ವಂಡ್ಸೆ:ಮಹಿಳೆ ಜತೆ ಅಸಭ್ಯ ವರ್ತನೆ,ಆಕ್ರೋಶ;ಉದ್ವಿಗ್ನ ಸ್ಥಿತಿ
Team Udayavani, Mar 9, 2018, 10:18 AM IST
ಕುಂದಾಪುರ: ವಂಡ್ಸೆ ಕೆಳಪೇಟೆಯಲ್ಲಿ ಚಪ್ಪಲಿ ಖರೀದಿಗೆ ಬಂದ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ಅಂಗಡಿ ಮಾಲಕನ ವಿರುದ್ಧ ಗುರುವಾರ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸದ್ದಾಂನನ್ನು ಬಂಧಿಸಲು ಆಗ್ರಹಿಸಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪೇಟೆಯಲ್ಲಿ ಜಮಾಯಿಸಿದ್ದರು.
ಬುಧವಾರ ಸಂಜೆ ಘಟನೆ ಸಂಭ ವಿಸಿದ್ದು, ಗುರುವಾರ ಅಂಗಡಿಗೆ ಬಾಗಿಲು ಹಾಕಿ ಆರೋಪಿ ಪರಾರಿ ಯಾಗಿದ್ದ. ಇದರಿಂದ ಆಕ್ರೋಶ ಗೊಂಡ ಬಿಜೆಪಿ ಕಾರ್ಯಕರ್ತರು ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ವಂಡ್ಸೆ ಪೇಟೆಯಲ್ಲಿ ಸೇರಿದ್ದರು.
ಆರೋಪಿ ಬಂಧನಕ್ಕೆ ಗಡುವು
ಆರೋಪಿಯನ್ನು ಶುಕ್ರವಾರ ಮಧ್ಯಾಹ್ನದೊಳಗೆ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ತಿಳಿಸಿವೆ. ಭದ್ರತೆಗಾಗಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಖಂಡನೆ
ಅನ್ಯಕೋಮಿನ ವ್ಯಕ್ತಿಯು ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿರುವುದು ರಾಜ್ಯದ ಕಾನೂನು ಅವ್ಯವಸ್ಥೆಗೆ ಹಿಡಿದ ಕನ್ನಡಿ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದ್ದಾರೆ. ಅವರು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್