ಉಳಿದ ಕಾಮಗಾರಿಗೆ ಮಳೆಗಾಲ ಅಡ್ಡಿ ಸಾಧ್ಯತೆ: ಜೆಜೆಎಂ ಕಾಮಗಾರಿ ಶೇ.77ರಷ್ಟು ಪೂರ್ಣ


Team Udayavani, Jun 2, 2023, 3:37 PM IST

ಉಳಿದ ಕಾಮಗಾರಿಗೆ ಮಳೆಗಾಲ ಅಡ್ಡಿ ಸಾಧ್ಯತೆ: ಜೆಜೆಎಂ ಕಾಮಗಾರಿ ಶೇ.77ರಷ್ಟು ಪೂರ್ಣ

ಉಡುಪಿ: ಜಿಲ್ಲೆಯಲ್ಲಿ ಜಲ ಜೀವನ್‌ಮಿಷನ್‌(ಜೆಜೆಎಂ) ಕಾಮಗಾರಿಯು ಈವರೆಗೆ ಶೇ.77.07ರಷ್ಟು ಪೂರ್ಣಗೊಂಡಿದ್ದು, 2024ರವೇಳೆಗೆ ಶೇ.100ರಷ್ಟು ಕಾಮಗಾರಿ ಪೂರ್ಣವಾದರೂ ನಳ್ಳಿ ಸಂಪರ್ಕ ಪಡೆದ ಎಲ್ಲ ಮನೆಗಳಿಗೂ ನೀರು ಸಿಗಲು 2025ರ ವರೆಗೂ ಕಾಯಲೇ ಬೇಕು.

ಚುನಾವಣೆ ನೀತಿ ಸಂಹಿತೆಯಿಂದ ವಿಳಂಬವಾಗಿರುವ ಜೆಜೆಎಂ ಕಾಮಗಾರಿಯು ಚುನಾವಣೆ ಅನಂತರ ಚುರುಕು ಪಡೆದಿದೆ. ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಲ್ಲೂ ಜೆಜೆಎಂ ಕಾಮಗಾರಿ ನಡೆಯುತ್ತಿದೆ ಮತ್ತು ಪೈಪ್‌ಲೈನ್‌ ಅವಳವಡಿಸುವ ಕಾರ್ಯವೂ ನಡೆಯುತ್ತಿದೆ. ಆದರೆ, ಹಲವು ಕಡೆಗಳಲ್ಲಿ ಇನ್ನೂ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ, ಓವರ್‌ ಹೆಡ್‌ ಟ್ಯಾಂಕ್‌ಗೆ ನೀರಿನ ಮೂಲ ಪತ್ತೆ ಹಚ್ಚುವುದು ಇತ್ಯಾದಿಗಳು ಇನ್ನೂ ಪೂರ್ಣವಾಗಿಲ್ಲ. ಹೀಗಾಗಿ ಜೆಜೆಎಂ ಕಾಮಗಾರಿ ಪೂರ್ಣವಾದ ಕೂಡಲೇ ಮನೆ ಮನೆಗೆ ನಳ್ಳಿ ಮೂಲಕ ನೀರು ಬರಲಿದೆ ಎಂದು ಹೇಳಲು ಸಾಧ್ಯವಿಲ್ಲ. ಶೇ.100ರಷ್ಟು ಮನೆ ಮನೆಗೆ ನಳ್ಳಿ ಸಂಪರ್ಕವಾದ ಅನಂತರದಲ್ಲೂ ನೀರಿನ ಪೂರೈಕೆ ಏಕಕಾಲದಲ್ಲಿ ಆಗಲಿದೆ ಎನ್ನಲು ಸಾಧ್ಯವಿಲ್ಲ. ಒಮ್ಮೆ ನೀರಿನ ವ್ಯವಸ್ಥೆ ಎಲ್ಲೆಡೆಯಲ್ಲೂ ಸರಿಯಾದ ಅನಂತರದಲ್ಲಿ ಮನೆ ಮನೆಗೆ ನಿತ್ಯವೂ ನೀರು ಸಿಗಲಿದೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯವಾಗಿದೆ.

ಜಿಲ್ಲೆಯ 155 ಗ್ರಾ.ಪಂ.ಗಳ 246 ಹಳ್ಳಿಗಳ 3402 ಜನ ವಸತಿ ಪ್ರದೇಶಕ್ಕೆ ಜೆಜೆಎಂ ಮೂಲಕ ಮನೆ ಮನೆಗೆ ನೀರು ಸರಬರಾಜು ಮಾಡಲಾಗುತ್ತದೆ. ಇದರಡಿಯಲ್ಲಿ ಜಿಲ್ಲೆಯ 2,47,190 ಮನೆಗಳಿಗೆ ನೇರವಾಗಿ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ. ಈವರೆಗೂ ಜಿಲ್ಲೆಯ 1,90,505 ಮನೆಗಳಿಗೆ ನಳ್ಳಿ ಸಂಪರ್ಕ ನೀಡಲಾಗಿದೆ. ಅಂದರೆ, ಶೇ.77.01ರಷ್ಟು ಮನೆಗಳಿಗೆ ನಳ್ಳಿ ಸಂಪರ್ಕ ಕಲ್ಪಿಸಲಾಗಿದೆ. ಜಿಲ್ಲೆಯ 56,685 ಮನೆಗಳಿಗೆ (ಶೇ.22.99ರಷ್ಟು ) ಪೈಪ್‌ಲೈನ್‌ ಸಂಪರ್ಕ ನೀಡಲು ಬಾಕಿಯಿದೆ.

ಜಿಲ್ಲೆಯಲ್ಲಿ ಜೆಜೆಎಂ ಅಡಿಯಲ್ಲಿ ಮೂರು ಹಂತದಲ್ಲಿ 527 ಕಾಮಗಾರಿಗಳು ನಡೆಯುತ್ತಿದೆ. ಇದರಲ್ಲಿ 170 ಕಾಮಗಾರಿ ನಡೆಯುತ್ತಿದ್ದು, 346 ಕಾಮಗಾರಿ ಪೂರ್ಣಗೊಂಡಿದೆ. (ಸುಮಾರು 11 ಕಾಮಗಾರಿ ಇನ್ನಷ್ಟೆ ಆರಂಭವಾಗಬೇಕಿದೆ). ಜಿಲ್ಲೆಯಲ್ಲಿ ಅಂದಾಜು 682 ಕೋ.ರೂ. ವೆಚ್ಚದಲ್ಲಿ ಜೆಜೆಎಂ ಕಾಮಗಾರಿ ಪೂರ್ಣ ಪ್ರಮಾಣದಲ್ಲಿ ನಡೆಯಲಿದೆ. ಈಗಾಗಲೇ 169.66 ಕೋ.ರೂ.ಗಳನ್ನು ವೆಚ್ಚ ಮಾಡಲಾಗಿದೆ. ಒಟ್ಟಾರೆ ಮೀಸಲಿರಿಸಿರುವ ಅನುದಾನದಲ್ಲಿ ಶೇ.25ರಷ್ಟು ಈಗಾಗಲೇ ವೆಚ್ಚ ಮಾಡಲಾಗಿದೆ.

ಮಳೆಗಾಲದಲ್ಲಿ ವಿಳಂಬ ಸಾಧ್ಯತೆ
ಜೆಜೆಎಂ ಅಡಿಯಲ್ಲಿ ಈಗಾಗಲೇ ಪೂರ್ಣ ಪ್ರಮಾಣದ ಕಾಮಗಾರಿ ಮುಗಿದು ಮನೆ ಮನೆಗೆ ನೀರು ಪೂರೈಕೆ ಆರಂಭವಾಗಬೇಕಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ಒಂದು ವರ್ಷ ಸರಿಯಾಗಿ ಕಾಮಗಾರಿ ನಡೆದಿಲ್ಲ. ಕೊರೊನಾ ಅನಂತರ ಕಾಮಗಾರಿ ಚುರುಕುಗೊಂಡರೂ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಚುನಾವಣೆ ನೀತಿ ಸಂಹಿತೆಯಿಂದ ಇನ್ನಷ್ಟು ವಿಳಂಬವಾಗಿದೆ. ಜೂನ್‌ ತಿಂಗಳಲ್ಲಿ ಮಳೆ ಆರಂಭವಾಗಲಿದೆ. ಸೆಪ್ಟೆಂಬರ್‌ ವರೆಗೂ ಮಳೆ ಹೆಚ್ಚಿರಲಿದೆ. ಮಳೆಗಾಲದಲಿ ಪೈಪ್‌ಲೈನ್‌ ಕಾಮಗಾರಿ ಅಸಾಧ್ಯ. ಹೀಗಾಗಿ ಈ ವರ್ಷವೂ ಜೆಜೆಎಂ ಕಾಮಗಾರಿ ಸ್ಪಷ್ಟ ವಿಳಂಬವಾಗುವ ಸಾಧ್ಯತೆಯಿದೆ.

ಶೇ. 86ರಷ್ಟು ಕಾಮಗಾರಿ ಪೂರ್ಣ ದ.ಕ.ದಲ್ಲಿ ಜೆಜೆಎಂ ಅಡಿಯಲ್ಲಿ 3,34,184 ಮನೆಗಳಿಗೆ ನಳ್ಳಿ ಮೂಲಕ ನೀರು ಪೂರೈಸಲು ಗುರಿ ಹೊಂದಲಾಗಿದೆ. ಇದರಲ್ಲಿ 2,88,953 ಮನೆಗಳಿಗೆ ಈಗಾಗಲೇ ನೀರು ಪೂರೈಕೆಗೆ ಬೇಕಾದ ನಳ್ಳಿ ಸಂಪರ್ಕ ಕಲ್ಪಿಸಲಾಗಿದೆ. ಶೇ. 86.47ರಷ್ಟು ಕಾಮಗಾರಿಯು ಪೂರ್ಣಗೊಂಡಿದೆ. 62 ಹಳ್ಳಿಗಳಿಗೆ ಶೇ.100ರಷ್ಟು ನಳ್ಳಿ ಸಂಪರ್ಕ ಕಲ್ಪಿಸಲಾಗಿದೆ.

ತ್ವರಿತ ಕಾಮಗಾರಿ
ಜೆಜೆಎಂ ಕಾಮಗಾರಿ ಪೂರ್ಣ
ಮುಗಿದ ತತ್‌ಕ್ಷಣವೇ ಎಲ್ಲ ಮನೆಗಳಿಗೂ ನೀರು ಪೂರೈಕೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ನೀರು ಸಂಗ್ರಹದ ಟ್ಯಾಂಕ್‌ ನಿರ್ಮಾಣ ಸಹಿತವಾಗಿ ಟ್ಯಾಂಕ್‌ಗೆ ನೀರು ಪೂರೈಸಲು ಎಲ್ಲ ವ್ಯವಸ್ಥೆಯಾದ ಅನಂತರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನೆ ಮನೆಗೆ ನಳ್ಳಿ ಮೂಲಕ ನೀರು ಪೂರೈಕೆಯಾಗಲಿದೆ. ಜೆಜೆಎಂ ಕಾಮಗಾರಿ ವೇಗವಾಗಿ ಸಾಗುತ್ತಿದೆ.
ಪ್ರಸನ್ನ ಎಚ್‌., ಜಿ.ಪಂ. ಸಿಇಒ, ಉಡುಪಿ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.