ಬಾಂದು ಜವಾನರಿಗೆ 10 ತಿಂಗಳಿಂದ ವೇತನವಿಲ್ಲ


Team Udayavani, Mar 5, 2019, 4:21 AM IST

survey.jpg

ಮಣಿಪಾಲ: ಸುಡು ಬಿಸಿಲಿನಲ್ಲಿ ಚೈನ್‌ ಎಳೆದು ಭೂ ಮಾಪನ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸುವ ನೂರಾರು ಬಾಂದು ಜವಾನರು 10 ತಿಂಗಳಿಂದ ವೇತನವಿಲ್ಲದೆ ಪರದಾಡುತ್ತಿದ್ದಾರೆ.

ಕಂದಾಯ ಸಚಿವರು, ಭೂ ದಾಖಲೆಗಳ ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಉಡುಪಿ ಜಿಲ್ಲೆಯ 41 ಮಂದಿ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳ ಬಾಂದು ಜವಾನರದ್ದೂ ಇದೇ ಪರಿಸ್ಥಿತಿ. ಭೂ ಮಾಪಕರೊಂದಿಗೆ ಸರ್ವೇ ಕಾರ್ಯಕ್ಕೆ ತೆರಳುವ ಬಾಂದು ಜವಾನರು ಅಳತೆಗೆ ಚೈನ್‌ ಹಿಡಿಯುವ ಕೆಲಸ ಮಾಡುತ್ತಾರೆ. ಇದರ ಜತೆಗೆ ಸರ್ವೇ ಸಂಬಂಧ ಅರ್ಜಿದಾರರಿಗೆ ಮತ್ತು ಸಂಬಂಧಪಟ್ಟವರಿಗೆ ತಿಳಿವಳಿಕೆ ಪತ್ರ ನೀಡುವುದು ಸಹಿತ ಇತರ ಕಚೇರಿ ಕೆಲಸಗಳನ್ನೂ ಮಾಡುತ್ತಾರೆ. ಬಾಂದು ಜವಾನರನ್ನು ಗುತ್ತಿಗೆ ಕಂಪೆನಿಗಳಿಂದ ನೇಮಿಸಲಾಗುತ್ತದೆ. ಒಪ್ಪಂದದ ಅವಧಿ ಇರುವ ವರೆಗೆ ಅವರು ನಿಗದಿತ ಜಿಲ್ಲೆಗಳಲ್ಲಿ ಭೂ ದಾಖಲೆಗಳ ಉಪ ನಿರ್ದೇಶಕರ ಅಧೀನದಲ್ಲಿ ತಾಲೂಕುಗಳಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಾರೆ. 

ಹಿಂದಿನ ವ್ಯವಸ್ಥೆ ಹೇಗೆ?
ಭೂಮಾಪನ ಇಲಾಖೆ ಆಯುಕ್ತಾಲಯದಿಂದ ಗುತ್ತಿಗೆದಾರ ಏಜಿನ್ಸಿಗಳಿಗೆ ಬಾಂದು ಜವಾನರ ವೇತನಾ ನುದಾನ ಬಿಡುಗಡೆಯಾಗುತ್ತಿತ್ತು. ಸಂಸ್ಥೆ ಯವರು ಇಎಸ್‌ಐ/ಪಿಎಫ್ ಹಾಗೂ ತಮ್ಮ ನಿರ್ವಹಣಾ ಶುಲ್ಕವನ್ನು ಕಡಿತ ಮಾಡಿ ವೇತನ ನೀಡುತ್ತಿದ್ದರು. ಆದರೆ ಈ ಸಂಸ್ಥೆಗಳು ವೇತನ ಬಟವಾಡೆ ಮಾಡುವಲ್ಲಿ ಅಸಮರ್ಪಕತೆ ತೋರಿದ್ದರ ಜತೆಗೆ ನಿಯಮಿತವಾಗಿ ನೀಡುತ್ತಿರಲಿಲ್ಲ. ಎಂಟು ತಿಂಗಳಿಂದ ಬಾಕಿ ಇರಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಆಯುಕ್ತಾಲಯವು, ಇಎಸ್‌ಐ/ಪಿಎಫ್ ಮೊತ್ತ ಮತ್ತು ಶೇ. 10 ನಿರ್ವಹಣಾ ಶುಲ್ಕವನ್ನು ಬಾಂದು ಜವಾನರ ವೇತನದಿಂದ ಕಡಿತಗೊಳಿಸಿ ಅದನ್ನು ಏಜೆನ್ಸಿಗೆ ಪಾವತಿ ಮಾಡಿ, ವೇತನವನ್ನು ನೇರವಾಗಿ ಬಾಂದು ಜವಾನರ ಖಾತೆಗೆ ಸಂದಾಯ ಮಾಡಲು ನಿರ್ಧರಿಸಿತು. ಈ ಕ್ರಮ ಡಿಸೆಂಬರ್‌ನಿಂದ ಅನುಷ್ಠಾನವಾಗಿದ್ದರೂ, 2 ತಿಂಗಳ ವೇತನ ಪಾವತಿಯಾಗಿಲ್ಲ. ಹಾಗಾಗಿ ಒಟ್ಟು 10 ತಿಂಗಳಿಂದ ಬಾಂದು ಜವಾನರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. 

ಇಎಸ್‌ಐ/ಪಿಎಫ್ ಪಾವತಿ ವ್ಯತ್ಯಯ
ಸರಕಾರದಿಂದ ಹಣ ಬಂದಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಸಂಸ್ಥೆಯು ಬಾಂದು ಜವಾನರ ಇಎಸ್‌ಐ, ಪಿಎಫ್ ನಿಯಮಿತವಾಗಿ ಪಾವತಿಸುತ್ತಿಲ್ಲ. ಇದರಿಂದ ಕ್ಲೇಮಿಗೆ ಸಮಸ್ಯೆಯಾಗುತ್ತಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ಓರ್ವ ಬಾಂದು ಜವಾನ ಸರ್ವೇ ವೇಳೆ ಬಿದ್ದು ಮೊಣಕಾಲು ಮುರಿದುಕೊಂಡಿದ್ದರು. ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾಯಿತು. ಇಎಸ್‌ಐ ಪಾವತಿ ಸರಿಯಾಗಿ ಇಲ್ಲದ ಕಾರಣ ಕ್ಲೇಮಿಗೆ ತೊಂದರೆಯಾಗಿ ಏಜೆನ್ಸಿಗೆ ತೆರಳಿ ಪಾವತಿ ಮಾಡಿಸ ಬೇಕಾಯಿತು.  

ಬಾಂದು ಜವಾನರ ಹಾಜರಾತಿ ಅಪ್ಡೆಟ್‌ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ. ವೇತನ ಬಾಕಿಯ ಮಾಹಿತಿಯನ್ನೂ ರವಾನಿಸಲಾಗಿದೆ. ಶೀಘ್ರ ಸಮಸ್ಯೆ ಬಗೆಹರಿಯಲಿದೆ. 
ಕುಸುಮಾಧರ್‌, ಡಿಡಿಎಲ್‌ಆರ್‌, ಉಡುಪಿ ಜಿಲ್ಲೆ

ಅಶ್ವಿ‌ನ್‌ ಲಾರೆನ್ಸ್‌ ಮೂಡುಬೆಳ್ಳೆ

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.