ದೇಗುಲಗಳಿಗೆ ಶೀಘ್ರ ಪೂರ್ಣ ಪ್ರಮಾಣದ ಸಮಿತಿ: ಕೋಟ
Team Udayavani, Sep 29, 2020, 11:26 PM IST
ಕಾರ್ಕಳ: ರಾಜ್ಯದ 65 ದೇವಸ್ಥಾನಗಳಿಗೆ ವಾರದೊಳಗೆ ವ್ಯವಸ್ಥಾಪನ ಸಮಿತಿ ನೇಮಕ ಮಾಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳವಾರ ಕಾರ್ಕಳ ಭಾಗಕ್ಕೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವ್ಯವಸ್ಥಾಪನ ಸಮಿತಿಗೆ ಅರ್ಜಿ ಸಲ್ಲಿಸಿದವರಲ್ಲಿ ಹೊರ ರಾಜ್ಯದವರು ಇರುವುದರಿಂದ ಪೊಲೀಸ್ ಪರಿಶೀಲನೆ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಕಾಶ ತಗಲಿರುವುದರಿಂದ ನೇಮಕ ವಿಳಂಬವಾಗಿದೆ. ಬಿ ಮತ್ತು ಸಿ ಶ್ರೇಣಿಯ ದೇವಸ್ಥಾನಗಳಲ್ಲಿ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅರ್ಜಿ ಸಲ್ಲಿಕೆಯಾಗದ ಕಡೆಗಳಲ್ಲಿ ಸ್ವಯಂ ಪ್ರೇರಿತವಾಗಿ ಆಯ್ಕೆ ಪ್ರಕ್ರಿಯೆಯನ್ನು ಧಾರ್ಮಿಕ ಪರಿಷತ್ ನಡೆಸಲಿದೆ. ಪೂರ್ಣ ಪ್ರಮಾಣದ ವ್ಯವಸ್ಥಾಪನ ಸಮಿತಿ ರಚನೆಯಾಗಲಿದೆ ಎಂದರು. ದೇವಸ್ಥಾನಗಳ ಭದ್ರತೆಗೆ ಸಿಸಿ ಕೆಮರಾ ಅಳವಡಿಕೆ, ಭದ್ರತೆ ಸಿಬಂದಿ ಒದಗಿಸಲು ಸರಕಾರ ಬದ್ಧವಾಗಿದೆ ಎಂದರು.
ಡೀಮ್ಡ್ ಫಾರೆಸ್ಟ್ ಸಮಸ್ಯೆಯಿಂದ ಬಹಳಷ್ಟು ಮಂದಿಗೆ ಭೂಮಿಯ ಹಕ್ಕು ಪತ್ರ ಹಾಗೂ ಹಕ್ಕುಗಳನ್ನು ನೀಡಲು ಸಾಧ್ಯವಾಗಿರಲಿಲ್ಲ. ಸರಕಾರ 6 ಲಕ್ಷ ಹೆಕ್ಟೇರ್ ಪ್ರದೇಶವನ್ನು ಅರಣ್ಯ ವ್ಯಾಪ್ತಿಯಿಂದ ಕೈಬಿಡಲು ನಿರ್ಧರಿಸಿದೆ. ರೈತರಿಗೆ ಕುಮ್ಕಿ, ಕಾನ, ಬಾಣೆಯ ಜಾಗದ ಹಕ್ಕು ನೀಡಲು ವ್ಯವಸ್ಥೆ ಕಲ್ಪಿಸಲಾಗುವುದು. ಕಂದಾಯ ತಿದ್ದುಪಡಿಯಿಂದ ಕೃಷಿಕರಿಗೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಿದೆ. ಕೃಷಿಭರಿತ ಭೂಮಿಯನ್ನು ಕೃಷಿಗೆ ಮಾತ್ರ ಉಪಯೋಗಿಸಲು ಹಾಗೂ ಒಣಭೂಮಿಯನ್ನು ಇತರ ಉದ್ಯಮ, ಉದ್ಯೋಗಕ್ಕಾಗಿ ಬಳಸಲು ಅನುಕೂಲವಾಗಲಿದೆ. ಆಯುಷ್ಮಾನ್ ಭಾರತ್ ಸೌಲಭ್ಯ ಕಾರ್ಡನ್ನು ಕೊರೊನಾ ಚಿಕಿತ್ಸೆಗೆ ವಿಸ್ತರಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ