
ಉಡುಪಿ: 3 ವರ್ಷಗಳ ಬಳಿಕ ಕುಟುಂಬ ಸೇರಿದ ರಾಜಸ್ಥಾನದ ರವಿ ಸಿಂಗ್
Team Udayavani, Jun 1, 2023, 6:40 AM IST

ಉಡುಪಿ: ಮಾನಸಿಕ ಅಸ್ವಸ್ಥಗೊಂಡು 15 ತಿಂಗಳ ಹಿಂದೆ ಬ್ರಹ್ಮಾವರದ ರಾ.ಹೆ. ಪರಿಸರದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಾಜಸ್ಥಾನದ ನಿವಾಸಿ ರವಿ ಸಿಂಗ್ (27) ಮೂರು ವರ್ಷಗಳ ಬಳಿಕ ತನ್ನ ಕುಟುಂಬವನ್ನು ಸೇರುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಈತನಿಗೆ ನೆರವಾಗಿದ್ದರು. 2 ತಿಂಗಳ ಕಾಲ ಚಿಕಿತ್ಸೆ ನೀಡಿದ ಬಾಳಿಗಾ ಆಸ್ಪತ್ರೆ, 6 ತಿಂಗಳ ಕಾಲ ಪುನರ್ವಸತಿ ಕಲ್ಪಿಸಿದ ಮಣಿಪಾಲ ಕೆಎಂಸಿಯ ಅಂಗಸಂಸ್ಥೆ ಹೊಂಬೆಳಕು ಹಾಗೂ ಕೊನೆಯವರೆಗೂ ಆಶ್ರಯ ನೀಡಿದ ಮಂಜೇಶ್ವರ ದೈಗುಳಿಯ ಶ್ರೀಸಾಯಿ ಸೇವಾಶ್ರಮದ ಡಾ| ಉದಯ ಕುಮಾರ್ ನೆರವಾಗಿದ್ದಾರೆ.
ರವಿ ಸಿಂಗ್ ಮನೆ ಬಿಟ್ಟು 3 ವರ್ಷಗಳಾಗಿದ್ದು, ಮಾನಸಿಕ ಅಸ್ವಸ್ಥತೆಯಿಂದ ಉಪ್ಪೂರು ರಾ.ಹೆ. ಬಳಿ ಅಲೆಯುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ವಿಶು ಶೆಟ್ಟಿ ಅವರು ಈತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಪಾಲಕರ ಪತ್ತೆಗೆ ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಮಂಜೇಶ್ವರದ ದೈಗುಳಿ ಶ್ರೀಸಾಯಿ ಸೇವಾಶ್ರಮದಲ್ಲಿ ನಿತ್ಯ ಯೋಗ, ಧ್ಯಾನ ಹಾಗೂ ಔಷಧಕ್ಕೆ ಸ್ಪಂದಿಸಿದ ಆತ ತನ್ನ ಮನೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಅದರಂತೆ ಮುಂಬಯಿಯ ಶ್ರದ್ಧಾ ರಿಹ್ಯಾಬಿಲಿಟೇಶನ್ ಸೆಂಟರ್ ಮೂಲಕ ಆತನ ಹೆತ್ತವರನ್ನು ಪತ್ತೆ ಹಚ್ಚಿ ಮಾಹಿತಿ ನೀಡಲಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

Brahmavar ಸ್ಕೂಟಿ ಢಿಕ್ಕಿ ಹೊಡೆದು ಪಾದಚಾರಿ ಸಾವು

Central Government ಯೋಜನೆಗಳ ಮಾಹಿತಿ ಗ್ರಾ.ಪಂ.ಗಳಲ್ಲೂ ಸಿಗಲಿ: ಸಚಿವೆ ಶೋಭಾ

Cauvery Issue ನೀರು ಹಂಚಿಕೆ ವಿಚಾರದಲ್ಲಿ ವೈಜ್ಞಾನಿಕ ವರದಿ ಅಗತ್ಯ: ಸಚಿವೆ ಶೋಭಾ

Janata Darshan: ಅಧಿಕಾರಿಗಳು ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಬೇಕು: ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ