ಹೆದ್ದಾರಿ, ಸರ್ವಿಸ್ ರಸ್ತೆಯಲ್ಲೇ ಹರಿಯುತ್ತಿದೆ ಮಳೆ ನೀರು
ಉಚ್ಚಿಲ - ಮೂಳೂರು ರಾಷ್ಟ್ರೀಯ ಹೆದ್ದಾರಿ: ಚರಂಡಿ ಇದ್ದರೂ ಮಳೆನೀರಿಗಿಲ್ಲ ಮುಕ್ತಿ
Team Udayavani, Jul 2, 2023, 3:50 PM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಚರಂಡಿಯಿದ್ದರೂ ಮಳೆ ನೀರು ಹೆದ್ದಾರಿ ಮತ್ತು ಸರ್ವಿಸ್ ರಸ್ತೆಯಲ್ಲೇ ಹರಿಯುತ್ತಿರುವುದು ಹಲವಾರು ಅವಾಂತರಗಳಿಗೆ ಕಾರಣ ವಾಗುತ್ತಿದೆ.
ಎಲ್ಲೆಲ್ಲಿ ಸಮಸ್ಯೆ?
ಸರ್ವಿಸ್ ರಸ್ತೆ ಪಕ್ಕದಲ್ಲಿ ಚರಂಡಿಯಿದ್ದರೂ ಉಚ್ಚಿಲ – ಪಣಿಯೂರು ರಸ್ತೆ, ಉಚ್ಚಿಲ ಪೇಟೆ, ಪೊಲ್ಯ ರಸ್ತೆಯಿಂದ ಬದ್ದಿಂಜೆ ಮಠದವರೆಗಿನ ಸರ್ವಿಸ್ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿದೆ. ಉಚ್ಚಿಲ – ಮೂಳೂರು ಡೈವರ್ಷನ್ ಬಳಿಯ ಕುಂಜೂರು ಆಟೋಮೊಬೈಲ್ಸ್ನ ಮುಂಭಾಗದಲ್ಲಿ ಹೆದ್ದಾರಿಯಲ್ಲೇ ಮಳೆ ನೀರು ನಿಂತು ಸಂಚಾರಕ್ಕೆ ಸಂಚಕಾರವುಂಟಾಗುತ್ತಿದೆ. ಮೂಳೂರು ಪಂಚಮಿ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಚರಂಡಿ ನಿರ್ಮಾಣವಾಗದೇ ಇರುವುದರಿಂದ ರಸ್ತೆಯಲ್ಲೇ ಮಳೆ ನೀರು ಹರಿದು ಹೋಗುವಂತಾಗಿದೆ.
ಹೆದ್ದಾರಿಯಲ್ಲೇ ನಿಂತ ಮಳೆ ನೀರು
ಮೂಳೂರಿನಲ್ಲಿರುವ ಡೈವರ್ಷನ್ ಬಳಿ ಮಂಗಳೂರು-ಉಡುಪಿ ರಸ್ತೆಯಲ್ಲಿ ಗ್ಯಾರೇಜ್ ಮುಂಭಾಗದಲ್ಲೇ ಮಳೆ ನೀರು ಸಂಪೂರ್ಣವಾಗಿ ನಿಲ್ಲುತ್ತಿದೆ. ಡೈವರ್ಷನ್ನ ಡಿವೈಡರ್ನ ಪಕ್ಕದ ಭಾಗವು ತಗ್ಗು ಪ್ರದೇಶದಲ್ಲಿದ್ದು ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಪ್ರಾಣಾಪಾಯದಲ್ಲೇ ವಾಹನಗಳನ್ನು ಚಲಾಯಿಸುತ್ತಿದ್ದಾರೆ. ಮಳೆ ನೀರಿನ ಮೇಲೆ ಸವಾರರು ವೇಗವಾಗಿ ವಾಹನ ಚಲಾಯಿಸಿಕೊಂಡು ಹೋದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿಯೆಂಬಂತಾಗಿದೆ.
ಉಚ್ಚಿಲ ಮತ್ತು ಮೂಳೂರು ನಡುವಿನ ಒಂದು ಕಿ.ಮೀ. ಅಂತರದ ನಡುವಿನ ಹೆದ್ದಾರಿ ಮೇಲಿನ ಪ್ರಯಾಣವು ವಾಹನ ಸವಾರರ ಪಾಲಿಗೆ ಕಂಟಕವಾಗುತ್ತಿದ್ದು ಇನ್ನಾದರೂ ಸ್ಥಳೀಯ ಬಡಾ ಗ್ರಾ.ಪಂ., ಹೆದ್ದಾರಿ ಇಲಾಖೆ, ಹೆದ್ದಾರಿ ಪ್ರಾಧಿಕಾರ, ಗುತ್ತಿಗೆದಾರರು, ಜಿಲ್ಲಾಡಳಿತವು ಈ ಬಗ್ಗೆ ತುರ್ತಾಗಿ ಸ್ಪಂದಿಸಬೇಕಾಗಿದೆ.
ಕಾರಣವೇನು ?
ಹೆದ್ದಾರಿ ಚತುಷ್ಪಥ ಯೋಜನೆ ಕಾಮಗಾರಿಯ ವೇಳೆ ಚರಂಡಿ ನಿರ್ಮಾಣವಾಗಿದೆ ಯಾದರೂ ಅದು ಸಂಪೂರ್ಣ ಅವೈಜ್ಞಾನಿಕ ವೆಂಬಂತಾಗಿದೆ. ಮಳೆ ನೀರು ಹರಿಯಲು ಚರಂಡಿ ನಿರ್ಮಿಸಲಾಗಿದ್ದರೂ ನೀರು ಹರಿದು ಹೋಗಲು ಬಳಕೆಯಾಗುತ್ತಿಲ್ಲ. ನೀರು ಚರಂಡಿಯೊಳಗೆ ಹೋಗಲು ಸರಿಯಾದ ತೂತುಗಳನ್ನೇ ಇಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ
Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು
Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
MUST WATCH
ಹೊಸ ಸೇರ್ಪಡೆ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ