಕೋ. ರೂ., ಗುಜ್ಜಾಡಿ ಹೊಸಾಡು ಕಂಚುಗೋಡು ಬಳಿ 1.88 ಕೋ. ರೂ., ಮುಳೂರು 1.50 ಕೋ. ರೂ., ನಡಿಪ್ಟಟ್ನ 2.03 ಕೋ, ರೂ., ಕೈಪುಂಜಾಲು 1.80 ಕೋ. ರೂ., ಕೋಟ ಪಡುಕರೆ 98 ಲಕ್ಷ ರೂ., ಕುತ್ಪಾಡಿ ಪಡುಕರೆಯಲ್ಲಿ 1.50 ಕೋ.ರೂ. ಅಗತ್ಯವಿದೆ ಎಂದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಹಾಗೆಯೇ ಇದೇ ಸ್ಥಳದಲ್ಲಿ ದೀರ್ಘ‌ಕಾಲದ ಕಾಮಗಾರಿಗೆ ಸುಮಾರು 20 ಕೋ.ರೂ. ಅವಶ್ಯವಿದೆ ಎಂದು ಉಲ್ಲೇಖೀಸಿದೆ. ಮರವಂತೆಯ ನಾಗಬನ ಬಳಿ ಪ್ರತಿಬಂಧಕ ಗೋಡೆ ನಿರ್ಮಿಸಲು 3.85 ಕೋ.ರೂ., ಕಂಚುಗೋಡಿಗೆ 2.75 ಕೋ.ರೂ., ಆದ್ರಗೋಳಿಗೆ 2.20 ಕೋ.ರೂ., ಮೂಳೂರಿಗೆ 2.20 ಕೋ.ರೂ., ನಡಿಪಟ್ನಕ್ಕೆ 2.97 ಕೋ.ರೂ., ಕೈಪುಂಜಾಲುಗೆ 2.64 ಕೋ.ರೂ., ಕೋಟ ಪಡುಕರೆಗೆ 1.43 ಕೋ.ರೂ. ಹಾಗೂ ಕುತ್ಪಾಡಿ ಪಡುಕರೆಗೆ 2.20 ಕೋ.ರೂ. ಶಾಶ್ವತ ಪರಿಹಾರಕ್ಕೆ ಅಗತ್ಯವಿದೆ ಎಂದು ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ.

ವೈಜ್ಞಾನಿಕವಾಗಿ ಕಾಮಗಾರಿ ನಡೆಸಬೇಕು

ಪ್ರತೀ ವರ್ಷ ಮಳೆಗಾಲದಲ್ಲಿ ಕಡಲ್ಕೊರೆತಕ್ಕೆ ತಡೆ ಒಡ್ಡಲು ಕಲ್ಲು ಹಾಕಲಾಗುತ್ತದೆ. ಇದರ ಬದಲಾಗಿ ಮಳೆಗಾಲಕ್ಕೂ ಮೊದಲೇ ಕಡಲ್ಕೊರೆತ ಆಗಬಲ್ಲ ಪ್ರದೇಶಗಳನ್ನು ಗುರುತಿಸಿ, ಅಲ್ಲಿಗೆ ವೈಜ್ಞಾನಿಕ ವಿಧಾನದ ಮೂಲಕ ಕಲ್ಲು ಹಾಕುವ ಪ್ರಕ್ರಿಯೆ ಶುರುವಾಗಬೇಕು. ಜನಪ್ರತಿನಿಧಿಗಳ ಒತ್ತಡಕ್ಕೆ ತಾತ್ಕಾಲಿಕವಾಗಿ ಕಲ್ಲು ಹಾಕುವುದು ಬಿಟ್ಟರೆ ಬೇರೆ ಯಾವುದೇ ಪ್ರಯೋಜನ ಇರುವುದಿಲ್ಲ. ಹೀಗಾಗಿ ಕಡಲ ತೀರದಲ್ಲಿ ವಾಸವಾಗಿ ರುವ ಕುಟುಂಬಗಳು ನೆಮ್ಮದಿಯಿಂದ ಜೀವನ ನಡೆಸ ಬೇಕಾದರೆ ವೈಜ್ಞಾನಿಕ ಕ್ರಮಗಳ ಮೂಲಕ ಕಾಮಗಾರಿ ನಡೆಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.