ತಡೆಗೋಡೆ ನಿರ್ಮಿಸಿ ಅಂಗನವಾಡಿ ಕೇಂದ್ರದ ರಕ್ಷಣೆ
ನೀರೆ: ಕುಸಿತ ಭೀತಿಯಲ್ಲಿದ್ದ ಅಂಗನವಾಡಿ ಕೇಂದ
Team Udayavani, Aug 22, 2022, 11:27 AM IST
ಕಾರ್ಕಳ: ಕಾರ್ಕಳ- ಉಡುಪಿ ಹೆದ್ದಾರಿಯ ನೀರೆ ಬಳಿ ಅಂಗನವಾಡಿ ಕೇಂದ್ರದ ಕಾಂಪೌಂಡ್ ಬಳಿ ಜು. 13ರಂದು ಸುರಿದ ಮಳೆಗೆ ಅಂಗನವಾಡಿ ಕೇಂದ್ರದ ಕಾಂಪೌಂಡ್ ಕುಸಿದಿತ್ತು. ಅಲ್ಲದೆ ಮತ್ತಷ್ಟು ಹಾನಿ ಸಂಭವಿಸುವ ಸಾಧ್ಯತೆ ಇತ್ತು. ಇದೀಗ ಈ ಸ್ಥಳದಲ್ಲಿ ತಡೆಗೋಡೆ ನಿರ್ಮಿಸಿ ಭೂಕುಸಿತ ತಡೆಯುವ ಪ್ರಯತ್ನ ನಡೆಸಲಾಗಿದೆ.
ಹೆದ್ದಾರಿ ಪಕ್ಕದಲ್ಲೇ ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆಯ ನೀರೆ ಅಂಗನವಾಡಿ ಕೇಂದ್ರವಿದೆ. ಇಲ್ಲಿ 10 ಮಂದಿ ಪುಟಾಣಿಗಳು ಇದ್ದಾರೆ. ಅಂಗನವಾಡಿ ಕೇಂದ್ರ ಹೆದ್ದಾರಿ ಬದಿಯಲ್ಲೇ ಇದ್ದು ಕೇಂದ್ರದ ಮುಂಭಾಗದ ಕಾಂಪೌಂಡ್ ಇರುವಲ್ಲಿ ಮಳೆಯಿಂದ ಭೂಕುಸಿತ ನಡೆದು ಅಪಾಯ ತಂದೊಡ್ಡುವ ರೀತಿಯಲ್ಲಿತ್ತು. ಅಂದು ಕುಸಿತ ನಡೆದ ಸಂದರ್ಭ ಸ್ಥಳಕ್ಕೆ ನೀರೆ ಗ್ರಾ.ಪಂ. ಪಿಡಿಒ ಅಂಕಿತ ಹಾಗೂ ಇತರ ಅಧಿಕಾರಿಗಳು ತೆರಳಿ ಪರಿಶೀಲಿಸಿ, ಕುಸಿತಗೊಂಡ ಜಾಗದ ಮಣ್ಣು ಅನ್ನು ಜೆಸಿಬಿ ಮೂಲಕ ತೆರವುಗೊಳಿಸಿ, ನೀರು ಹರಿದು ಹೋಗುವಂತೆ ಮಾಡಿ ಕುಸಿತ ಹೆಚ್ಚಾಗದಂತೆ ತಡೆಯುವ ತಾತ್ಕಾಲಿಕ ಕೆಲಸವನ್ನು ಗ್ರಾ.ಪಂ. ವತಿಯಿಂದ ಮಾಡಲಾಗಿತ್ತು. ಇದರಿಂದ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿದರೂ ಭೀತಿ ಹಾಗೆ ಮುಂದುವರಿದಿತ್ತು.
ಸಂಭವನೀಯ ಅಪಾಯದ ಮುನ್ಸೂಚನೆ ಅರಿತು ಇದೀಗ ಅಂಗನವಾಡಿ ಕಾಂಪೌಂಡ್ ಇರುವ ಸ್ಥಳದಲ್ಲಿ ವಿಪತ್ತು ನಿರ್ವಹಣೆ ಅನುದಾನ ಬಳಸಿ ತಡೆಗೋಡೆ ನಿರ್ಮಿಸಲಾಗುತ್ತಿದೆ. ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ.
ಈ ಹಿಂದೆ ಉಡುಪಿ-ಕಾರ್ಕಳ ಜಿಲ್ಲಾ ಮುಖ್ಯ ರಸ್ತೆ ಆಗಿತ್ತು. ಬಳಿಕ ಈ ರಸ್ತೆಯನ್ನು ಪೇತ್ರಿ-ಹಿರಿಯಡಕ-ಕಾರ್ಕಳ ರಾಜ್ಯ ಹೆದ್ದಾರಿ ಯಾಗಿ ಮೇಲ್ದರ್ಜೆಗೇರಿಸಲಾಗಿತ್ತು. ಹೆದ್ದಾರಿ ಬದಿಯಲ್ಲಿ ಇದ್ದ ಅಂಗನವಾಡಿ ಕಟ್ಟಡದ ಕೆಳಭಾಗ ಕುಸಿಯುತ್ತ ಮುಂದುವರಿದಲ್ಲಿ ಅಂಗನವಾಡಿಗೆ ಹಾನಿಯಾಗುವ ಸಂಭವವಿದೆ. ಪುಟಾಣಿ ಮಕ್ಕಳಿಗೆ ಸುರಕ್ಷತೆಯ ಭಯ ಕೂಡ ಎದುರಾಗುವ ಬಗ್ಗೆ ಹಾಗೂ ಹೆದ್ದಾರಿಗೂ ಮಣ್ಣು ಕುಸಿಯುವ ಭೀತಿಯಿದ್ದು, ಸಂಚಾರಕ್ಕೂ ತೊಡಕಾಗಿ ಪರಿಣಮಿಸುವ ಸಾಧ್ಯತೆಗಳಿವೆ. ಅಂಗನವಾಡಿ ಕೇಂದ್ರದ ಮೇಲಕ್ಕೆ ಸರಕಾರಿ ಪ್ರಾಥಮಿಕ ಶಾಲೆಯೂ ಇದೆ. ಸುರಕ್ಷಿತ ಕ್ರಮವಾಗಿ ಗುಡ್ಡ ಕುಸಿತ ಮುಂದುವರಿಯದಂತೆ ಗಟ್ಟಿ ತಡೆಗೋಡೆ ನಿರ್ಮಿಸುವ ಆವಶ್ಯಕತೆಯಿದೆ. ಎನ್ನುವ ಕುರಿತು ಅಂದು ಉದಯವಾಣಿ ಸುದಿನದಲ್ಲಿ ವರದಿ ಪ್ರಕಟಿಸಲಾಗಿತ್ತು. ಇದೆಲ್ಲದರ ಫಲವೆಂಬಂತೆ ಅಂಗನವಾಡಿ, ಕಾಂಪೌಂಡ್ ಇರುವಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ