ಬೀದಿಯಲ್ಲಿ ಅಕ್ಕಿ ಬೇಡುತ್ತಿದ್ದ ಮಕ್ಕಳ ರಕ್ಷಣೆ
Team Udayavani, May 18, 2020, 5:57 AM IST
ಮಲ್ಪೆ: ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿಯಲ್ಲಿ ಊಟಕ್ಕೆ ಅಕ್ಕಿ ಕೊಡಿ ಎಂದು ಸಾರ್ವಜನಿಕರಲ್ಲಿ ಅಂಗಲಾಚುತ್ತಿದ್ದ ಇಬ್ಬರು ಬಾಲಕರನ್ನು ವಿಶು ಶೆಟ್ಟಿ ಅಂಬಲಪಾಡಿ ಅವರು ತುರ್ತು ಸಹಾಯ ನೀಡಿ ರಕ್ಷಿಸಿ ಹೆತ್ತವರಿಗೆ ಒಪ್ಪಿಸಿದ್ದಾರೆ.
ಬಾಲಕರು ನಮಗೆ ಇದುವರೆಗೆ ಉಚಿತ ಊಟ ಸಿಗುತ್ತಿತ್ತು. ಇದೀಗ ಮನೆಯಲ್ಲಿದ್ದ ಅಕ್ಕಿ ಖಾಲಿಯಾಗಿದೆ. ತಂದೆ ಮಾಡುತ್ತಿದ್ದ ಕೆಲಸ ಇನ್ನೂ ಪ್ರಾರಂಭವಾಗಲಿಲ್ಲ. ತಾಯಿಯ ಆರೋಗ್ಯ ಸರಿ ಇಲ್ಲ. ಹಾಗಾಗಿ ಮನೆಯಲ್ಲಿ ಊಟಕ್ಕೆ ಅಕ್ಕಿ ಇಲ್ಲದೆ ಉಪವಾಸ ಇರಬೇಕಾದ ಪರಿಸ್ಥಿತಿ ಒದಗಿದೆ ಅವರಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಇದಕ್ಕೆ ಸ್ಪಂದಿಸಿದ ಅವರು ಅಸಹಾಯಕ ಕುಟುಂಬಕ್ಕೆ 20 ಕೆ.ಜಿ. ಅಕ್ಕಿ ಹಾಗೂ ದಿನಸಿ ಸಾಮಗ್ರಿ ನೀಡಿ, ಬಾಲಕರನ್ನು ಹೆತ್ತವರಿಗೆ ಒಪ್ಪಿಸಿ, ಮಕ್ಕಳನ್ನು ಬೀದಿಯಲ್ಲಿ ಬೇಡಲು ಬಿಡಬೇಡಿ ಬುದ್ಧಿ ಮಾತು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಅಸಹಾಯಕ ಮಕ್ಕಳು ಬೀದಿಗೆ ಬೀಳುವ ಸಂಭವ ಹೆಚ್ಚಾಗಿದೆ. ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಯವರು ಮಕ್ಕಳು ಬೀದಿಗೆ ಇಳಿಯದಂತೆ, ಬೀಳದಂತೆ ಮಾನವೀಯ ಕ್ರಮ ಕೈಗೊಳ್ಳಬೇಕೆಂದು ಅವರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ