![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Padubidri ಸಂತೆಯಿಂದ ಇಬ್ಬರು ಬಾಲಕಾರ್ಮಿಕರ ರಕ್ಷಣೆ
Team Udayavani, Mar 13, 2024, 12:58 AM IST
![Padubidri ಸಂತೆಯಿಂದ ಇಬ್ಬರು ಬಾಲಕಾರ್ಮಿಕರ ರಕ್ಷಣೆ](https://www.udayavani.com/wp-content/uploads/2024/03/child-620x339.jpg)
ಪಡುಬಿದ್ರಿ: ಇಲ್ಲಿನ ಮಂಗಳವಾರದ ಸಂತೆಯಲ್ಲಿ ಬಾಲಕಾರ್ಮಿಕರು ಹಾಗೂ ಭಿಕ್ಷಾಟನೆ ನಡೆಸುತ್ತಿರುವವರ ಬಗ್ಗೆ ಮಾಹಿತಿ ಪಡೆದ ಕಾಪು ತಹಶೀಲ್ದಾರ್ ಡಾ| ಪ್ರತಿಭಾ ಆರ್. ಅವರು ಮಕ್ಕಳ ರಕ್ಷಣ ಘಟಕ ಸಿಬಂದಿ ಸಹಕಾರದೊಂದಿಗೆ ದಿಢೀರ್ ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕಾರ್ಮಿಕರನ್ನು ರಕ್ಷಿಸಿದರು.
ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸುತ್ತಿದ್ದಾಗ ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಇಬ್ಬರು ಬಾಲಕಾರ್ಮಿಕರು ಪತ್ತೆಯಾದರು. ಇದೇ ವೇಳೆ ಮಕ್ಕಳನ್ನು ಬಳಸಿ ಭಿಕ್ಷಾಟನೆ ನಡೆಸುತ್ತಿರುವುದೂ ಕಂಡು ಬಂದಿದ್ದು, ಅವರು ಅಧಿಕಾರಿಗಳನ್ನು ನೋಡಿ ಅಲ್ಲಿಂದ ಪರಾರಿಯಾದರು.
ಪತ್ತೆಹಚ್ಚಲಾದ ಬಾಲ ಕಾರ್ಮಿಕರನ್ನು ಮಕ್ಕಳ ರಕ್ಷಣ ಘಟಕವು ಮಕ್ಕಳ ಕಲ್ಯಾಣ ಸಮಿತಿ ಮೂಲಕ ಬಾಲಮಂದಿರಕ್ಕೆ ಒಪ್ಪಿಸಲಾಗುವುದು. ಅಲ್ಲಿ ಅವರಿಗೆ ಪುನರ್ವಸತಿ ಕಲ್ಪಿಸುವುದರ ಜತೆಗೆ, ಅವರ ಪಾಲಕರನ್ನು ಕರೆಸಿ ಜಾಗೃತಿ ಮೂಡಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣ ಅಧಿಕಾರಿ ಕಪಿಲಾ, ಸಮಾಜ ಕಾರ್ಯಕರ್ತೆ ಸುರಕ್ಷಾ , ಯೋಗೀಶ್, ಸಂದೇಶ್ ಜತೆಗಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.