ಬೀಡಿನಗುಡ್ಡೆ: ಚಿನ್ನದ ಗಟ್ಟಿ ದರೋಡೆ
ಅಂಗಡಿ ಶಟರ್ ಬೀಗ ತೆಗೆಯುವಾಗ ಘಟನೆ; 45 ಲಕ್ಷ ರೂ. ಮೌಲ್ಯದ ಚಿನ್ನ
Team Udayavani, May 26, 2020, 8:28 AM IST
ಸಾಂದರ್ಭಿಕ ಚಿತ್ರ
ಉಡುಪಿ: ಚಿನ್ನದ ವ್ಯಾಪಾರಿಯೋರ್ವರಿಂದ ಚಿನ್ನದ ಗಟ್ಟಿ ದೋಚಿದ ಘಟನೆ ಬೀಡಿನಗುಡ್ಡೆ ಜಂಕ್ಷನ್ ಬಳಿ ಸಂಭವಿಸಿದೆ. ಬೀಡಿನಗುಡ್ಡೆಯ ವಿಜಯ್ ಜಾಧವ್ ಅವರು ಬೀಡಿನಗುಡ್ಡೆಯ ಸರ್ಕಲ್ ಬಳಿಯ ಲಕ್ಷ್ಮೀ ಟ್ರೇಡರ್ಸ್ ಸೆಂಟರ್ನ 2ನೇ ಮಹಡಿಯಲ್ಲಿನ ಅಂಗಡಿಯಲ್ಲಿ ಹಳೆಯ ಚಿನ್ನವನ್ನು ಕರಗಿಸಿ, ಚಿನ್ನದ ಗಟ್ಟಿಗಳನ್ನಾಗಿಸುವ ಕೆಲಸವನ್ನು ಮಾಡಿಕೊಂಡಿದ್ದರು.
ಮಾಸ್ಕ್, ಹೆಲ್ಮೆಟ್ ಧರಿಸಿದ್ದರು
ಮೇ 25ರಂದು ಚಿನ್ನದ ಕೆಲಸಗಾರರು ಮತ್ತು ಚಿನ್ನದ ವ್ಯಾಪಾರಿಗಳಿಂದ ಪಡೆದ ಹಳೆಯ ಚಿನ್ನವನ್ನು ಕರಗಿಸಿ, ಗಟ್ಟಿಗಳನ್ನಾಗಿ ಮಾಡಿಕೊಂಡಿದ್ದ 45 ಲಕ್ಷ ರೂ. ಮೌಲ್ಯದ ಅಂದಾಜು 1 ಕೆ.ಜಿ. 227 ಗ್ರಾಂ ತೂಕದ ಚಿನ್ನವನ್ನು ಒಂದು ವಯರ್ ಚೀಲದಲ್ಲಿ ಹಾಕಿಕೊಂಡು ಬೆಳಗ್ಗೆ ಅಂಗಡಿಯ ಶಟರ್ ಬೀಗವನ್ನು ತೆಗೆಯುವಾಗ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿದ ಇಬ್ಬರು ಅಪರಿಚಿತರು ಇವರ ಬಳಿಯಿದ್ದ ಚಿನ್ನದ ಗಟ್ಟಿ ಇರುವ ಚೀಲವನ್ನು ಬಲಾತ್ಕಾರವಾಗಿ ಕಿತ್ತುಕೊಂಡು ಓಡಿಹೋಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ