ಗಾಯದ ಮೇಲೆ ಬರೆ ಎಳೆದ ಮಳೆ; ಫಸಲು ನಾಶ
Team Udayavani, Oct 14, 2021, 5:10 AM IST
ಕಾರ್ಕಳ: ಚಂಡಮಾರುತ ಪರಿಣಾಮ ಕಳೆದೆರಡು ದಿನಗಳಿಂದ ಸುರಿದ ಮಳೆಗೆ ತಾಲೂಕಿನ ವಿವಿಧ ಕಡೆಗಳಲ್ಲಿ ನೂರಾರು ಎಕರೆ ಭತ್ತದ ಕೃಷಿಗೆ ಹಾನಿಯಾಗಿದೆ. ಇದ ರಿಂದಾಗಿ ಕೃಷಿಕರು ತಲೆ ಮೇಲೆ ಕೈ ಇಟ್ಟು ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಮಂಗಳವಾದ ಸುರಿದ ಮಳೆಗೆ ಕಣಂಜಾರು ಗ್ರಾಮದ ಕೃಷ್ಣ ಶೆಟ್ಟಿ ಅವರ ಹೊಲದಲ್ಲಿನ ಭತ್ತದ ಪೈರುಗಳಿಗೆ ಹಾನಿಯಾಗಿ ಸುಮಾರು 30 ಸಾವಿರ ರೂ.ಯಷ್ಟು ನಷ್ಟ ಸಂಭವಿಸಿದೆ. ಇನ್ನು ಅಜೆಕಾರು, ಇರ್ವತ್ತೂರು, ಸಾಣೂರು, ಕುಕ್ಕುಂದೂರು, ಬಜಗೋಳಿ, ರೆಂಜಾಳ, ಮಿಯ್ಯಾರು, ನಕ್ರೆ, ಸೇರಿದಂತೆ ತಾಲೂಕಿನ ಬಹುತೇಕ ಎಲ್ಲ ಕಡೆಗಳಲ್ಲೂ ಇದೇ ಸ್ಥಿತಿ ಉಂಟಾಗಿದ್ದು ಅಪಾರ ನಷ್ಟವುಂಟಾಗಿದೆ.
ಆರು ತಿಂಗಳು ಮಳೆ, ಮೂರು ತಿಂಗಳು ಬಿಸಿಲು ಇದು ಅನಾದಿ ಕಾಲದ ಲೆಕ್ಕಾಚಾರ. ಇತ್ತೀಚಿನ ವರ್ಷಗಳಲ್ಲಿ ಎಲ್ಲ ಕಾಲವೂ ಮಳೆಗಾಲ ಎನ್ನುವಂತಾಗಿದೆ.
ಕಳೆದ ಜೂನ್ನಿಂದ ಇಲ್ಲಿ ತನಕ ಪ್ರತೀ ತಿಂಗಳು ಒಂದಲ್ಲ ಒಂದು ಭೂ ಪ್ರದೇಶದಲ್ಲಿ ಮಳೆಯಾಗುತ್ತಲೇ ಇತ್ತು. ಹವಾಮಾನ ವೈಪರೀತ್ಯ, ವಾಯುಭಾರ ಕುಸಿತದ ಕಾರಣ ಅಕಾಲಿಕ ಮಳೆಯಾಗುತ್ತಿದ್ದು, ಈ ಮೊದಲೇ ಕೋವಿಡ್, ಲಾಕ್ಡೌನ್, ಕಾಡು ಪ್ರಾಣಿಗಳ ಹಾವಳಿ, ಕೃಷಿಗೆ ರೋಗ ಬಾಧೆ ಇನ್ನಿತರ ಕಾರಣಗಳಿಂದ ಕೃಷಿಕರು ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. ಇದೀಗ ಮಳೆಯ ತಾಪತ್ರಯದಿಂದ ಇದ್ದ ಕೃಷಿಯೂ ಮಳೆಗೆ ಆಹುತಿಯಾಗಿದ್ದು ಕೃಷಿಕರ ಸ್ಥಿತಿ ಗಾಯದ ಮೇಲೆ ಬರೆ ಎಳೆದ ಸ್ಥಿತಿಯಂತಾಗಿದೆ.
ಇದನ್ನೂ ಓದಿ:ಟಿ.20 ವಿಶ್ವಕಪ್: ಅಕ್ಷರ್ ಪಟೇಲ್ ಜಾಗಕ್ಕೆ ಶಾರ್ದೂಲ್ ಠಾಕೂರ್
ರಸ್ತೆಗೆ ಹಾನಿ
ಅಕಾಲಿಕ ಮಳೆಯಿಂದ ತಾಲೂಕಿನ ಜನಜೀವನ ಕೂಡ ಅಸ್ತವ್ಯಸ್ಥಗೊಂಡಿದೆ. ತಗ್ಗು ಪ್ರದೇಶಗಳಿಗೆ ನೀರು ಹರಿದು ಸಮಸ್ಯೆಯಾಗಿತ್ತು. ಹೆದ್ದಾರಿ ಹಾಗೂ ಒಳ ರಸ್ತೆಗಳ ಅಲ್ಲಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಗುಡ್ಡ ಪ್ರದೇಶದಿಂದ ಕಲ್ಲು ಮಣ್ಣು ಮಿಶ್ರಿತ ನೀರು ರಸ್ತೆಗೆ ಹರಿದು ಬಂದು ಸಂಚಾರದಲ್ಲಿ ಅಲ್ಲಲ್ಲಿ ವ್ಯತ್ಯಯಗೊಂಡಿತ್ತು. ಕಾಂತಾವರ ಬಳಿ ರಸ್ತೆ ಗುಡ್ಡದ ಮಣ್ಣು ಕೊಚ್ಚಿ ಕೊಂಡು ಬಂದು ಸಮಸ್ಯೆ ಸೃಷ್ಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್