ಮಳೆಗಾಲದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಆಗ್ರಹ
Team Udayavani, May 14, 2020, 5:54 AM IST
ಬೆಳ್ಮಣ್ : ಇಲ್ಲಿನ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಂದಳಿಕೆ, ಬೆಳ್ಮಣ್, ಇನ್ನಾ, ಬೋಳ ಹಾಗೂ ಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಗಾಲದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದು ಜನ ಆಗ್ರಹಿಸಿದ್ದಾರೆ.
ಪ್ರತೀ ವರ್ಷ ಎಪ್ರಿಲ್ ಮೇ ತಿಂಗಳಲ್ಲಿ ಮಳೆಗಾಲಕ್ಕಾಗಿ ತಯಾರಾಗುತ್ತಿದ್ದ ಗ್ರಾಮ ಪಂಚಾಯತ್ಗಳಲ್ಲಿ, ಈ ಬಾರಿ ಕೋವಿಡ್- 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರ ಕೊರತೆಯಿಂದ ಮಳೆಗಾಲಕ್ಕೆ ಬೇಕಾದ ಚರಂಡಿ ನಿರ್ಮಾಣ ಕಾಮಗಾರಿಗಳು ಬಹುತೇಕ ವಿಳಂಬವಾಗಿದೆ.
ಮಳೆಗಾಲ ಸಿದ್ದತೆಯ ಬಗ್ಗೆ ಹಲವು ಗ್ರಾಮ ಪಂಚಾಯತ್ಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಇನ್ನೂ ಪೂರ್ವ ತಯಾರಿಯನ್ನು ಕೋವಿಡ್- 19 ಪರಿಣಾಮದಿಂದ ಇನ್ನೂ ಆರಂಭಿಸಿಲ್ಲ.
ಮಳೆಗಾಲ ಆರಂಭವಾಗಿ ತೊಂದರೆಯನ್ನು ಅನುಭವಿಸುವುದಕ್ಕಿಂತ ಮೊದಲೇ ಪೂರ್ವ ತಯಾರಿಯನ್ನು ಮಾಡಿಕೊಂಡರೆ ಸುಲಭವಾಗುತ್ತದೆ ಎಂದು ಪ್ರಗತಿಪರ ಕೃಷಿಕ ಜಯರಾಮ ಶೆಟ್ಟಿ ಪೊಸ್ರಾಲು ಹೇಳುತ್ತಾರೆ.
ಕೆಲಸ ಆರಂಭ
ಕೋವಿಡ್- 19 ಲಾಕ್ಡೌನ್ ಹಿನ್ನೆಲೆಯಲ್ಲಿ ಮಳೆಗಾಲ ಮುನ್ನೆಚ್ಚರಿಕೆ ವಿಳಂಬವಾಗಿದೆ. ಈಗಾಗಲೇ ಲಾಕ್ಡೌನ್ ಸಡಿಲಿಕೆಯಾಗಿದ್ದು ಕಾರ್ಮಿಕರನ್ನು ಬಳಸಿ ಚರಂಡಿ ನಿರ್ವಹಣೆಯನ್ನು ಮಾಡುತ್ತೇವೆ.
-ಶುಭಾ ಪಿ.ಶೆಟ್ಟಿ,
ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ